ತೊಕ್ಕೊಟ್ಟು: ರೈಲಿಗೆ ತಲೆಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಉಳ್ಳಾಲ: ಎಂಜಿನಿಯರಿಂಗ್ ವಿದ್ಯಾರ್ಥಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ- ಸೋಮೇಶ್ವರ ರೈಲು ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬೆಳಗಾವಿಯ ಸಮ್ಮದ್ ರಾಯಗೌಡ(23) ಎಂದು ಗುರುತಿಸಲಾಗಿದೆ.
ಬೆಳಗಾವಿ ಅಥಿನಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಯಾಗಿದ್ದ ಈತ ಎರಡು ದಿನಗಳ ಹಿಂದಷ್ಟೇ ಮನೆಯಿಂದ ನಾಪತ್ತೆ ಯಾಗಿದ್ದ. ಈ ಬಗ್ಗೆ ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ ಆತನಿಗಾಗಿ ಹುಡುಕಾಟ ನಡೆಸಿದ್ದರು.
ಡೆತ್ ನೋಟ್ ಬರೆದಿದ್ದ
ಆತ್ಮ ಹತ್ಯೆ ಗೈದ ಇಂಜಿನಿಯರಿಂಗ್ ವಿದ್ಯಾರ್ಥಿ ಬೆಳಗಾವಿಯ ಸಮ್ಮದ್ ರಾಯಗೌಡ ಜೇಬಿನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದು, ಅದು ರೈಲ್ವೆ ಪೊಲೀಸರಿಗೆ ಸಿಕ್ಕಿದೆ. ಅದರಲ್ಲಿ ಆತ್ಮಹತ್ಯೆ ಗೆ ನಾನೇ ಕಾರಣ ಎಂದು ಬರೆದಿದ್ದಾನೆ. ಅಲ್ಲದೇ ಪರ್ಸ್, ಮೊಬೈಲ್ ಕೂಡ ಪೊಲೀಸರಿಗೆ ಲಭಿಸಿದ್ದು, ಅದರಲ್ಲಿ ವಿದ್ಯಾರ್ಥಿ ಯು ಪೋಷಕರ ಮೊಬೈಲ್ ನಂಬರ್ ಪೊಲೀಸರು ಪತ್ತೆ ಹಚ್ಚಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.