Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ...

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಣ್ಮರೆಯಾಗಿದೆ: ಸಿಎಂ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್

ವಾರ್ತಾಭಾರತಿವಾರ್ತಾಭಾರತಿ28 Feb 2020 11:30 PM IST
share
ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕಣ್ಮರೆಯಾಗಿದೆ: ಸಿಎಂ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್

ಮೈಸೂರು,ಫೆ.28: ಪ್ರಸಕ್ತ ದಿನದಲ್ಲಿ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯು ಕಣ್ಮರೆಯಾಗಿ ಸಂತತಿಯ ಆಡಳಿತ ಹೆಚ್ಚಾಗಿದ್ದು, ಇದು ಸದಾ ಕಾಲ ಮುಂದುವರಿದರೆ ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಾಯಕಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್ ಅಭಿಪ್ರಾಯಪಟ್ಟರು.

ಮಹಾರಾಜ ಕಾಲೇಜು ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಜೂನಿಯರ್ ಬಿಎ ಹಾಲ್‍ನಲ್ಲಿ ಆಯೋಜಿಸಿದ್ದ ಭಾರತೀಯ ರಾಜಕಾರಣ ಎತ್ತ ಸಾಗುತ್ತಿದೆ ಎಂಬ ವಿಷಯ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತದ ರಾಜಕೀಯ ಇತಿಹಾಸ ನೋಡುವಾಗ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನಶಿ ಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ದೃಷ್ಟಿಕೋನದಿಂದ ನೋಡಬೇಕಾಗಿದೆ. ಇವರಿಬ್ಬರೂ ಭಾರತೀಯ ರಾಜಕಾರಣದ ಧ್ರುವತಾರೆಗಳು. ಮೊದಲ ಪ್ರಧಾನಿ ಪಂಡಿತ್ ಜವಾಹರ ಲಾಲ್ ನೆಹರು ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ನಂತರದಲ್ಲಿ ಬಂದ ಪ್ರಧಾನಿಗಳು ಒಂದಲ್ಲಾ ಒಂದು ರೀತಿಯಲ್ಲಿ ಬುನಾದಿಯನ್ನ ಗಟ್ಟಿಮಾಡುವ ಕೆಲಸ ಮಾಡಿದ್ದಾರೆ ಎಂದು ವಿಶ್ಲೇಷಿಸಿದರು.

ದೇಶದ ರಾಜಕೀಯ ಚಿತ್ರವಣವೇ ಬದಲಾಗಿದ್ದು, ಒಬ್ಬ ಪ್ರಭಾವಿ ರಾಜಕಾರಣೀಯ ಮಗನ ವಿರುದ್ದ ಒಬ್ಬ ಸಾಮಾನ್ಯ ವ್ಯಕ್ತಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ದೂರದ ಮತ್ತು ಕನಸಿನ ಮಾತಾಗಿದೆ. ಆದ್ದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಚುನಾವಣೆಯಲ್ಲಿ ಗೆಲ್ಲುವಂತಹ ವಾತವರಣ ದೇಶದಲ್ಲಿ ಇಂದು ಸೃಷ್ಟಿಯಾಗಬೇಕಿದೆ. ಸಾಮಾನ್ಯ ವ್ಯಕ್ತಿಯು ಹಣ, ಜಾತಿ, ತೋಳ್ಬಲದ ಸಹಾಯ ಇಲ್ಲದೆ ಜನರಿಂದ ಆರಿಸಿಹೋಗುವ ಪರಿಸ್ಥಿತಿ ಬರಬೇಕಿದೆ ಎಂದರು.

ಸ್ವಾತಂತ್ರ್ಯ ನಂತರ ಗಣರಾಜ್ಯವಾದ ನಮ್ಮ ದೇಶವು ಸಂವಿಧಾನವನ್ನು ಒಪ್ಪಿಕೊಂಡಿತು. ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವದ ಕಡೆ ಹೊರಳಿದ ಭಾರತದಲ್ಲಿ ಇಂದು ಪ್ರಜಾಪ್ರಭುತ್ವವೇ ಮರಣ ಹೊಂದಿದೆ. ಸಂತತಿಯ (ಕುಟುಂಬ) ಆಡಳಿತ ಜಾರಿಗೆ ಬಂದಿದೆ ಎಂದರು.

ಭಾರತ ಸಂವಿಧಾನದ 356 ನೇ ವಿಧಿಯನ್ನು ಇಂದು ಎಲ್ಲಾ ಪಕ್ಷಗಳು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳ ಸರಕಾರವನ್ನು ವಜಾಗೊಳಿಸಿವೆ. ಭಾರತದ ಜನತೆಗೆ ಇಂದು ಪ್ರಬಲವಾದ ಪಕ್ಷಗಳ ಅಗತ್ಯತೆ ಇದೆ. ಇಂದು ಭಾರತದಲ್ಲಿ ಸಂತತಿಯ ಆಡಳಿತ ಹಾಗೂ ಬಂಡವಾಳಶಾಯಿಯ ಪ್ರಭುತ್ವದಿಂದ ಭಾರತೀಯ ರಾಜಕೀಯ ವ್ಯವಸ್ಥೆ ನೆಲಕಚ್ಚಿ ಪ್ರಜಾಪ್ರಭುತ್ವ ವಿನಾಸದತ್ತ ಸಾಗುತ್ತಿದೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.

ಪತ್ರಿಕೋದ್ಯಮ ಕ್ಷೇತ್ರವು ಸಮಾಜದ ಬೆಳವಣಿಗೆ ಹಿನ್ನೆಲೆಯಲ್ಲಿ ಜವಾಬ್ದಾರಿಯುತ ಸ್ಥಾನ ನಿರ್ವಹಿಸಬೇಕಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾರತ ದೇಶದ ರಾಜಕೀಯ ಜೂತೆ ಭಾರತ ದೇಶದ ಪತ್ರಿಕೋದ್ಯಮದ ಇತಿಹಾಸವನ್ನು ತಿಳಿದುಕೊಂಡು ಸಮಾಜದ ಕನ್ನಡಿಯಾಗಬೇಕು. ಸಮಸ್ಯೆಗಳನ್ನು ಜಗತ್ತಿಗೆ ಪರಿಚಯಿಸುವಂತಹ ಸಾಹಸಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಮಹಾರಾಜ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅನಿಟಾ ವಿಮಲಾ ಬ್ರಾಗ್ಸ್, ಆಡಳಿತಾಧಿಕಾರಿ ಡಾ.ಜಿ.ಎಚ್. ನಾಗರಾಜ್, ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಡಾ. ಪ್ರಮೀಳಾ ಬಿ. ಕುನ್ನೂರು, ಅಧ್ಯಾಪಕ ಡಾ. ಗೋಪಾಲ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X