Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. Breaking News: ಐತಿಹಾಸಿಕ ಶಾಂತಿ...

Breaking News: ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕ-ತಾಲಿಬಾನ್

14 ತಿಂಗಳುಗಳಲ್ಲಿ ಅಫ್ಘಾನ್ ನಿಂದ ಅಮೆರಿಕ ಸೇನೆ ವಾಪಸ್

ವಾರ್ತಾಭಾರತಿವಾರ್ತಾಭಾರತಿ29 Feb 2020 7:21 PM IST
share
Breaking News: ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕ-ತಾಲಿಬಾನ್

ದೋಹಾ (ಕತರ್), ಫೆ. 29: ಅಫ್ಘಾನಿಸ್ತಾನದಿಂದ ಅಮೆರಿಕ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳುವುದಕ್ಕೆ ಸಂಬಂಧಿಸಿದ ಮಹತ್ವದ ಒಪ್ಪಂದವೊಂದಕ್ಕೆ ಅಮೆರಿಕ ಶನಿವಾರ ತಾಲಿಬಾನ್ ಜೊತೆಗೆ ಸಹಿ ಹಾಕಿದೆ. ಅಫ್ಘಾನಿಸ್ತಾನದಿಂದ ಅಮೆರಿಕದ ಎಲ್ಲ ಸೈನಿಕರನ್ನು 14 ತಿಂಗಳುಗಳಲ್ಲಿ ವಾಪಸ್ ಕರೆಸಿಕೊಳ್ಳುವುದಕ್ಕೆ ಸಂಬಂಧಿಸಿದ ವೇಳಾಪಟ್ಟಿಯನ್ನು ಒಪ್ಪಂದ ಒಳಗೊಂಡಿದೆ.

ಒಪ್ಪಂದದ ಹಿನ್ನೆಲೆಯಲ್ಲಿ, ಅಫ್ಘಾನಿಸ್ತಾನ ಸರಕಾರ ಮತ್ತು ತಾಲಿಬಾನ್ ನಡುವೆ ಮಾತುಕತೆ ನಡೆಯುವುದೆಂದು ನಿರೀಕ್ಷಿಸಲಾಗಿದೆ. ಮಾತುಕತೆ ಯಶಸ್ವಿಯಾದರೆ 18 ವರ್ಷಗಳ ಭೀಕರ ರಕ್ತಪಾತಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.

ಕತರ್ ರಾಜಧಾನಿ ದೋಹಾದ ವಿಲಾಸಿ ಹೊಟೇಲೊಂದರಲ್ಲಿ ತಾಲಿಬಾನ್ ಪರವಾಗಿ ಅದರ ಸಂಧಾನಕಾರ ಮುಲ್ಲಾ ಬರಾದರ್ ಮತ್ತು ಅಮೆರಿಕ ಪರವಾಗಿ ಅದರ ಮುಖ್ಯ ಸಂಧಾನಕಾರ ಝಲ್ಮಾಯ್ ಖಲೀಲ್‌ ಝಾದ್ ಒಪ್ಪಂದಕ್ಕೆ ಸಹಿ ಹಾಕಿದರು. ಬಳಿಕ ಇಬ್ಬರು ಕೈಕುಲುಕಿದರು.

ಅಮೆರಿಕದ ವಿದೇಶ ಕಾರ್ಯದರ್ಶಿ ಮೈಕ್ ಪಾಂಪಿಯೊ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಲ್-ಖಾಯಿದದೊಂದಿಗಿನ ಸಂಬಂಧವನ್ನು ಕಡಿಗೊಳಿಸುವ ನಿಮ್ಮ ಭರವಸೆಯನ್ನು ಉಳಿಸಿಕೊಳ್ಳಿ ಎಂದು ಅವರು ಈ ಸಂದರ್ಭದಲ್ಲಿ ತಾಲಿಬಾನನ್ನು ಒತ್ತಾಯಿಸಿದರು.

ಆದರೆ, ಅಮೆರಿಕ-ತಾಲಿಬಾನ್ ನೇರೆ ಮಾತುಕತೆಯಿಂದ ಹೊರಗಿದ್ದ ಅಫ್ಘಾನ್ ಸರಕಾರದ ನಿಲುವು ಏನು ಎನ್ನುವುದು ಸ್ಪಷ್ಟವಾಗಿಲ್ಲ. ಅದೇ ವೇಳೆ, ಚುನಾವಣಾ ಫಲಿತಾಂಶದಲ್ಲಿನ ವಿವಾದದಿಂದಾಗಿ ದೇಶದಲ್ಲಿ ಹೊಸದಾಗಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ.

ಒಪ್ಪಂದದ ಶರತ್ತುಗಳಿಗೆ ಅನುಗುಣವಾಗಿ ತಾಲಿಬಾನ್ ನಡೆದರೆ, ಅಮೆರಿಕ ಮತ್ತು ಅದರ ಮಿತ್ರ ದೇಶಗಳು ಅಫ್ಘಾನಿಸ್ತಾನದಲ್ಲಿರುವ ತಮ್ಮ ಎಲ್ಲ ಪಡೆಗಳನ್ನು 14 ತಿಂಗಳುಗಳಲ್ಲಿ ಹಿಂದಕ್ಕೆ ಪಡೆದುಕೊಳ್ಳಲಿವೆ.

 2001 ಸೆಪ್ಟಂಬರ್ 11ರಂದು ಅಮೆರಿಕದ ಮೇಲೆ ಭಯೋತ್ಪಾದಕ ದಾಳಿ ನಡೆದ ಬಳಿಕ, ಅಮೆರಿಕವು ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿ ಅದರ ತಾಲಿಬಾನ್ ಸರಕಾರವನ್ನು ಉರುಳಿಸಿತ್ತು. ಅಂದಿನಿಂದ ಇಂದಿನವರೆಗೆ ಅಮೆರಿಕ ಮತ್ತು ಅಫ್ಘಾನ್ ಸೈನಿಕರು ಹಾಗೂ ತಾಲಿಬಾನ್ ಉಗ್ರರ ನಡುವೆ ಯುದ್ಧ ನಡೆಯುತ್ತಿದೆ.

72 ಲಕ್ಷ ಕೋಟಿ ರೂ. ಖರ್ಚು ಮಾಡಿದ ಅಮೆರಿಕ

ಯುದ್ಧ ಮತ್ತು ಅಫ್ಘಾನಿಸ್ತಾನದ ಮರುನಿರ್ಮಾಣಕ್ಕಾಗಿ ಅಮೆರಿಕವು ಈವರೆಗೆ ಒಂದು ಟ್ರಿಲಿಯ ಡಾಲರ್ (ಸುಮಾರು 72 ಲಕ್ಷ ಕೋಟಿ ರೂಪಾಯಿ) ಖರ್ಚು ಮಾಡಿದೆ ಎನ್ನಲಾಗಿದೆ.

2,400 ಅಮೆರಿಕ ಸೈನಿಕರು, ಸಾವಿರಾರು ಅಫ್ಘಾನ್ ಸೈನಿಕರ ಸಾವು

ಈ ಅವಧಿಯಲ್ಲಿ ಸುಮಾರು 2,400 ಅಮೆರಿಕ ಸೈನಿಕರು ಹಾಗೂ ಸಾವಿರಾರು ಅಫ್ಘಾನ್ ಸೈನಿಕರು ಹತರಾಗಿದ್ದಾರೆ. ತಾಲಿಬಾನ್ ಉಗ್ರರೂ ಸಾವಿರಾರು ಸಂಖ್ಯೆಯಲ್ಲಿ ಸತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಾವಿರಾರು ನಾಗರಿಕರ ಮಾರಣಹೋಮವೂ ಆಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X