Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನೀವು ಯುಪಿಐ ಬಳಸುತ್ತೀರಾ?: ಹಾಗಿದ್ದರೆ...

ನೀವು ಯುಪಿಐ ಬಳಸುತ್ತೀರಾ?: ಹಾಗಿದ್ದರೆ ವಂಚನೆಯಿಂದ ರಕ್ಷಿಸಿಕೊಳ್ಳಲು ಟಿಪ್ಸ್ ಇಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ29 Feb 2020 7:31 PM IST
share
ನೀವು ಯುಪಿಐ ಬಳಸುತ್ತೀರಾ?: ಹಾಗಿದ್ದರೆ ವಂಚನೆಯಿಂದ ರಕ್ಷಿಸಿಕೊಳ್ಳಲು ಟಿಪ್ಸ್ ಇಲ್ಲಿವೆ

ಪ್ರತಿದಿನ ಹಲವಾರು ಜನರು ಆನ್‌ಲೈನ್ ವಂಚನೆಗಳಿಗೆ ಬಲಿಪಶುಗಳಾಗಿ ತಮ್ಮ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಆನ್‌ಲೈನ್‌ನಲ್ಲಿ ಜನರ ಅನುಕೂಲಕ್ಕಾಗಿ ಇರುವ ಹಣ ಪಾವತಿ/ಸ್ವೀಕೃತಿ ಪ್ಲಾಟ್‌ಫಾರ್ಮ್‌ಗಳ ಕುರಿತು ಗ್ರಾಹಕರಲ್ಲಿಯ ಅಜ್ಞಾನದ ಲಾಭವನ್ನು ಈ ವಂಚಕರು ಪಡೆಯುತ್ತಿದ್ದಾರೆ.

ಭಾರತದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆಯ ವ್ಯಾಪ್ತಿ ಅಗಾಧವಾಗಿ ಬೆಳೆದಿದೆ ಮತ್ತು ದಿನೇ ದಿನೇ ಹೊಸ ಎತ್ತರವನ್ನು ತಲುಪುತ್ತಿದೆ. ಆರ್‌ಟಿಜಿಎಸ್,ನೆಫ್ಟ್ ಮತ್ತು ಇಸಿಎಸ್‌ನಂತಹ ಸಾಂಪ್ರದಾಯಿಕ ಆನ್‌ಲೈನ್ ಹಣಪಾವತಿ ವ್ಯವಸ್ಥೆಗಳು ಮಾತ್ರವಲ್ಲ, ಇಮ್ಮೀಡಿಯೇಟ್ ಪೇಮೆಂಟ್ ಸರ್ವಿಸ್(ಐಎಂಪಿಎಸ್),ವ್ಯಾಲೆಟ್ ಸೇವೆಗಳು ಮತ್ತು ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ)ನಂತಹ ಹೊಸ ಸೇವೆಗಳು ಆನ್‌ಲೈನ್ ಜಗತ್ತನ್ನು ಆಳುತ್ತಿವೆ. ಇತ್ತೀಚಿನ ದಿನಗಳಲ್ಲಿ ಯುಪಿಐ ಅತ್ಯಂತ ಜನಪ್ರಿಯ ಹಣಪಾವತಿ ವಿಧಾನವಾಗಿದೆ.

ಪೇಮೆಂಟ್ ಇಕೋಸಿಸ್ಟಮ್ ರೂಪುಗೊಳ್ಳುವುದರೊಂದಿಗೆ 2020, ಜನವರಿಯಲ್ಲಿ ಯುಪಿಐ ಮೂಲಕ 1.3 ಶತಕೋಟಿ ವಹಿವಾಟುಗಳು ನಡೆದಿವೆ, ಹೀಗಾಗಿ ಸೇವಾ ಪೂರೈಕೆದಾರರು ಬಳಕೆದಾರರ ಅನುಭವನ್ನು ಉತ್ತಮಗೊಳಿಸುವ ಜೊತೆಗೆ ಸುಲಭ ಹಣಪಾವತಿ ಆಯ್ಕೆಗಳನ್ನು ಅವರಿಗೆ ಒದಗಿಸುವುದು ಅಗತ್ಯವಾಗಿದೆ.

ಪೇಮೆಂಟ್ ಇಂಟರ್‌ಫೇಸ್ ಬಳಕೆಯನ್ನು ಸುಲಭಗೊಳಿಸಿರುವುದರಿಂದ ಡಿಜಿಟಲ್ ಹಣಪಾವತಿಯನ್ನು ಇನ್ನಷ್ಟು ಸರಳಗೊಳಿಸಿರುವುದು ಯುಪಿಐ ಬೃಹತ್ ಸಂಖ್ಯೆಯ ಗ್ರಾಹಕರನ್ನು ಹೊಂದಲು ಕಾರಣವಾಗಿದೆ ಎನ್ನುತ್ತಾರೆ ತಜ್ಞರು. ಒಂದೆಡೆ ಯುಪಿಐ ಜಪ್ರಿಯತೆ ಪಡೆದುಕೊಂಡಿದ್ದರೆ,ಬಳಕೆದಾರರನ್ನು ವಂಚಿಸಲು ಅದನ್ನು ವಂಚಕರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಬಹಳಷ್ಟು ಜನರು ಮಾಹಿತಿಗಳ ಕೊರತೆಯ ಕಾರಣದಿಂದ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಇಂತಹ ಪೇಮೆಂಟ್ ಇಂಟರ್‌ಫೇಸ್ ಅನ್ನು ಬಳಸುವಾಗ ಅಪರಿಚಿತ ವ್ಯಕ್ತಿಗಳೊಂದಿಗೆ ಸಂವಾದದ ವೇಳೆ ಅಥವಾ ಅನಪೇಕ್ಷಿತ ಕರೆಗಳಿಗೆ ಉತ್ತರಿಸುವಾಗ ಯಾವುದೇ ಬ್ಯಾಂಕಿಂಗ್ ಮತ್ತು ಹಣಕಾಸು ಕುರಿತು ವಿವರಗಳನ್ನು ಹಂಚಿಕೊಳ್ಳದಂತೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ವಂಚಕರ ವಿರುದ್ಧ ರಕ್ಷಣೆಯನ್ನು ಪಡೆದುಕೊಳ್ಳಲು ನೀವು ಗಮನದಲ್ಲಿಟ್ಟುಕೊಳ್ಳಬೇಕಾದ ಬ್ಯಾಂಕಿಂಗ್ ಟಿಪ್ಸ್‌ಗಳು:

► ದೃಢೀಕೃತವಲ್ಲದ ಆ್ಯಪ್‌ಗಳು

ದೃಢೀಕೃತವಲ್ಲದ ಆ್ಯಪ್‌ಗಳನ್ನು ಇನ್‌ಸ್ಟಾಲ್ ಮಾಡಿಕೊಳ್ಳುವುದರಿಂದ ದೂರವಿರಿ. ಇಂದು ಅಂತರ್ಜಾಲ ಸಂಪರ್ಕ ಮತ್ತು ಸ್ಮಾರ್ಟ್‌ಪೋನ್‌ಗಳ ಸುಲಭ ಲಭ್ಯತೆಯಿಂದಾಗಿ ಜನರು ಕಣ್ಣಿಗೆ ಬಿದ್ದ ಆ್ಯಪ್‌ಗಳನ್ನೆಲ್ಲ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದಾರೆ. ಆ್ಯಪ್‌ಗಳ ಸತ್ಯಾಸತ್ಯತೆಯನ್ನು ಖಚಿತ ಪಡಿಸಿಕೊಳ್ಳದೆ ಜನರು ಅವುಗಳನ್ನು ಡೌನ್‌ಲೋಡ್ ಮಾಡುತ್ತಲೇ ಇರುತ್ತಾರೆ. ಇಂತಹ ಆ್ಯಪ್‌ಗಳು ಮೊಬೈಲ್ ಫೋನ್‌ಗಳಲ್ಲಿ ಇನ್‌ಸ್ಟಾಲ್ ಆದ ಬಳಿಕ ಅವು ಮೊಬೈಲ್ ಮೇಲೆ ನಿಯಂತ್ರಣವನ್ನು ಹೊಂದುತ್ತವೆ. ಎನಿ ಡೆಸ್ಕ್,ಟೀಮ್ ವ್ಯೂವರ್‌ನಂತಹ ಜನಪ್ರಿಯ ವಂಚನೆ ಆ್ಯಪ್‌ಗಳು ಇವುಗಳಲ್ಲಿ ಸೇರಿವೆ.

► ಯಾವುದೇ ಪಾವತಿಯನ್ನು ಮಾಡಲು ಲಿಂಕ್

ಹಣ ಪಾವತಿಸುವಾಗ ಅಲ್ಲಿ ತೋರಿಸಲಾದ ಯಾವುದೇ ಲಿಂಕ್ ಅನ್ನು ಕ್ಲಿಕ್ಕಿಸಬೇಡಿ. ಇದು ಜನರಿಗೆ ವಂಚನೆಯ ಇನ್ನೊಂದು ರೂಪವಾಗಿದೆ. ಉದಾಹರಣೆಗೆ ನೀವು ಏನಾದರನ್ನು ಒಎಲ್‌ಎಕ್ಸ್ ಅಥವಾ ಕ್ವಿಕರ್ ನಂತಹ ವೆಬ್‌ಸೈಟ್‌ಗಳ ಮೂಲಕ ಮಾರುವಾಗ ಲಿಂಕ್‌ನ್ನು ಕ್ಲಿಕ್ಕಿಸುವ ಮೂಲಕ ಹಣಪಾವತಿಯನ್ನು ಸ್ವೀಕರಿಸಲು ಒಪ್ಪಿಕೊಳ್ಳಬೇಡಿ. ನಿಮ್ಮ ಜಾಹೀರಾತನ್ನು ನೋಡುವ ಖರೀದಿದಾರರ ಸೋಗಿನಲ್ಲಿರುವ ವಂಚಕರು ನಿಮ್ಮನ್ನು ಸಂಪರ್ಕಿಸಿ ತಾವು ಕಳುಹಿಸಿರುವ ಲಿಂಕ್‌ನ್ನು ಕ್ಲಿಕ್ಕಿಸಿ ತಮ್ಮ ಹಣಪಾವತಿಯನ್ನು ಸ್ವೀಕರಿಸುವಂತೆ ಸೂಚಿಸುತ್ತಾರೆ. ಒಂದು ವೇಳೆ ನೀವು ಹಾಗೆ ಮಾಡಿದರೆ ಕ್ಷಣಾರ್ಧದಲ್ಲೇ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಬೀಳುತ್ತದೆ ಮತ್ತು ಹಣವೆಲ್ಲ ಖಾಲಿಯಾಗುತ್ತದೆ.

► ಒಟಿಪಿಯ ಶೇರಿಂಗ್

ಹೆಚ್ಚಿನ ವಂಚನೆಗಳು ಒಂದು ಬಾರಿಯ ಪಾಸ್‌ವರ್ಲ್ಡ್ ಅಥವಾ ಒಟಿಪಿಯನ್ನು ಹಂಚಿಕೊಳ್ಳುವುದರಿಂದ ನಡೆಯುತ್ತವೆ. ತಾವು ತಮ್ಮ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಎಂದು ಈಗ ಹೆಚ್ಚಿನವರಿಗೆ ಅರ್ಥವಾಗಿದೆಯಾದರೂ,ತಮ್ಮ ಬಲಿಪಶುಗಳು ಒಟಿಪಿಯನ್ನು ಶೇರ್ ಮಾಡಿಕೊಳ್ಳುವಂತೆ ವಂಚಕರು ಮಾಡುತ್ತಾರೆ. ಒಟಿಪಿಯನ್ನು ಹಂಚಿಕೊಂಡರೆ ವಂಚಕರು ಬ್ಯಾಂಕ್ ಖಾತೆಯಿಂದ ಹಣವನ್ನು ದೋಚಿ ಪಂಗನಾಮ ಹಾಕುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X