Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು...

ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಬಿಚ್ಚಿಟ್ಟ ವಸುಂಧರಾ ಭೂಪತಿ

ಲಿಂಗಪತ್ತೆಗೆ ವೈದ್ಯರಿಂದ 'ಸೀಕ್ರೆಟ್ ಕೋಡ್'

ವಾರ್ತಾಭಾರತಿವಾರ್ತಾಭಾರತಿ29 Feb 2020 10:33 PM IST
share
ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳನ್ನು ಬಿಚ್ಚಿಟ್ಟ ವಸುಂಧರಾ ಭೂಪತಿ

ಬೆಂಗಳೂರು, ಫೆ.29: ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿಯೇ ಹೆಚ್ಚಾಗಿ ಬೆಳಕಿಗೆ ಬಂದಿದ್ದು, ಕೆಲ ವೈದ್ಯರು ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಲಿಂಗಪತ್ತೆ ಮಾಡುವುದಲ್ಲದೆ, ಗ್ರಾಹಕರೊಂದಿಗೆ ಸಂವಾದ ನಡೆಸಲು ಸೀಕ್ರೆಟ್ ಕೋಡ್‌ಗಳನ್ನೇ ಬಳಸುತ್ತಾರೆ ಎಂದು ಚಿಂತಕಿ ಡಾ.ವಸುಂಧರಾ ಭೂಪತಿ ಹೇಳಿದರು.

ಶನಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋ ಸಭಾಂಗಣದಲ್ಲಿ ಗ್ಲೋಬಲ್ಎಂಟರ್ ಟೇನರ್ಸ್‌, ಚಾನ್ ವಾಸ್ಕಿ ಪಬ್ಲಿಕೇಷನ್ ವತಿಯಿಂದ ಆಯೋಜಿಸಿದ್ದ, ಲೇಖಕ ಜೆ.ಎಂ.ಪ್ರಹ್ಲಾದ್ ಅವರ 'ಡಾಕ್ಟರ್ ಸುಕನ್ಯಾ'(ಇಂಗ್ಲೀಷ್ ಅವತರಣಿಕೆ) ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯ ವೈದ್ಯನೋರ್ವ ಗರ್ಭಿಣಿ ಮಹಿಳೆಯನ್ನು ಸ್ಕ್ಯಾನಿಂಗ್‌ಗೆ ಒಳಪಡಿಸುವ ಮೊದಲು, ಆಕೆಯ ಸಂಬಂಧಿಕರಿಗೆ 'ಗೋ ಹೆಡ್' ಎಂದರೆ ಗಂಡುಮಗು, 'ಸ್ಟಾಪ್ ಇಟ್' ಎಂದರೆ ಹೆಣ್ಣು ಮಗು ಎಂದು ಮಾಹಿತಿ ನೀಡುತ್ತಾನೆ. ಮತ್ತೊಂದು ಆಸ್ಪತ್ರೆಯಲ್ಲಿ ಶುಗರ್ ಲೇಸ್ ಟೀ (ಹೆಣ್ಣು), ಶುಗರ್ ಟಿೀ (ಗಂಡು ಮಗು) ಎನ್ನುತ್ತಾರೆ.

 ಇನ್ನೂ ಹಲವು ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ನಂತರ ನೇರವಾಗಿ ಆಸ್ಪತ್ರೆಯ ಈಶ್ವರನ ಫೋಟೋಗೆ ನಮಸ್ಕರಿಸುತ್ತಾರೆ. ಇದು ಗರ್ಭದಲ್ಲಿ ಗಂಡು ಮಗು ಇದೆ ಎಂದರ್ಥ. ಇಂತಹ ಆತಂಕಕಾರಿ ವಿಚಾರ, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ತಡೆಯುವ ಬಗ್ಗೆ ಖಾಸಗಿ ಆಸ್ಪತ್ರೆಗಗಳ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿದಾಗ ಬೆಳಕಿಗೆ ಬಂದಿದೆ ಅವರು ತಿಳಿಸಿದರು.

ಹೆಣ್ಣು ಭ್ರೂಣ ಹತ್ಯೆಯಿಂದಲೇ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. ಅಲ್ಲದೆ, ಬೆಂಗಳೂರಿನಲ್ಲಿ 1 ಸಾವಿರ ಪುರುಷರಿದ್ದರೆ, 908 ಹೆಣ್ಣು ಮಕ್ಕಳಿದ್ದಾರೆ. ಅದೇ ರೀತಿ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲೂ ಅತಿ ಕಡಿಮೆ ಲಿಂಗಾನುಪಾತ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ತಮಿಳುನಾಡಿನ ಹಲವು ಭಾಗಗಳಲ್ಲಿ ಈಗಲೂ ಹೆಣ್ಣು ಮಗು ಹುಟ್ಟಿದ ತಕ್ಷಣ ನೀರಿನಲ್ಲಿ ಮುಳುಗಿಸಿ, ಅಥವಾ ಉಸಿರು ಗಟ್ಟಿಸಿ ಹತ್ಯೆ ಮಾಡಲಾಗುತ್ತಿದೆ. ಇತ್ತೀಚಿಗೆ ಪಾಂಡಿಚೇರಿಯಲ್ಲೂ ಹೆಣ್ಣು ಮಗುವನ್ನು ಕುಕ್ಕರ್‌ನಲ್ಲಿ ಹಾಕಿ, ಕೊಲೆ ಮಾಡಲಾಗಿರುವ ದುರ್ಘಟನೆ ಸಂಭವಿಸಿತು. ಇದರ ವಿರುದ್ಧ ಪಿಸಿ ಮತ್ತು ಪಿಎನ್‌ಡಿಟಿ ಆಕ್ಟ್ ಅಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೃಢಪಡಿಸಿದ್ದರೂ, ಅನೇಕರು ತಪ್ಪಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕಿ ಕೆ.ಎಂ.ರೇವತಿ, ಚಿತ್ರಕಲಾವಿದರಾದ ಅಭಿನಯ, ಶ್ರೀನಾಥ್ ವಶಿಷ್ಠ, ಚಂದ್ರಿಕ ವಿಜಯ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X