Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಂಗಾಳಕ್ಕೆ ಮತ್ತೊಮ್ಮೆ ಆಸರೆಯಾದ...

ಬಂಗಾಳಕ್ಕೆ ಮತ್ತೊಮ್ಮೆ ಆಸರೆಯಾದ ಮಜುಂದಾರ್

► ಕರ್ನಾಟಕದ ಶಿಸ್ತುಬದ್ಧ ಬೌಲಿಂಗ್ ► ಮಿಂಚಿದ ಮಿಥುನ್

ವಾರ್ತಾಭಾರತಿವಾರ್ತಾಭಾರತಿ1 March 2020 10:28 AM IST
share
ಬಂಗಾಳಕ್ಕೆ ಮತ್ತೊಮ್ಮೆ ಆಸರೆಯಾದ ಮಜುಂದಾರ್

ರಣಜಿ ಟ್ರೋಫಿ

ಕೋಲ್ಕತಾ, ಮಾ.1: ಮತ್ತೊಮ್ಮೆ ಅಗ್ರ ಸರದಿಯ ವೈಫಲ್ಯಕ್ಕೆ ಒಳಗಾದ ಬಂಗಾಳ ತಂಡಕ್ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಅನುಸ್ತುಪ್ ಮಜುಂದಾರ್ ಶತಕದ ಮೂಲಕ ಆಸರೆಯಾಗಿದ್ದಾರೆ. ಶನಿವಾರ ಇಲ್ಲಿ ಆರಂಭವಾದ ರಣಜಿ ಟ್ರೋಫಿಯ ಎರಡನೇ ಸೆಮಿ ಫೈನಲ್‌ನಲ್ಲಿ ಕರ್ನಾಟಕದ ವಿರುದ್ಧ ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಬಂಗಾಳ ಮೊದಲ ಇನಿಂಗ್ಸ್‌ನಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 275 ರನ್ ಗಳಿಸಿದೆ.

ಕ್ವಾರ್ಟರ್ ಫೈನಲ್‌ನಲ್ಲಿ ಬಂಗಾಳ ತಂಡ ಸಂಕಷ್ಟಕ್ಕೆ ಸಿಲುಕಿದಾಗ ಜೀವನಶ್ರೇಷ್ಠ 157 ರನ್ ಗಳಿಸಿ ಆಸರೆಯಾಗಿದ್ದ ಮಜುಂದಾರ್ ಶನಿವಾರ ಮೊದಲ ದಿನದಾಟದಂತ್ಯಕ್ಕೆ ಔಟಾಗದೆ 120 ರನ್(173 ಎಸೆತ, 18 ಬೌಂಡರಿ, 1 ಸಿಕ್ಸರ್)ಸಿಡಿಸಿ ತಂಡವನ್ನು ಆಧರಿಸಿದರು. ಆತಿಥೇಯ ತಂಡ 13 ವರ್ಷಗಳ ಬಳಿಕ ಫೈನಲ್ ತಲುಪುವ ವಿಶ್ವಾಸದಲ್ಲಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಇದೇ ಮೊದಲ ಬಾರಿ ಅಳವಡಿಸಲಾಗಿರುವ ಡಿಆರ್‌ಎಸ್‌ನ ಮೂಲಕ ಕರ್ನಾಟಕದ ವೇಗದ ಬೌಲರ್ ಅಭಿಮನ್ಯು ಮಿಥುನ್ ಅವರು ಇನಿಂಗ್ಸ್‌ನ 16ನೇ ಎಸೆತದಲ್ಲಿ ಅಭಿಷೇಕ್ ರಮಣ್(0)ವಿಕೆಟನ್ನು ಉರುಳಿಸಿದರು. ಈಗ ನಡೆಯುತ್ತಿರುವ ರಣಜಿ ಟ್ರೋಫಿಯ ಎರಡು ಸೆಮಿ ಫೈನಲ್ ಪಂದ್ಯಗಳಲ್ಲಿ ಭಾರತದ ದೇಶೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿ ಡಿಆರ್‌ಎಸ್ ಬಳಸಲಾಗುತ್ತಿದೆ. ಆದರೆ,ಇದರಲ್ಲಿ ಸೀಮಿತ ಆಯ್ಕೆಗಳಿದ್ದು, ಸ್ನೈಕೊಮೀಟರ್ ಅಥವಾ ಆಲ್ಟ್ರಾ ಎಡ್ಜ್‌ಗಳಿಲ್ಲ.

ಒಡಿಶಾ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿನ ವೈಫಲ್ಯವನ್ನೇ ಪುನರಾವರ್ತಿಸಿದ ಬಂಗಾಳ ಇಂದಿನ ಪಂದ್ಯದಲ್ಲಿ ಒಂದು ಹಂತದಲ್ಲಿ 66 ರನ್‌ಗೆ ಐದು ವಿಕೆಟ್‌ಗಳನ್ನು ಕಳೆದುಕೊಂಡಿತು. ನಾಯಕ ಅಭಿಮನ್ಯು ಈಶ್ವರನ್(15) ಹಾಗೂ ಮನೋಜ್ ತಿವಾರಿ(8)ಸಹಿತ ಎಲ್ಲ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕಳಪೆ ಹೊಡೆತಕ್ಕೆ ಕೈಹಾಕಿ ಪೆವಿಲಿಯನ್‌ಗೆ ಪರೇಡ್ ನಡೆಸಿದರು.

ರೋನಿತ್ ಮೋರೆ(2-45)ಕ್ರೀಸ್‌ನಲ್ಲಿ ನೆಲೆವೂರಿದ್ದ ಸುದೀಪ್ ಚಟರ್ಜಿ(20) ಹಾಗೂ ಶ್ರೀವಾಸ್ತವ ಗೋಸ್ವಾಮಿ(0)ವಿಕೆಟನ್ನು ನಾಲ್ಕು ಎಸೆತಗಳ ಅಂತರದಲ್ಲಿ ಕಬಳಿಸಿ ಬಂಗಾಳಕ್ಕೆ ತೀವ್ರ ಆಘಾತ ನೀಡಿದರು. ಲಂಚ್ ವಿರಾಮದ ವೇಳೆಗೆ ಬಂಗಾಳ 67 ರನ್‌ಗೆ 6 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

2016ರಲ್ಲಿ ಬಂಗಾಳ ತಂಡಕ್ಕೆ ವಾಪಸಾಗಿದ್ದ ಹಿರಿಯ ಬ್ಯಾಟ್ಸ್‌ಮನ್ ಮಜುಂದಾರ್ ಬಾಲಂಗೋಚಿ ಆಕಾಶ್ ದೀಪ್(44)ಅವರೊಂದಿಗೆ 9ನೇ ವಿಕೆಟ್‌ಗೆ ಶತಕದ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು. ಮಜುಂದಾರ್‌ರೊಂದಿಗೆ ಆಲ್‌ರೌಂಡರ್ ಶಹಬಾಝ್ ಅಹ್ಮದ್ 8ನೇ ವಿಕೆಟ್‌ನಲ್ಲಿ 119 ಎಸೆತಗಳಲ್ಲಿ 72 ರನ್ ಜೊತೆಯಾಟ ನಡೆಸಿ ಉತ್ತಮ ಸಾಥ್ ನೀಡಿದರು.

 ಮಜುಂದಾರ್‌ಗೆ ಸಂಪೂರ್ಣ ಸಾಥ್ ನೀಡಿದ ಆಕಾಶ್ ದೀಪ್ ಸಿಡಿಸಿದ ಜೀವನಶ್ರೇಷ್ಠ (44 ರನ್) ಇನಿಂಗ್ಸ್‌ನಲ್ಲಿ ಮೂರು ಸಿಕ್ಸರ್ ಹಾಗೂ ಮೂರು ಬೌಂಡರಿ ಗಳಿಸಿದ್ದಾರೆ.

ಮಜುಂದಾರ್ ಹಾಗೂ ಆಕಾಶ್ ದೀಪ್ ಎರಡು ಗಂಟೆಗಳ ಕಾಲ ಕ್ರೀಸ್‌ನಲ್ಲಿದ್ದು 136 ಎಸೆತಗಳಲ್ಲಿ 103 ರನ್ ಸೇರಿಸಿದರು. ನಾಲ್ವರು ಬೌಲರ್‌ಗಳೊಂದಿಗೆ ಕಣಕ್ಕಿಳಿದಿದ್ದ ನಾಯಕ ಕರುಣ್ ನಾಯರ್ ಅವರು ಜೆ.ಸುಚಿತ್ ಬದಲಿಗೆ ಭಾರತದ ಓಪನರ್ ರಾಹುಲ್‌ಗೆ ಅವಕಾಶ ಕಲ್ಪಿಸಿದರು.

ಎರಡನೇ ಅವಧಿಯಲ್ಲಿ ಈಡನ್‌ಗಾರ್ಡನ್ಸ್ ಪಿಚ್ ಬ್ಯಾಟಿಂಗ್‌ಗೆ ಪೂರಕವಾಗಿದ್ದ ಕಾರಣ ಕರ್ನಾಟಕದ ಮೂವರು ವೇಗಿಗಳು ದಣಿದಂತೆ ಕಂಡುಬಂದರು. ಮಜುಂದಾರ್ ಸಂಪೂರ್ಣ ಲಾಭ ಪಡೆದರು. ಕರ್ನಾಟಕದ ಬೌಲಿಂಗ್ ಪಾಳಯದಲ್ಲಿದ್ದ ಏಕೈಕ ಸ್ಪಿನ್ನರ್ ಕೆ.ಗೌತಮ್ 26 ಓವರ್‌ಗಳ ಬೌಲಿಂಗ್ ಮಾಡಿದರು.

173 ಎಸೆತಗಳಲ್ಲಿ ಔಟಾಗದೆ 120 ರನ್ ಗಳಿಸಿದ್ದ ಮಜುಂದಾರ್ ನಾಲ್ಕು ಗಂಟೆ, 11 ನಿಮಿಷಗಳ ಕಾಲ ಕ್ರೀಸ್ ಆಕ್ರಮಿಸಿಕೊಂಡರು. ಮಜುಂದಾರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 9ನೇ ಹಾಗೂ ರಣಜಿ ಟ್ರೋಫಿಯಲ್ಲಿ ಏಳನೇ ಶತಕ ಸಿಡಿಸಿದರು. ಕರ್ನಾಟಕ ತಂಡದ ಆಟಗಾರರು ಕಳಪೆ ಫೀಲ್ಡಿಂಗ್ ಮಾಡಿದ್ದು, ಎರಡು ಕ್ಯಾಚ್ ಕೈಚೆಲ್ಲಿದರು. ವಿಕೆಟ್‌ಕೀಪರ್ ಎಸ್.ಶರತ್ ಹಾಗೂ ನಾಯಕ ನಾಯರ್ ಕ್ಯಾಚ್ ಕೈಚೆಲ್ಲಿದರು. ಇದರಿಂದ ಬಂಗಾಳ ಆರಂಭಿಕ ಕುಸಿತದಿಂದ ಅಮೋಘವಾಗಿ ಚೇತರಿಸಿಕೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X