Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವನಿತೆಯರ ಟ್ವೆಂಟಿ-20 ವಿಶ್ವಕಪ್:...

ವನಿತೆಯರ ಟ್ವೆಂಟಿ-20 ವಿಶ್ವಕಪ್: ಭಾರತಕ್ಕೆ ಸತತ ನಾಲ್ಕನೇ ಜಯ

ರಾಧಾ ಯಾದವ್ ಜೀವನಶ್ರೇಷ್ಠ ಬೌಲಿಂಗ್

ವಾರ್ತಾಭಾರತಿವಾರ್ತಾಭಾರತಿ1 March 2020 10:31 AM IST
share
ವನಿತೆಯರ ಟ್ವೆಂಟಿ-20 ವಿಶ್ವಕಪ್: ಭಾರತಕ್ಕೆ ಸತತ ನಾಲ್ಕನೇ ಜಯ

ಮೆಲ್ಬೋರ್ನ್, ಮಾ.1: ರಾಧಾ ಯಾದವ್ ಜೀವನಶ್ರೇಷ್ಠ ಬೌಲಿಂಗ್(4-23) ಹಾಗೂ ಶೆಫಾಲಿ ವರ್ಮಾ ಅವರ ಬಿರುಸಿನ ಬ್ಯಾಟಿಂಗ್(47,34 ಎಸೆತ)ಸಹಾಯದಿಂದ ಭಾರತದ ಮಹಿಳಾ ತಂಡ ವನಿತೆಯರ ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾ ತಂಡವನ್ನು 7 ವಿಕೆಟ್‌ಗಳ ಅಂತರದಿಂದ ಸದೆಬಡಿಯಿತು. ಈ ಮೂಲಕ ‘ಎ’ ಗುಂಪಿನಲ್ಲಿ ಎಲ್ಲ ನಾಲ್ಕು ಪಂದ್ಯಗಳಲ್ಲಿ ಜಯ ಸಾಧಿಸಿ ಸೆಮಿ ಫೈನಲ್ ಪ್ರವೇಶಿಸಿತು.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡ ಒಟ್ಟು 8 ಅಂಕ ಕಲೆಹಾಕಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. ಶನಿವಾರ ಇಲ್ಲಿ ನಡೆದ ‘ಎ’ ಗುಂಪಿನ ಕೊನೆಯ ಪಂದ್ಯದಲ್ಲಿ ಟಾಸ್ ಜಯಿಸಿದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ನಾಯಕಿ ಚಾಮರಿ ಜಯಾಂಗಿನಿ(33) ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದರು. ಎಡಗೈ ಸ್ಪಿನ್ನರ್ ರಾಧಾ ಲಂಕಾದ ನಾಯಕಿ ಜಯಾಂಗಿನಿ ಸಹಿತ ನಾಲ್ಕು ವಿಕೆಟ್‌ಗಳನ್ನು ಉರುಳಿಸಿದರು. ಗೆಲ್ಲಲು ಸುಲಭ ಸವಾಲು ಪಡೆದ ಭಾರತ 14.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 116 ರನ್ ಗಳಿಸಿತು. ಶೆಫಾಲಿ ವರ್ಮಾ ಸರ್ವಾಧಿಕ ಸ್ಕೋರ್ ಗಳಿಸಿದರೆ, ಜೆಮಿಮಾ ರೋಡ್ರಿಗಸ್ ಹಾಗೂ ದೀಪ್ತಿ ಶರ್ಮಾ ತಲಾ 15 ರನ್ ಗಳಿಸಿದರು. 16ರ ಹರೆಯದ ಶೆಫಾಲಿ ಎರಡನೇ ಹಾಗೂ ನಾಲ್ಕನೇ ಓವರ್‌ನಲ್ಲಿ ಜೀವದಾನ ಪಡೆದರು. ತನ್ನ 34 ಎಸೆತಗಳ ಇನಿಂಗ್ಸ್‌ನಲ್ಲಿ 7 ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿದರು. 11ನೇ ಓವರ್‌ನಲ್ಲಿ 47 ರನ್ ಗಳಿಸಿ ಔಟಾಗಿರುವ ಶೆಫಾಲಿ ಟೂರ್ನಮೆಂಟ್‌ನಲ್ಲಿ ಎರಡನೇ ಬಾರಿ ಅರ್ಧಶತಕದಿಂದ ವಂಚಿತರಾದರು. ನ್ಯೂಝಿಲ್ಯಾಂಡ್ ವಿರುದ್ಧದ ಕಳೆದ ಪಂದ್ಯದಲ್ಲಿ ಶೆಫಾಲಿ 46 ರನ್ ಗಳಿಸಿದ್ದರು. ಕೌರ್(15) ಹಾಗೂ ಸ್ಮತಿ ಮಂಧಾನ (17)ದೊಡ್ಡ ಮೊತ್ತ ಗಳಿಸಲು ವಿಫಲರಾದರು. ಮಂಧಾನಾ 5ನೇ ಓವರ್‌ನಲ್ಲಿ ಕವಿಶಾ ದಿಲ್‌ಹರಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಜೆಮಿಮಾ ರೋಡ್ರಿಗಸ್(15) ಹಾಗೂ ದೀಪ್ತಿ ಶರ್ಮಾ(15)ಭಾರತವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ಮೂರನೇ ಓವರ್‌ನಲ್ಲಿ ಆರಂಭಿಕ ಆಟಗಾರ್ತಿ ಉಮೇಶಾ ಥಿಮಾಶಿನಿ(2) ವಿಕೆಟ್ ಕಳೆದುಕೊಂಡಿತು. ದೀಪ್ತಿ ಶರ್ಮಾ ಎಸೆತದಲ್ಲಿ ರಾಜೇಶ್ವರಿ ಗಾಯಕ್ವಾಡ್‌ಗೆ ಥಿಮಾಶಿನಿ ವಿಕೆಟ್ ಒಪ್ಪಿಸಿದರು. 8ನೇ ಓವರ್‌ನಲ್ಲಿ ಮಾಧವಿ ವಿಕೆಟ್ ಪಡೆಯುವುದರೊಂದಿಗೆ ಮೇಡನ್ ಓವರ್ ಬೌಲಿಂಗ್ ಮಾಡಿದ ಎಡಗೈ ಸ್ಪಿನ್ನರ್ ಗಾಯಕ್ವಾಡ್ ಶ್ರೀಲಂಕಾಕ್ಕೆ ಒತ್ತಡ ಹೇರಿದರು.

 ನಾಯಕಿ ಕೌರ್ 9ನೇ ಓವರ್‌ನಲ್ಲಿ ರಾಧಾ ಕೈಗೆ ಚೆಂಡು ನೀಡಿದರು. ಶ್ರೀಲಂಕಾದ ನಾಯಕಿ ಚಾಮರಿ ಅಟಪಟ್ಟು ಅವರಿ ರಾಧಾ ಅವರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸಿ ಸ್ವಾಗತಿಸಿದರು. ಮುಂದಿನ ಓವರ್‌ನಲ್ಲಿ ಹನ್ಸಿಮಾ ಕರುಣರತ್ನೆ(7) ಹಾಗೂ ಹಸಿನಿ ಪೆರೇರ(7)ವಿಕೆಟ್ ಉರುಳಿಸಿದರು. ವಿಕೆಟ್‌ಕೀಪರ್ ಅನುಷ್ಕಾ ಸಂಜೀವನಿಗೆ(1)ಪೆವಿಲಿಯನ್ ಹಾದಿ ತೋರಿಸಿದರು. ಪಂದ್ಯದುದ್ದಕ್ಕೂ ಭಾರತದ ಸ್ಪಿನ್ನರ್‌ಗಳು ಪ್ರಾಬಲ್ಯ ಸಾಧಿಸಿದ್ದು, ರಾಧಾ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರೆ, ಗಾಯಕ್ವಾಡ್(2-18)ಎರಡು ವಿಕೆಟ್ ಪಡೆದರು. ದೀಪ್ತಿ(1-16), ಶಿಖಾ ಪಾಂಡೆ(1-35) ಹಾಗೂ ಪೂನಂ ಯಾದವ್(1-20)ತಲಾ ಒಂದು ವಿಕೆಟ್ ಪಡೆದರು. ಸ್ಪಿನ್ನರ್ ರಾಧಾ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X