Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್ :ಕೊಹ್ಲಿ ಪಡೆಗೆ ಮತ್ತೆ...

ದ್ವಿತೀಯ ಟೆಸ್ಟ್ :ಕೊಹ್ಲಿ ಪಡೆಗೆ ಮತ್ತೆ ಸೋಲಿನ ಭೀತಿ

ವಾರ್ತಾಭಾರತಿವಾರ್ತಾಭಾರತಿ1 March 2020 1:53 PM IST
share
ದ್ವಿತೀಯ ಟೆಸ್ಟ್ :ಕೊಹ್ಲಿ ಪಡೆಗೆ  ಮತ್ತೆ ಸೋಲಿನ ಭೀತಿ

ಕ್ರೈಸ್ಟ್ ಚರ್ಚ್ , ಮಾ.1:ಇಲ್ಲಿ ನಡೆಯುತ್ತಿರುವ ನ್ಯೂಝಿಲ್ಯಾಂಡ್ ವಿರುದ್ಧದ ಎರಡನೇ  ಕ್ರಿಕೆಟ್ ಟೆಸ್ಟ್ ನಲ್ಲಿ ಭಾರತ ಸೋಲಿನ ಭೀತಿಗೆ ಸಿಲುಕಿದೆ.

ಟೆಸ್ಟ್ ನ ಎರಡನೇ ದಿನವಾಗಿರುವ ರವಿವಾರ  ನ್ಯೂಝಿಲ್ಯಾಂಡ್ ನ್ನು ಮೊದಲ ಇನಿಂಗ್ಸ್ ನಲ್ಲಿ 235 ರನ್ ಗಳಿಗೆ ನಿಯಂತ್ರಿಸಿ 7 ರನ್ ಗಳ ಮುನ್ನಡೆ ಪಡೆದರೂ, ಎರಡನೇ ಇನಿಂಗ್ಸ್ ನಲ್ಲಿ 36 ಓವರ್ ಗಳಲ್ಲಿ 90 ರನ್ ಗಳಿಗೆ 6 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಹನುಮ ವಿಹಾರಿ ಔಟಾಗದೆ 5 ರನ್ ಮತ್ತು ರಿಷಭ್ ಪಂತ್ ಔಟಾಗದೆ 1 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಟ್ರೆಂಟ್ ಬೌಲ್ಟ್ (12ಕ್ಕೆ 3), ಟಿಮ್ ಸೌಥಿ(20ಕ್ಕೆ 1), ಗ್ರ್ಯಾಂಡ್ ಹೋಮ್ (2ಕ್ಕೆ 1) ಮತ್ತು ನೀಲ್  ವಾಗ್ನೆರ್ (18ಕ್ಕೆ 1) ದಾಳಿಯನ್ನು ಎದುರಿಸಲಾರದೆ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿದ್ದಾರೆ  ಪೃಥ್ವಿ ಶಾ 14 ರನ್ , ಮಾಯಾಂಕ್ ಅಗರ್ವಾಲ್ 7 ರನ್ , ಚೇತೇಶ್ವರ್ ಪೂಜಾರ 24 ರನ್ , ವಿರಾಟ್ ಕೊಹ್ಲಿ 14 ರನ್ , ಅಜಿಂಕ್ಯ ರಹಾನೆ 9 ರನ್ , ಉಮೇಶ್ ಯಾದವ್ 1ರನ್ ,ಗಳಿಸಿ ಔಟಾಗಿದ್ದಾರೆ.

ಇದಕ್ಕೂ ಮೊದಲು  ನ್ಯೂಝಿಲ್ಯಾಂಡ್ ತಂಡ 73 .1 ಓವರ್ ಗಳಲ್ಲಿ 235 ರನ್ ಗಳಿಗೆ ಆಲೌಟಾಗಿತ್ತು.  ನ್ಯೂಝಿಲ್ಯಾಂಡ್ ಮೊದಲ ಇನಿಂಗ್ಸ್ ನಲ್ಲಿ ದಿನದಾಟದಂತ್ಯಕ್ಕೆ 23 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 63 ರನ್ ಗಳಿಸಿತ್ತು.

ವೇಗಿ ಮುಹಮ್ಮದ್ ಶಮಿ (81ಕ್ಕೆ 4), ಜಸ್ ಪ್ರೀತ್ ಬುಮ್ರಾ (62ಕ್ಕೆ 3) , ರವೀಂದ್ರ ಜಡೇಜ(22ಕ್ಕೆ 2) ಮತ್ತು ಉಮೇಶ್ ಯಾದವ್ (46ಕ್ಕೆ 1) ದಾಳಿಯ ಮುಂದೆ ನ್ಯೂಝಿಲ್ಯಾಂಡ್ ನ  ಬಹುತೇಕ ಆಟಗಾರರು  ರನ್ ಗಳಿಸಲು ಪರದಾಡಿದರೂ ಟಾಮ್ ಲಥಾಮ್ 52 ರನ್  ಮತ್ತು ಕೈಲ್ ಜಮೀಸನ್ 49 ರನ್, ಟಾಮ್ ಬ್ಲಂಡೆಲ್ 30 ರನ್ ,  ರಾಸ್ ಟೇಲರ್ 15 ರನ್ , ಹೆನ್ರಿ ನಿಕೋಲ್ಸ್ 14 ರನ್ , ಗ್ರ್ಯಾಂಡ್ ಹೋಮ್ 26 ರನ್  ಗಳಿಸಿ ತಂಡದ ಸ್ಕೋರ್ ನ್ನು ಏರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X