Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪ್ರಕೃತಿ ಮಡಿಲಲ್ಲೇ ರಾಜ್ಯ...

ಮಂಗಳೂರು: ಪ್ರಕೃತಿ ಮಡಿಲಲ್ಲೇ ರಾಜ್ಯ ಮಟ್ಟದ ಪರಿಸರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ1 March 2020 8:56 PM IST
share
ಮಂಗಳೂರು: ಪ್ರಕೃತಿ ಮಡಿಲಲ್ಲೇ ರಾಜ್ಯ ಮಟ್ಟದ ಪರಿಸರ ಸಮ್ಮೇಳನ

ಮಂಗಳೂರು, ಮಾ.1: ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದಿಂದ (ಎನ್‌ಇಸಿಎಫ್) ‘ಪ್ರಕೃತಿ ಮಾತೆಯ ರೋದನಕ್ಕೆ ಕಿವಿಯಾಗೋಣ’ ಘೋಷವಾಕ್ಯದಡಿ ಎರಡನೇ ರಾಜ್ಯ ಮಟ್ಟದ ‘ಪರಿಸರ ಸಮ್ಮೇಳನ’ವು ತಣ್ಣೀರುಬಾವಿ ಕಡಲತೀರದ ಟ್ರೀಪಾರ್ಕ್‌ನ ಪ್ರಕೃತಿಯ ಮಡಿಲಲ್ಲಿ ರವಿವಾರ ದಿನಪೂರ್ತಿ ನಡೆಯಿತು.

ಶಿವಮೊಗ್ಗ, ಹಾಸನ, ತುಮಕೂರು, ಬೆಂಗಳೂರು, ಉತ್ತರಕನ್ನಡ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಪರಿಸರಾಸಕ್ತರು ಆಗಮಿಸಿ ಸಮ್ಮೇಳನಕ್ಕೆ ಮೆರುಗು ನೀಡಿದರು. ಬೆಳಗ್ಗೆ 8 ಗಂಟೆಯಿಂದಲೇ ಚಿಣ್ಣರಿಂದ ಹಿಡಿದು ಹಿರಿಯರು ಟ್ರೀಪಾರ್ಕ್‌ನತ್ತ ಆಗಮಿಸಿ, ನೋಂದಣಿ ಮಾಡಿಕೊಂಡರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಿಇಎಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯದಲ್ಲಿ ಗ್ರಾಮೀಣ ಆಟಗಳ ಕುರಿತು ನೃತ್ಯ ಪ್ರದರ್ಶಿಸಿದರು. ಸಿದ್ಧಿ ಸಮುದಾಯದವರಿಂದ ಡಾಮಾಮಿ ನೃತ್ಯ, ಹಾಲಕ್ಕಿ ಜನರಿಂದ ಕುಗುಡಿ ನೃತ್ಯ, ಚೇತನಾ ಕೊಪ್ಪ ತಂಡ ದಿಂದ ಮಕ್ಕಳ ಕಾಡೇ ಕೂಗು ನಾಟಕ ಪ್ರದರ್ಶನಗೊಂಡಿತು. ಸಮ್ಮೇಳಕ್ಕೆ ಮೊದಲು ಹಾಲಕ್ಕಿ ಸಮುದಾಯದವರಿಂದ ಪದ್ಮಶ್ರೀ ಸುಕ್ರೀ ಬೊಮ್ಮಗೌಡ ಅವರ ನೇತೃತ್ವದಲ್ಲಿ ನೃತ್ಯ ಪ್ರದರ್ಶನಗೊಂಡಿತು.

ಚಿತ್ರ ಕಲಾವಿದರು ತಂಡ ಸ್ಥಳದಲ್ಲೇ ಪರಿಸರಕ್ಕೆ ಸಂಬಂಧಿಸಿದ ಚಿತ್ರರಚಿಸಿ ಸಮ್ಮೇಳನಕ್ಕೆ ಮೆರುಗು ನೀಡಿದರು. ಮೀನು, ಹಕ್ಕಿಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಇರುವ ಕಲಾಕೃತಿಗಳನ್ನು ಸ್ಥಳದಲ್ಲಿ ಇರಿಸಲಾಗಿತ್ತು.

ಬೆಳೆದು ನಿಂತ ಮರಗಿಡಗಳ ನೆರಳೇ ಚಪ್ಪರ, ಶಾಮಿಯಾನವಾಗಿತ್ತು. ತೆರೆದ ವೇದಿಕೆಯಲ್ಲಿ ನ್ಯಾಯಾಲಯ ಪ್ರಕ್ರಿಯೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ರಥಬೀದಿಯ ಸ್ವರೂಪ ಅಧ್ಯಯನ ಕೇಂದ್ರದ ಮುಖ್ಯಸ್ಥ ಗೋಪಾಡ್ಕರ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಚಿತ್ರಗಳನ್ನು ರಚಿಸಿದರು.

ವಿವಿಧ ಜಾತಿಯ ಗಿಡಗಳ ಮಾರಾಟ ಮತ್ತು ಪ್ರದರ್ಶನವಿತ್ತು. ಹಾಳೆತಟ್ಟೆಯಲ್ಲಿ ತುಳಸೀಗೌಡ, ಸುಕ್ರೀ ಬೊಮ್ಮಗೌಡ ಭಾವಚಿತ್ರಗಳನ್ನು ತೂಗಿ ಹಾಕಲಾಗಿತ್ತು. ಎತ್ತಿನಹೊಳೆ ಯೋಜನೆಯನ್ನು ಅಣಕಿಸುವ ಕಲಾಕೃತಿಯೊಂದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಚಿತ್ರಕಲಾವಿದರ ಕೈಚಳಕ: ಚಾವಡಿ ಕಲಾವಿದರು ತಂಡ ಸ್ಥಳದಲ್ಲೇ ಚಿತ್ರರಚಿಸಿ, ಪ್ರದರ್ಶನ ನೀಡಿದರು. ಚಿತ್ರ ಕಲಾಶಿಕ್ಷಕರಾದ ಜಾನ್‌ಚಂದ್ರನ್, ಪೂರ್ಣೇಶ್, ತಾರಾನಾಥ್ ಕೈರಂಗಳ ಈ ಚಿತ್ರಕಲಾ ತಂಡದಲ್ಲಿ ಭಾಗವಹಿಸಿ, ನಿರ್ದೇಶನ ನೀಡಿದರು. ಟ್ರೀ ಪಾರ್ಕ್‌ನ ಪ್ರಕೃತಿಯ ಸೊಬಗಿನಲ್ಲಿ ನೆರಳಾಶ್ರಯ ಪಡೆದು ಕಿನಾರೆಯಲ್ಲಿ ಪರಿಸರ ವೈವಿಧ್ಯ ಮತ್ತು ದೌರ್ಜನ್ಯಗಳನ್ನು ಬಿಂಬಿಸುವ ಅದ್ಭುತ ಕಲಾಕೃತಿಗಳು ಮೂಡಿಬಂದವು.

ವಿದ್ಯಾರ್ಥಿಗಳೇ ಸ್ವಯಂಸೇವಕರು: ಪರಿಸರ ಸಮ್ಮೇಳನದ ಇಡೀ ದಿನ ಅಲೋಶಿಯಸ್ ಕಾಲೇಜು, ಆಳ್ವಾಸ್ ಕಾಲೇಜು, ಹಳೆಯಂಗಡಿ ನಾರಾಯಣ ಸನಿಲ್ ಕಾಲೇಜು, ಶ್ರೀನಿವಾಸ್ ಕಾಲೇಜು, ಎನ್‌ಎಸ್‌ಎಸ್, ಎನ್‌ಸಿಸಿ ವಿದ್ಯಾರ್ಥಿಗಳು ಸೇರಿದಂತೆ ನಾನಾ ಕಾಲೇಜುಗಳ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಈ ತಂಡ ಸ್ವಚ್ಛತೆ, ಕುಡಿಯುವ ನೀರು ಪೂರೈಕೆ, ಆಹಾರ ಪೂರೈಕೆ ಸೇರಿದಂತೆ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಡೆಸುತ್ತಿದ್ದರು. ಇವುಗಳ ಮಧ್ಯೆ ಹಸಿರು ಟೀಶರ್ಟ್ ಉಟ್ಟು ಎನ್‌ಇಸಿಎ್ ಕಾರ್ಯಕರ್ತರು, ಸದಸ್ಯರು ಗಮನ ಸೆಳೆದರು.

ವಿಭಿನ್ನ ಕಾರ್ಯಕ್ರಮ: ಪರಿಸರ ಸಮ್ಮೇಳನದಲ್ಲಿ ಭಾಷಣ ಬಿಗಿಯುವವರಿಗೆ ಅವಕಾಶ ಇರಲಿಲ್ಲ. ಪರಿಸರಕ್ಕೆ ಸಂಬಂಧಿಸಿದ ವಿಚಾರಗಳಷ್ಟೇ ಚರ್ಚೆಯ ಪ್ರಧಾನ ವಿಷಯವಾಗಿತ್ತು. ಸಮ್ಮೇಳನ ವೇದಿಕೆಯಿಂದ ಮಾವಿನ ಗಿಡವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿ ಟ್ರೀಪಾರ್ಕ್‌ನ ಒಂದು ಭಾಗದಲ್ಲಿ ನೆಡುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.

ಪದ್ಮಶ್ರೀ ತುಳಸೀಗೌಡ, ಪದ್ಮಶ್ರೀ ಸುಕ್ರೀ ಬೊಮ್ಮಗೌಡ ಹಾಗೂ ಡಿಯಾಗೋ ಬಸ್ತ್ಯಾವ್ ಸಿದ್ದಿ ಗಿಡ ನೆಟ್ಟು ನೀರು ಹಾಕಿದರು. ಸಾಯಂಕಾಲ ಸಮ್ಮೇಳದ ಚರ್ಚೆಯಾದ ವಿಷಯಗಳ ಕುರಿತು ಸಮುದ್ರರಾಜನಿಗೆ ಅರಿಕೆ ಮಾಡಿ ಪ್ರಾರ್ಥನೆ ಸಲ್ಲಿಸಲಾಯಿತು.

ಪ್ರಶಸ್ತಿ ಪ್ರದಾನ

ಸಮ್ಮೇಳನ ಹಿನ್ನೆಲೆಯಲ್ಲಿ ಎತ್ತಿನಹೊಳೆ ಸೇರಿದಂತೆ ವಿವಿಧ ಪರಿಸರ ಸಂಬಂಧಿಸಿದ ವಿಚಾರದಲ್ಲಿ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವ ಡಾ.ರವೀಂದ್ರನಾಥ ಶ್ಯಾನುಭೋಗ್ ಅವರಿಗೆ ‘ನ್ಯಾಯಶ್ರೀ’, ಸುಕ್ರಿ ಬೊಮ್ಮಗೌಡ ಮತ್ತು ಕುತ್ತಾರು ತಿಮ್ಮಕ್ಕ ಅವರಿಗೆ ‘ಜನಪದ ಶ್ರೀ’ ಪ್ರಶಸ್ತಿ, ತುಳಸಿಗೌಡ ಹಾಗೂ ಡಿಯಾಗೋ ಬಸ್ತ್ಯಾವ್ ಸಿದ್ಧಿ ಅವರಿಗೆ ‘ವನಶ್ರೀ’ಪ್ರಶಸ್ತಿ ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X