Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಸಿವೆಯಿಂದ ಕಂಗೆಟ್ಟ ದಿಲ್ಲಿ ನಿವಾಸಿಗಳು:...

ಹಸಿವೆಯಿಂದ ಕಂಗೆಟ್ಟ ದಿಲ್ಲಿ ನಿವಾಸಿಗಳು: 1 ಲೀಟರ್ ಹಾಲಿಗೆ 100 ರೂ.!

ಎನ್ ಜಿಒಗಳಿಂದ ಪಡಿತರ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ1 March 2020 9:18 PM IST
share
ಹಸಿವೆಯಿಂದ ಕಂಗೆಟ್ಟ ದಿಲ್ಲಿ ನಿವಾಸಿಗಳು: 1 ಲೀಟರ್ ಹಾಲಿಗೆ 100 ರೂ.!

ಹೊಸದಿಲ್ಲಿ, ಮಾ.1: ಹಿಂಸಾಚಾರದಿಂದ ಕಂಗೆಟ್ಟಿದ್ದ ಈಶಾನ್ಯ ದಿಲ್ಲಿಯಲ್ಲಿ ಈಗ ಜನಜೀವನ ಕ್ರಮೇಣ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ ತಮಗೆ ಈಗ ಆಹಾರ ವಸ್ತು ಮತ್ತು ದಿನಬಳಕೆಯ ಸಾಮಗ್ರಿಗಳ ಕೊರತೆ ಎದುರಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಗುರುವಾರದಿಂದ ಸರಕಾರೇತರ ಸಂಸ್ಥೆ(ಎನ್‌ಜಿಒ)ಗಳು ಹಾಗೂ ಸ್ವಯಂ ಸೇವಕರು ನಗರದೆಲ್ಲೆಡೆ ಸ್ಥಳೀಯರ ಸಹಕಾರದಿಂದ ಅಗತ್ಯದ ಸಾಮಾಗ್ರಿಗಳನ್ನು ವಿತರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಂಗಡಿಯನ್ನು ದಾಸ್ತಾನು ಕೋಣೆಯನ್ನಾಗಿ ಪರಿವರ್ತಿಸಿ ಅಲ್ಲಿಂದ ಪಡಿತರ ಹಾಗೂ ಆಹಾರ ವಸ್ತುಗಳ ವಿತರಣೆ ಕಾರ್ಯ ನಡೆಸಲಾಗುತ್ತಿದೆ. ಸ್ಥಳೀಯ ಮಹಿಳೆಯರಿಗೆ ಕ್ರಮ ಸಂಖ್ಯೆ ಇರುವ ಚೀಟಿಯನ್ನು ವಿತರಿಸಲಾಗುತ್ತಿದೆ. ಈ ಚೀಟಿಯನ್ನು ತೋರಿಸಿದರೆ ಅನ್ನ, ಖಾದ್ಯ ತೈಲ, ಚಹಾಪುಡಿ, ಸಕ್ಕರೆ ಮತ್ತು ಉಪ್ಪು ಇರುವ ಪ್ಯಾಕೇಟನ್ನು ನೀಡಲಾಗುತ್ತಿದೆ.

ಈಗ ಬದುಕುಳಿಯುವುದೇ ಮಹತ್ವದ ವಿಷಯವಾಗಿದೆ. ನಮ್ಮಲ್ಲಿ ಹಲವರು ಎರಡು ಮೂರು ದಿನಗಳಿಂದ ಊಟವೇ ಮಾಡಿರಲಿಲ್ಲ. ಆದರೆ ಹಸಿದವರ ನೆರವಿಗೆ ಸಂಘ ಸಂಸ್ಥೆಗಳು, ದಾನಿಗಳು ಧಾವಿಸಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಪಡಿತರ ಮತ್ತು ಆಹಾರ ವಸ್ತುಗಳನ್ನು ಪಡೆಯುತ್ತಿದ್ದೇವೆ. ಆದರೆ ಶೇರ್‌ಪುರ ಮತ್ತು ಚಾಂದ್‌ಬಾಗ್ ಪ್ರದೇಶದ ಜನತೆ ಇನ್ನೂ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸ್ಥಳೀಯ ಉದ್ಯಮಿ, ಆಹಾರ ವಿತರಣೆ ಪ್ರಕ್ರಿಯೆಯ ಸಂಯೋಜಕ ಮುಹಮ್ಮದ್ ಅಸ್ಲಾಂ ಹೇಳಿದ್ದಾರೆ.

ಶನಿವಾರ ಸಂಜೆ ಆಹಾರದ ಪ್ಯಾಕೇಟ್‌ಗಳನ್ನು ವಿತರಿಸಲಾಗುವುದು ಎಂದು ಯಮುನಾ ವಿಹಾರ ಪ್ರದೇಶದ ಮಹಿಳೆಯರಿಗೆ ತಿಳಿಸಲಾಗಿತ್ತು. ಮಧ್ಯಾಹ್ನದ ವೇಳೆಗೇ ಸುಮಾರು 150 ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದರು. ಇವರೊಳಗೆ ಮಾತಿನ ಚಕಮಕಿಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ. ದೊಡ್ಡವರು ಹಸಿವೆಯನ್ನು ತಾಳಿಕೊಳ್ಳಬಹುದು. ಆದರೆ ಮಕ್ಕಳಿಗೆ ಆಹಾರ ಅಗತ್ಯವಾಗಿದೆ. ಪತಿ ದಿನಗೂಲಿ ಮಾಡುತ್ತಿದ್ದರು. ಆದರೆ ಈಗ ಮಾಡಲು ಕೆಲಸವಿಲ್ಲದೆ ಉಪವಾಸ ಇರುವಂತಾಗಿದೆ ಎಂದು ಮೌಜ್‌ಪುರದ ನಿವಾಸಿ ರುಬೀನಾ ಎಂಬವರು ಹೇಳಿದ್ದಾರೆ.

 ಹಿಂಸಾಚಾರದಿಂದ ಉದ್ಯಮ, ಅಂಗಡಿ, ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದ್ದು ಅಂಗಡಿ ತೆರೆಯಲೂ ವ್ಯಾಪಾರಿಗಳು ಹೆದರುತ್ತಿದ್ದಾರೆ. ಅಂಗಡಿ ತೆರೆದರೂ ಗ್ರಾಹಕರು ಬರುತ್ತಾರೆ ಎಂಬ ಗ್ಯಾರಂಟಿಯಿಲ್ಲ, ಜನತೆ ಮನೆಯಿಂದ ಹೊರಹೋಗಲು ಇನ್ನೂ ಹೆದರುತ್ತಿದ್ದಾರೆ ಎಂದು ವ್ಯಾಪಾರಿಗಳು ಸಮಸ್ಯೆ ತೋಡಿಕೊಂಡಿದ್ದಾರೆ. ಕೆಲವು ಅಂಗಡಿಯವರು ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದು ದೈನಂದಿನ ಬಳಿಕೆಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರುತ್ತಿದ್ದಾರೆ ಎಂಬ ದೂರುಗಳೂ ಕೇಳಿಬಂದಿವೆ.

 ಹಿಂಸಾಚಾರ ಕೊನೆಗೊಂಡಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ನಮ್ಮ ಸಂಘರ್ಷ ಇನ್ನೂ ಮುಂದುವರಿದಿದೆ. ಕಿ.ಗ್ರಾಂಗೆ 20 ರೂ. ಬೆಲೆ ಇರುವ ಬಟಾಟೆಯನ್ನು 50 ರೂ.ಗೆ ಮಾರುತ್ತಿದ್ದಾರೆ. ಕೆಲವು ಅಂಗಡಿಗಳಲ್ಲಿ ಒಂದು ಲೀಟರ್ ಹಾಲನ್ನು 100 ರೂ.ಗೆ ಮಾರುತ್ತಿದ್ದಾರೆ. ದಿನಗೂಲಿ ನೌಕರರಾಗಿರುವ ನಮಗೆ ಈಗ ಉದ್ಯೋಗವೂ ಇಲ್ಲ. ದುಬಾರಿ ಬೆಲೆ ವಿಧಿಸುವ ಕಾರಣ ದಿನಬಳಕೆಯ ವಸ್ತುಗಳನ್ನು ಖರೀದಿಸಲು ಸಾಧ್ಯವೇ ಇಲ್ಲದ ಪರಿಸ್ಥಿತಿಯಿದೆ. ಸದ್ಯಕ್ಕೆ ಇತರರು ನೀಡುವ ಸಹಾಯ ಹಸ್ತವನ್ನೇ ನಂಬಿಕೊಂಡಿದ್ದೇವೆ ಎಂದು ಸಕೀನಾ ಎಂಬವರು ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತರಿಗೆ ಸಹಾಯ ಕೋರಿ ಸಾಮಾಜಿಕ ಮಾಧ್ಯಮದ ಮೂಲಕ ಮನವಿ ಮಾಡಿಕೊಳ್ಳಲಾಗಿದೆ. ದಿಲ್ಲಿ ವಿವಿಯ ಉತ್ತರ ಕ್ಯಾಂಪಸ್ ವಿಭಾಗದವರೂ ಪಡಿತರ ದೇಣಿಗೆ ನೀಡಿದ್ದಾರೆ. ಸಿಖ್ ಸಮುದಾಯದವರು ಲಂಗಾರ್ ವ್ಯವಸ್ಥೆ ಮಾಡಿ ದಿನಕ್ಕೆ ಮೂರು ಬಾರಿ ಉಪಾಹಾರ ಒದಗಿಸುವ ವ್ಯವಸ್ಥೆ ಮಾಡಿದ್ದಾರೆ ಎಂದು ಸ್ಥಳೀಯರಾದ ಮುಹಮ್ಮದ್ ಅಸ್ಲಾಂ ಹೇಳಿದ್ದಾರೆ.

ಸಾಮುದಾಯಿಕ ಅಡುಗೆ ಕೋಣೆ

ಹಿಂಸಾಚಾರದ ಕಿಚ್ಚಿನಿಂದ ತಪ್ಪಿಸಿಕೊಂಡಿದ್ದ ಕೆಲವು ಮನೆಗಳ ಅಡುಗೆ ಕೋಣೆ ಈಗ ಸಾಮುದಾಯಿಕ ಅಡುಗೆ ಕೋಣೆಯಂತಾಗಿದೆ. ಒಂದು ಮನೆಯ ಅಡುಗೆ ಕೋಣೆಯಲ್ಲಿ ನಾಲ್ಕೈದು ಮನೆಯವರು ಅಡುಗೆ ಮಾಡಿಕೊಳ್ಳುವ ಪರಿಸ್ಥಿತಿಯಿದೆ. ಶಿವವಿಹಾರ ಪ್ರದೇಶದಲ್ಲಿ ಹಲವು ಮನೆಗಳು ಹಿಂಸಾಚಾರದ ದಳ್ಳುರಿಯಿಂದ ತಪ್ಪಿಸಿಕೊಂಡಿದ್ದು ಈ ಮನೆಗಳ ಅಡುಗೆ ಕೋಣೆಯಲ್ಲಿ ಉಳಿದಿದ್ದ ಆಹಾರ ಪದಾರ್ಥಗಳನ್ನು ಸಮೀಪದ ಕೆಲವು ಮನೆಗಳಿಗೆ ಹಂಚಲಾಗಿದೆ. ಅಗತ್ಯ ಬಿದ್ದವರಿಗೆ ಚಹಾ, ಬಿಸ್ಕಿಟ್, ತಿಂಡಿಗಳನ್ನು ಒದಗಿಸಿದ್ದೇವೆ. ನಮ್ಮಲ್ಲಿ ಇರುವುದನ್ನು ಹಂಚಿ ತಿನ್ನುತ್ತಿದ್ದೇವೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X