Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಅಥವಾ ಗೃಹಸಚಿವರನ್ನು ಮೆಚ್ಚಿಸಲು...

ಪ್ರಧಾನಿ ಅಥವಾ ಗೃಹಸಚಿವರನ್ನು ಮೆಚ್ಚಿಸಲು ಚಿತ್ರ ನಿರ್ಮಾಣ ನಾಚಿಕೆಗೇಡು: ಬಾಲಿವುಡ್ ನಟ ಯಶಪಾಲ ಶರ್ಮಾ

ವಾರ್ತಾಭಾರತಿವಾರ್ತಾಭಾರತಿ1 March 2020 10:36 PM IST
share
ಪ್ರಧಾನಿ ಅಥವಾ ಗೃಹಸಚಿವರನ್ನು ಮೆಚ್ಚಿಸಲು ಚಿತ್ರ ನಿರ್ಮಾಣ ನಾಚಿಕೆಗೇಡು: ಬಾಲಿವುಡ್ ನಟ ಯಶಪಾಲ ಶರ್ಮಾ

ಹೊಸದಿಲ್ಲಿ,ಮಾ.1: ದಿಲ್ಲಿ ಹಿಂಸಾಚಾರವನ್ನು ನಿಭಾಯಿಸಿದ ರೀತಿ,ಸಿಎಎ ಅಂಗೀಕಾರ ಮತ್ತು ಎನ್‌ಆರ್‌ಸಿ ಭೀತಿಯನ್ನು ಸೃಷ್ಟಿಸಿದ್ದಕ್ಕಾಗಿ ಬಾಲಿವುಡ್ ಕಲಾವಿದ ಯಶಪಾಲ ಶರ್ಮಾ ಅವರು ಕೇಂದ್ರ ಸರಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.

ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಜಕೀಯ ಬಯೊಪಿಕ್‌ಗಳನ್ನು ನಿರ್ಮಿಸುವ ಇತ್ತೀಚಿನ ಪ್ರವೃತ್ತಿಯನ್ನೂ ಯಾವುದೇ ಚಿತ್ರವನ್ನು ಹೆಸರಿಸದೆ ಟೀಕಿಸಿದ ಅವರು,ಯಾರನ್ನಾದರೂ ಮೆಚ್ಚಿಸಲು ಚಿತ್ರವೊಂದನ್ನು ನಿರ್ಮಿಸಲು ನಿರ್ದೇಶಕನೋರ್ವ ನಿರ್ಧರಿಸಿದರೆ ಅಂದೇ ಆತ ಸತ್ತಂತೆ. ಪ್ರಧಾನಿ ಅಥವಾ ಗೃಹಸಚಿವರನ್ನು ಮೆಚ್ಚಿಸಲು ಚಿತ್ರವೊಂದನ್ನು ಮಾಡಬೇಕು ಎಂದು ಅನ್ನಿಸಿದರೆ ಅದು ನಿರ್ದೇಶಕನ ಸೃಜನಶೀಲತೆಗೆ ನಾಚಿಕೆಗೇಡಿನ ವಿಷಯವಾಗಿದೆ ಎಂದರು.

ಸಿಎಎ ಮತ್ತು ಎನ್‌ಆರ್‌ಸಿಗೆ ತಾನು ವಿರುದ್ಧವಾಗಿದ್ದೇನೆ ಎಂದ ಅವರು,ಇವರೆಡೂ ಕಾಯ್ದೆಗಳನ್ನು ಸಮಗ್ರವಾಗಿ ತಿಳಿದುಕೊಂಡಿದ್ದೇನೆ ಎಂದು ತಾನು ಶೇ.100ರಷ್ಟು ನಿಖರವಾಗಿ ಹೇಳುವುದಿಲ್ಲ,ಆದರೆ ತನಗೆ ತಿಳಿದಿರುವಂತೆ ಈ ಕಾಯ್ದೆಗಳು ಜನರನ್ನು ಸರದಿ ಸಾಲುಗಳಲ್ಲಿ ನಿಲ್ಲುವ ಅಥವಾ ದಾಖಲೆಗಳಿಗಾಗಿ ಹುಡುಕಾಡುವ ಅರ್ಥಹೀನ ಚಟುವಟಿಕೆಗಳಲ್ಲಿ ವ್ಯಸ್ತವಾಗಿಸುತ್ತವೆ,ಹೀಗಾಗಿ ತಾನು ಅವುಗಳನ್ನು ವಿರೋಧಿಸುತ್ತೇನೆ. ಜನರು ನಿರುದ್ಯೋಗಿಗಳಾಗಿದ್ದಾರೆ ಎಂಬ ಮಾತ್ರಕ್ಕೆ ನೀವು ಅವರಿಗೆ ಇಂತಹ ಕೆಲಸಗಳನ್ನು ನೀಡುವುದಲ್ಲ. ಸರಿಯಾದ ಕೆಲಸ ನೀಡುವುದು ಉದ್ಯೋಗ ಸೃಷ್ಟಿಯಾಗಿದೆ ಎಂದರು.

ದಿಲ್ಲಿ ಹಿಂಸಾಚಾರಕ್ಕೆ ಬಿಜೆಪಿ ನಾಯಕ ಕಪಿಲ್ ಮಿಶ್ರಾರಂತಹ ಕೆಲವು ರಾಜಕಾರಣಿಗಳ ದ್ವೇಷಪೂರ್ಣ ಭಾಷಣಗಳೇ ಮುಖ್ಯ ಕಾರಣ ಎಂದ ಅವರು,ರಾಷ್ಟ್ರ ರಾಜಧಾನಿಯಲ್ಲಿನ ಹಿಂಸಾಚಾರವನ್ನು 2002ರ ಗುಜರಾತ್ ಕೋಮುಗಲಭೆಗೆ ಹೋಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X