Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ವಿಜಯ- ವಿಕ್ರಮ ಜೋಡುಕರೆ...

ಉಪ್ಪಿನಂಗಡಿ: ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ1 March 2020 10:44 PM IST
share
ಉಪ್ಪಿನಂಗಡಿ: ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಾರೋಪ

ಉಪ್ಪಿನಂಗಡಿ: ತುಳುನಾಡ ಮಣ್ಣಿನ ಅಂತಃಸತ್ವವುಳ್ಳ ವೀರ ಕ್ರೀಡೆ ಕಂಬಳವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಕ್ರೀಡೆಯನ್ನು ಜಗತ್ತಿನೆಲ್ಲೆಡೆ ಹಬ್ಬಿಸಿ ತುಳುನಾಡಿನ ಭವ್ಯ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಣಬಡಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಯಾವುದೇ ಶಕ್ತಿಗಳು ಈ ಕ್ರೀಡೆಗೆ ಅಡ್ಡ ಬಂದರೂ ಕಂಬಳ ಕ್ರೀಡೆಯ ಉಳಿವಿಗಾಗಿ ಅದನ್ನು ಒಗ್ಗೂಡಿ ವಿರೋಧಿಸೋಣ ಎಂದು ಉಪ್ಪಿನಂಗಡಿಯ ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದರು.

ಉಪ್ಪಿನಂಗಡಿ ಕೂಟೇಲು ಬಳಿಯ ಹಳೆಗೇಟುವಿನ ನೇತ್ರಾವತಿ ನದಿ ಕಿನಾರೆಯಲ್ಲಿ ಮಾ.1ರಂದು ನಡೆದ ವಿಜಯ- ವಿಕ್ರಮ ಜೋಡುಕರೆ ಕಂಬಳದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ವೇದಿಕೆಯಲ್ಲಿ ತಾ.ಪಂ. ಸದಸ್ಯ ಮುಕುಂದ ಗೌಡ ಬಜತ್ತೂರು, ದ.ಕ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಪಿ.ಆರ್.ಶೆಟ್ಟಿ ಕೂಳೂರು ಪೊಯ್ಯೊಲ್, ಕಂಬಳದ ಪ್ರಧಾನ ತೀರ್ಪುಗಾರರಾದ ಎಂ. ರಾಜೀವ ಶೆಟ್ಟಿ ಎಡ್ತೂರು, ತೀರ್ಪುಗಾರರ ಸಂಚಾಲಕರಾದ ರವೀಂದ್ರ ಕುಮಾರ್ ಕುಕ್ಕುಂದೂರು, ವಿಜಯ ಕುಮಾರ್ ಜೈನ್ ಕಂಗಿನಮನೆ, ವಿದ್ಯಾಧರ ಜೈನ್ ರೆಂಜಾಳ, ಉದ್ಯಮಿಗಳಾದ ರಾಜೇಶ್ ರೈ, ನಟೇಶ್ ಪೂಜಾರಿ, ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿಯ ಗೌರವಾಧ್ಯಕ್ಷ ಎನ್. ಉಮೇಶ ಶೆಣೈ, ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆ ಹಿತ್ಲು, ಉಪಾಧ್ಯಕ್ಷರಾದ ರಾಮಚಂದ್ರ ಮಣಿಯಾಣಿ, ವಿಠಲ ರೈ ಕೊಲ್ಯೊಟ್ಟು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಸಂಘಟನಾ ಕಾರ್ಯದರ್ಶಿಗಳಾದ ಯೊಗೀಶ್ ಸಾಮಾನಿ ಸಂಪಿಗೆದಡಿ ಮಠಂತಬೆಟ್ಟು, ಕೃಷ್ಣಪ್ರಸಾದ್ ಬೊಳ್ಳಾವು, ಸಹ ಸಂಚಾಲಕ ಜಯಪ್ರಕಾಶ್ ಬದಿನಾರು, ಸಮಿತಿಯ ದಿಲೀಪ್ ರೈ ಕರಾಯ, ಶಿವರಾಮ ಶೆಟ್ಟಿ ಗೋಳ್ತಮಜಲು, ಪ್ರಜೀತ್ ಕೋಡಿಂಬಾಡಿ, ಜಯಂತ ಪೊರೋಳಿ, ಕೇಶವ ಪದಬರಿ, ಜಗದೀಶ್ ಕುಮಾರ್ ಪರಕಜೆ  ಮತ್ತಿತರರು ಉಪಸ್ಥಿತರಿದ್ದರು.

ಕಂಬಳ ಸಮಿತಿಯ ಕೇಶವ ರಂಗಾಜೆ ಸ್ವಾಗತಿಸಿದರು. ಗೌರವ ಸಲಹೆಗಾರ ನಿರಂಜನ್ ರೈ ಮಠಂತಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಫಲಿತಾಂಶ: ಈ ಬಾರಿಯ ವಿಜಯ- ವಿಕ್ರಮ ಕಂಬಳದಲ್ಲಿ 142 ಜೊತೆ ಕೋಣಗಳು ಭಾಗವಹಿಸಿವೆ. 

ಕನೆಹಲಗೆ ವಿಭಾಗ: ಬಾರಕೂರು ಶಾಂತರಾಮ ಶೆಟ್ಟಿ ( ಕೋಣ ಓಡಿಸಿದವರು: ಮಂದಾರ್ತಿ ಶೀರೂರು ಗೋಪಾಲ ನಾೈಯ್ಕ) ಹಾಗೂ ವಾಮಂಜೂರು ತಿರುವೈಲುಗುತ್ತು ಅಭಯನವೀನ್ ಚಂದ್ರ ಆಳ್ವ (ಕೋಣ ಓಡಿಸಿದವರು: ಬೈಂದೂರು ಭಾಸ್ಕರ್) ಆರೂವರೆ ಕೋಲು ನಿಶಾನಿಗೆ ನೀರು ಹಾಯಿಸುವ ಮೂಲಕ ಬಹುಮಾನವನ್ನು ತಮ್ಮದಾಗಿಸಿಕೊಂಡಿವೆ.

ಹಗ್ಗ ಹಿರಿಯ ವಿಭಾಗ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (ಬಿ) ( ಕೋಣ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್- 10.44ಸೆ.) ಪ್ರಥಮ ಬಹುಮಾನವನ್ನು ತನ್ನದಾಸಿಕೊಂಡರೆ, ನಂದಳಿಕೆ ಶ್ರೀಕಾಂತ್ ಭಟ್ (ಎ) (ಕೋಣ ಓಡಿಸಿದವರು: ವಿಜಾರು ಅಶ್ವಥಪುರ ಶ್ರೀನಿವಾಸ ಗೌಡ- 10.50 ಸೆ.) ದ್ವಿತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹಗ್ಗ ಕಿರಿಯ ವಿಭಾಗ: ಏರ್ಮಾಳು ರೋಹಿತ್ ಹೆಗ್ಡೆ (ಬಿ) (ಕೋಣ ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ- 14.12ಸೆ.) ಪ್ರಥಮ ಹಾಗೂ ಮಿಜಾರು ಪ್ರಸಾದ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ (ಕೋಣ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ- 14.21 ಸೆ.) ದ್ವಿತೀಯ ಬಹುಮಾನ ಪಡೆದಿದ್ದಾರೆ. 

ಅಡ್ಡ ಹಲಗೆ: ಬೋಳಾರ ತ್ರಿಶಾಲ್ ಕೆ. ಪೂಜಾರಿ (ಬಿ) (ಕೋಣ ಓಡಿಸಿದವರು: ಮಂದಾರ್ತಿ ಶಿರೂರು ಗೋಪಾಲ ನಾಯ್ಕ 14.43) ಪ್ರಥಮ ಹಾಗೂ ಮೋರ್ಲಾ ಗಿರೀಶ್ ಆಳ್ವ (ಕೋಣ ಓಡಿಸಿದವರು: ನಾರಾವಿ ಯುವರಾಜ್ ಜೈನ್ - 14.82ಸೆ.) ದ್ವಿತೀಯ ಬಹುಮಾನ ಪಡೆದಿದ್ದಾರೆ.

ನೇಗಿಲು ಹಿರಿಯ: ಮೂಡಬಿದ್ರೆ ನ್ಯೂ ಪಡಿವಾಳ, ಹಾರ್ದಿಕ್ ಹರ್ಷವರ್ಧನ ಪಡಿವಾಳ್ (ಕೋಣ ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ - 14.07) ಪ್ರಥಮ ಹಾಗೂ ಕಕ್ಯಪದವು ಪೆಂರ್ಗಾಲ್ ಬಾಬು ವೆಂಕಪ್ಪ ಗೌಡ (ಬಿ) ( ಕೋಣ ಓಡಿಸಿದವರು: ಬೆಳ್ಳಾರೆ ಪನ್ನೆ ನಾಸೀರ್- 14.43 ಸೆ.) ದ್ವಿತೀಯ ಬಹುಮಾನವನ್ನು ತನ್ನದಾಗಿಸಿಕೊಂಡಿದ್ದಾರೆ. 

ನೇಗಿಲು ಕಿರಿಯ: ಉಡುಪಿ ಹಿರೆಬೆಟ್ಟು ಶಂಕರದೇವಾಡಿಗ (ಕೋಣ ಓಡಿಸಿದವರು: ಹಿರೇಬೆಟ್ಟು ಆಕಾಶ್ - 14.43ಸೆ.) ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಸಿದ್ದಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ (ಕೋಣ ಓಡಿಸಿದವರು: ಬಾರಾಡಿ ನತೇಶ್ - 14.88 ಸೆ.) ತಮ್ಮದಾಗಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X