ಸೇನಾ ನೇಮಕಾತಿ: ಉಡುಪಿ ಜಿಲ್ಲೆಯ ಯುವಕರಿಗೆ ಉಚಿತ ತರಬೇತಿ
ಉಡುಪಿ, ಮಾ. 2: ಭಾರತೀಯ ಸೇನೆಯಲ್ಲಿ ಸೇರ್ಪಡೆಗೊಳ್ಳುವ ಉಡುಪಿ ಜಿಲ್ಲೆಯ ಅ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತಿ ಹೊಂದಿರುವ ಅ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಎ.4ರಿಂದ 14 ರವರೆಗೆ ನಡೆಂುಲಿರುವ ಸೇನಾ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅ್ಯರ್ಥಿಗಳಿಗೆ ಮಾ.15ರಿಂದ 31ರವರೆಗೆ ಉಚಿತ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾ.12ರ ಒಳಗೆ ಬೆಳಗ್ಗೆ 9 ರಿಂದ ಸಂಜೆ 5ರ ವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ (ಮೊಬೈಲ್: 9480886467) ಇವರನ್ನು ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.





