Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಇತಿಹಾಸ ತಿರುಚಬೇಡಿ': ತೀವ್ರ ಚರ್ಚೆಗೆ...

'ಇತಿಹಾಸ ತಿರುಚಬೇಡಿ': ತೀವ್ರ ಚರ್ಚೆಗೆ ಗ್ರಾಸವಾದ ಸಂವಿಧಾನ ಕುರಿತ ಸ್ಪೀಕರ್ ಕಾಗೇರಿ ಭಾಷಣ

ವಾರ್ತಾಭಾರತಿವಾರ್ತಾಭಾರತಿ4 March 2020 5:39 PM IST
share
ಇತಿಹಾಸ ತಿರುಚಬೇಡಿ: ತೀವ್ರ ಚರ್ಚೆಗೆ ಗ್ರಾಸವಾದ ಸಂವಿಧಾನ ಕುರಿತ ಸ್ಪೀಕರ್ ಕಾಗೇರಿ ಭಾಷಣ

ಬೆಂಗಳೂರು, ಮಾ. 4: ‘ಮಂಗಳೂರು ಮೂಲದ ಬಿ.ಎನ್.ರಾವ್ ಎಂಬವರು ಸಂವಿಧಾನದ ಮೂಲ ಕರಡು ಪ್ರತಿಯನ್ನು ರಚಿಸಿ ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚಿಸಲಾದ ಸಂವಿಧಾನದ ಕರಡು ಸಮಿತಿಗೆ ಸಲ್ಲಿಸಲಾಗಿತ್ತು’ ಎಂಬ ಸಂವಿಧಾನದ ಕುರಿತ ಸ್ಪೀಕರ್ ಕಾಗೇರಿ ಅವರ ಪ್ರಾಸ್ತಾವಿಕ ಭಾಷಣದಲ್ಲಿನ ಉಲ್ಲೇಖ ವಿಧಾನಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು.

ಬುಧವಾರ ವಿಧಾನಸಭೆಯಲ್ಲಿ ಸಂವಿಧಾನದ ಕುರಿತ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸಿನ ಹಿರಿಯ ಸದಸ್ಯ ಎಚ್.ಕೆ.ಪಾಟೀಲ್, ಬಿ.ಎನ್.ರಾವ್ ಸಂವಿಧಾನದ ಕರಡನ್ನು ರಚನೆ ಮಾಡಿದ್ದಾರೆಂಬದು ತಪ್ಪು ಮಾಹಿತಿ. ಇತಿಹಾಸ ತಿರುಚುವ ಕೆಲಸ ಪೀಠದಲ್ಲಿ ಕೂತವರಿಂದ ಆಗಬಾರದು ಎಂದು ಮನವಿ ಮಾಡಿದರು.

ಕೂಡಲೇ ಮಧ್ಯಪ್ರವೇಶಿಸಿದ ಸ್ಪೀಕರ್, ಒಂದು ವೇಳೆ ಆಕಸ್ಮಿಕವಾಗಿ ತಪ್ಪಾಗಿದಲ್ಲಿ ಅದನ್ನು ತಿದ್ದುಪಡಿ ಮಾಡಿಕೊಳ್ಳುತ್ತೇವೆ. ಅಲ್ಲದೆ, ಉಲ್ಲೇಖಿತ ಪ್ಯಾರವನ್ನು ನನ್ನ ಭಾಷಣದಿಂದ ಕೈಬಿಡಲಾಗುವುದು ಎಂದು ಇದೇ ವೇಳೆ ಸ್ಪೀಕರ್ ಕಾಗೇರಿ ಸದನಕ್ಕೆ ಸ್ಪಷ್ಟನೆ ನೀಡಿದರು.

ಪೂರ್ವಾಶ್ರಮದ ಭಾಗ: ಬಳಿಕ ಮಾತು ಮುಂದುವರಿಸಿದ ಎಚ್.ಕೆ.ಪಾಟೀಲ್, ಸ್ಪೀಕರ್ ಭಾಷಣದಲ್ಲಿ ಸ್ವಾತಂತ್ರ್ಯ ಹೋರಾಟ, ಸೇನಾನಿಗಳು ಹಾಗೂ ದೇಶದ ಮೊಟ್ಟ ಮೊದಲ ಪ್ರಧಾನಿ ನೆಹರೂ ಅವರ ಹೆಸರಿಲ್ಲ. ಅಲ್ಲದೆ, ಸ್ವಾತಂತ್ರ್ಯ, ಸಂವಿಧಾನ ಮತ್ತು ದೇಶದ ಪ್ರಶ್ನೆ ಬಂದಾಗ ಕಾಂಗ್ರೆಸ್ ಕೊಡುಗೆ ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ, ಈ ಬಗ್ಗೆ ಸ್ಪೀಕರ್ ಎಲ್ಲಿಯೂ ಉಲ್ಲೇಖಿಸದಿರುವುದು ಬೇಸರದ ಸಂಗತಿ ಎಂದು ಗಮನ ಸೆಳೆದರು.

ಕಾಂಗ್ರೆಸ್‌ನ ನೈಜ ಹೋರಾಟದ ಬಗ್ಗೆ ಎಲ್ಲರಿಗೂ ಕೃತಜ್ಞತಾ ಭಾವನೆ ಇರಬೇಕು. ಆದರೆ, ಸ್ಪೀಕರ್ ಕಾಗೇರಿ ಅವರಿಗೆ ತಮ್ಮ ಪೂರ್ವಾಶ್ರಮದ ಹಿನ್ನೆಲೆ ಕಾರಣಕ್ಕೆ ಅವರ ರಾಜಕೀಯ ಮನಸ್ಸು ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ನೆನಪು ಮಾಡಿಕೊಳ್ಳಲು ತಡೆದಿದೆ ಎಂದು ಪಾಟೀಲ್, ಸ್ಪೀಕರ್ ವಿರುದ್ಧ ನೇರವಾಗಿ ದೂರಿದರು.

ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಂವಿಧಾನದ ಕರಡು ಸಮಿತಿಯಲ್ಲಿ 7 ಜನ ಸದಸ್ಯರಿದ್ದರು. ಆ ಪೈಕಿ ಒಬ್ಬರು ನಿಧನರಾಗಿದ್ದು ಒಬ್ಬರು ಅಮೆರಿಕಾದಲ್ಲಿದ್ದರು. ಇಬ್ಬರು ಸಭೆ ಹೋಗುತ್ತಿರಲಿಲ್ಲ. ಉಳಿದವರು ಬೇರೆ ಬೇರೆ ಕಾರಣಗಳಿಂದಾಗಿ ಸಕ್ರಿಯರಾಗಿರಲಿಲ್ಲ. ಹೀಗಾಗಿ ಡಾ.ಅಂಬೇಡ್ಕರ್ ಅವರೊಬ್ಬರೆ ಶ್ರಮಿಸಿ ಸಂವಿಧಾನ ರಚನೆ ಮಾಡಿದರು ಎಂದು ನೆನಪಿಸಿದರು.

‘ಸಂವಿಧಾನದ ರಚನೆ ಹಿಂದೆ ಡಾ.ಅಂಬೇಡ್ಕರ್ ಅವರ ಶ್ರಮ ಅಪಾರವಾದುದು. ಸಮಿತಿಯಲ್ಲಿದ್ದ 7 ಜನರಲ್ಲಿ ಎಲ್ಲರೂ ಗೈರು ಹಾಜರಾಗಿದ್ದ ಸಂದರ್ಭದಲ್ಲಿ ಸಂವಿಧಾನ ರಚನೆ ಮಾಡಿದರು. ಹೀಗಾಗಿ ಅಂಬೇಡ್ಕರ್ ಅವರ ಶ್ರಮ ಅದ್ವಿತೀಯ. ತುಳಿತಕ್ಕೆ ಒಳಗಾದ ಜನರಿಗೆ ನ್ಯಾಯಯುತ ಹಕ್ಕುಗಳು ದಕ್ಕಬೇಕೆಂಬ ಕಾರಣಕ್ಕೆ ಅವರು ಅವಿರತ ಶ್ರಮಿಸಿದ್ದಾರೆಂಬುದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಎಲ್ಲ ಗೌರವವೂ ಡಾ.ಅಂಬೇಡ್ಕರ್ ಅವರಿಗೆ ಸಲ್ಲಬೇಕು’

-ಯಡಿಯೂರಪ್ಪ, ಮುಖ್ಯಮಂತ್ರಿ

‘ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲೇ ಸಂವಿಧಾನ ರಚನೆ ಸಿದ್ಧತೆ ನಡೆದಿತ್ತು. ಆದರೆ, ಸಂವಿಧಾನ ಕೇಂದ್ರಿತವಾಗಿ ನಾನು ಪ್ರಾಸ್ತಾವಿಕ ಮಾತುಗಳನ್ನು ಹೇಳಿದ್ದೇನೆ. ಅಂದರೆ, ಸ್ವಾತಂತ್ರ್ಯ ಹೋರಾಟ, ಹೋರಾಟಗಾರರಿಗೆ ಪ್ರಾಮುಖ್ಯತೆ ಇಲ್ಲ ಎಂದು ಯಾರೂ ಭಾವಿಸಬೇಕಿಲ್ಲ’

-ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X