Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯ ಬಜೆಟ್ 2020-21: ಶಿಕ್ಷಣ,...

ರಾಜ್ಯ ಬಜೆಟ್ 2020-21: ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಲಭಿಸಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ5 March 2020 12:57 PM IST
share
ರಾಜ್ಯ ಬಜೆಟ್  2020-21: ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ  ಲಭಿಸಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಮಾ.5:  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಮಂಡಿಸಿದ ರಾಜ್ಯ  ಬಜೆಟ್  2020-21ರಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳ ವಿವರ ಇಂತಿವೆ.

►ಒಂದೇ ಸೂರಿನಡಿ ಪೂರ್ವ ಪ್ರಾಥಮಿಕ ತರಗತಿಗಳಿಂದ ಪದವಿ ಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

►ನಬಾರ್ಡ್ ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ 3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ.

►ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ.

►ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ.

►ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ

►ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು “ಶಿಕ್ಷಕ ಮಿತ್ರ” ಎಂಬ ಮೊಬೈಲ್ ಆ್ಯಪ್ ಅಭಿವೃದ್ಧಿ.

►400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ.

►ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ.

►ತಂತ್ರಜ್ಞಾನದ ನೆರವಿನಿಂದ ರಾಜ್ಯದ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ.

►ಇಂಟರ್ಯಾಕ್ಟೀವ್ ಆನ್-ಲೈನ್ ಕೋರ್ಸ್‍ಗಳನ್ನು (M.O.O.C) ಪ್ರಾರಂಭ ಹಾಗೂ ಗುಣಾತ್ಮಕ ಇ-ಕಂಟೆಂಟ್ ಅಭಿವೃದ್ಧಿಗೆ ಒಂದು ಕೋಟಿ ರೂ. ವೆಚ್ಚ

►ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ತಲಾ ಐದು ಕೋಟಿ ರೂ. ವೆಚ್ಚದಲ್ಲಿ ಜಿಯೋಸ್ಪೇಶಿಯಲ್ ತಂತ್ರಜ್ಞಾನ ಕೇಂದ್ರ ಸ್ಥಾಪನೆ.

►ಏಷ್ಯಾ ಖಂಡದ ದೇಶಗಳ ಶಿಕ್ಷಣ ಸಚಿವರ ಶೈಕ್ಷಣಿಕ ಸಮಾವೇಶ ಮತ್ತು ಬೃಹತ್ ವಸ್ತು ಪ್ರದರ್ಶನ ಆಯೋಜನೆ.

►ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆ  ವಿಸ್ತರಣೆ.

►ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

►ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನ.

►ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ.

►ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ.

►ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕೃಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂ. ಅನುದಾನ.

►ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ.

►ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

►ರಾಜ್ಯದ 17 ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ (Neonatal Intensive Care Unit) ಹಂತ ಹಂತವಾಗಿ ಉನ್ನತೀಕರಣ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮಂಗಳೂರಿನ ವಿಭಾಗೀಯ ಆಧುನಿಕ ಮಕ್ಕಳ ಆರೋಗ್ಯ ಕೇಂದ್ರದ ಮಾದರಿಯ ಕೇಂದ್ರಗಳ ಸ್ಥಾಪನೆ.

►ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ತಲಾ ಮೂರು ಕೋಟಿ ರೂ. ವೆಚ್ಚದಲ್ಲಿ ಸಿಮ್ಯುಲೇಷನ್ ಲ್ಯಾಬ್ ಮತ್ತು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಮಾಲಿಕ್ಯುಲಾರ್ ಬಯಾಲಜಿ ಲ್ಯಾಬ್ ಸ್ಥಾಪನೆ.

►ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆರ್ಥಿಕ ನೆರವಿನೊಂದಿಗೆ ಚರ್ಮಶಾಸ್ತ್ರ ಮತ್ತು ಸೌಂದರ್ಯವರ್ಧಕ ಶಾಸ್ತ್ರದ ಸಂಸ್ಥೆ ಮತ್ತು ಜಿರಿಯಾಟ್ರಿಕ್ಸ್ ಸಂಸ್ಥೆಗಳ ಸ್ಥಾಪನೆ.

►ವೈದ್ಯಕೀಯ, ಶುಶ್ರೂಷಾ, ಅರೆ-ವೈದ್ಯಕೀಯ ಮತ್ತು ಫಾರ್ಮಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಂದು ಕೇಂದ್ರೀಕೃತ ಉದ್ಯೋಗ ಕೋಶ ಸ್ಥಾಪನೆ.

►ಆಯವ್ಯಯದಲ್ಲಿ ಮಹಿಳೆಯರ ಕಲ್ಯಾಣಕ್ಕಾಗಿ 37,783 ಕೋಟಿ ರೂ.ಗಳ 953 ಕಾರ್ಯಕ್ರಮಗಳ ನಿಗದಿ. ಇದು ಒಟ್ಟಾರೆ ಆಯವ್ಯಯ ಗಾತ್ರದ ಶೇ.15.88 ರಷ್ಟು.

►ರಾಜ್ಯದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಮಕ್ಕಳ ಆಯವ್ಯಯ ಮಂಡನೆ. ರಾಜ್ಯದಲ್ಲಿರುವ 18 ವರ್ಷದ ಕೆಳಗಿರುವ ಎಲ್ಲಾ ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆ ಅಡಕ. 2020-21ನೇ ಸಾಲಿನ ಆಯವ್ಯಯದಲ್ಲಿ 36,340 ಕೋಟಿ ರೂ.ಗಳ 279 ಕಾರ್ಯಕ್ರಮಗಳ ಪ್ರಸ್ತಾಪ. ಇದು ಒಟ್ಟಾರೆ ಆಯವ್ಯಯ ಗಾತ್ರದ 15.28 ರಷ್ಟು.

►ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯದಲ್ಲಿ ಏಳು ಹೊಸ ಬಾಲಮಂದಿರಗಳ ಸ್ಥಾಪನೆ. 5.67 ಕೋಟಿ ರೂ. ಅನುದಾನ.

►ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಸುಧಾರಣಾ ಸಂಸ್ಥೆಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್. ಐದು ಕೋಟಿ ರೂ. ಅನುದಾನ.

►ನೆರೆ ಹಾವಳಿಯಿಂದ ಹಾನಿಯಾದ 842 ಅಂಗನವಾಡಿ ಕೇಂದ್ರಗಳ ಪುನರ್ ನಿರ್ಮಾಣಕ್ಕೆ 138 ಕೋಟಿ ರೂ.

►ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಪಾರದರ್ಶಕವಾಗಿ ಮಹಿಳೆಯರಿಗೆ ತಲುಪಿಸಲು ಮಹಿಳಾ ಸುರಕ್ಷತಾ ಪೋರ್ಟಲ್ ಪ್ರಾರಂಭ.

►ಬಾಲಮಂದಿರದಿಂದ 21 ವರ್ಷ ತುಂಬಿದ ನಂತರ ಬಿಡುಗಡೆ ಹೊಂದುವವರಿಗೆ ಜೀವನೋಪಾಯ ರೂಪಿಸಿಕೊಳ್ಳಲು “ಉಪಕಾರ” ಯೋಜನೆಯಡಿ ಮೂರು ವರ್ಷ ಅವಧಿಗೆ ಮಾಸಿಕ 5000 ರೂ. ಆರ್ಥಿಕ ನೆರವು; ಕೌಶಲ್ಯಾಭಿವೃದ್ಧಿ ತರಬೇತಿಗೆ ಕ್ರಮ. ಒಂದು ಕೋಟಿ ರೂ. ಅನುದಾನ.

►ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಸರಬರಾಜು ಮಾಡುವ ಮಹಿಳಾ ಪೂರಕ ಪೌಷ್ಟಿಕ ಉತ್ಪಾದನಾ ಕೇಂದ್ರಗಳ ಆಧುನೀಕರಣಕ್ಕೆ ಮಹಿಳಾ ಅಭಿವೃದ್ಧಿ ನಿಗಮದಿಂದ 20 ಲಕ್ಷ ರೂ. ವರೆಗೆ ಬಡ್ಡಿ ರಹಿತ ಕಿರು ಸಾಲ ಸೌಲಭ್ಯ. 20 ಕೋಟಿ ರೂ. ಅನುದಾನ.

►ಸ್ತ್ರೀಶಕ್ತಿ ಸ್ವ-ಸಹಾಯ ಸಂಘದ ಉತ್ಪನ್ನಗಳನ್ನು ಸರ್ಕಾರದ ಇಲಾಖೆಗಳಲ್ಲಿ ಅವಶ್ಯಕತೆಗನುಸಾರ ಖರೀದಿಸಲು ಕ್ರಮ.

►ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಟ್ರಾನ್ಸ್‍ಜೆಂಡರ್‍ರವರ ಮೂಲಹಂತದ (Base line) ಸಮೀಕ್ಷೆ ಕೈಗೊಳ್ಳಲು 70 ಲಕ್ಷ ರೂ. ಅನುದಾನ.

►ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ವಿತರಿಸಲು 60 ಲಕ್ಷ ರೂ. ಅನುದಾನ

►ದೃಷ್ಟಿದೋಷವುಳ್ಳ ವ್ಯಕ್ತಿಗಳಿಗಾಗಿ ಬೆಂಗಳೂರಿನಲ್ಲಿ ಹಾಗೂ ಕಲಬುರಗಿಯಲ್ಲಿ 30 ಲಕ್ಷ ರೂ.ಗಳ ವೆಚ್ಚದಲ್ಲಿ ಬ್ರೈಲ್ ಕಂ ಟಾಕಿಂಗ್ ಲೈಬ್ರರಿ ಸ್ಥಾಪನೆ. ಮೈಸೂರಿನ ಸರ್ಕಾರಿ ಬ್ರೈಲ್ ಮುದ್ರಣಾಲಯಕ್ಕೆ 80 ಲಕ್ಷ ರೂ.ಗಳ ವೆಚ್ಚದಲ್ಲಿ ಆಧುನಿಕ ಮುದ್ರಣ ಯಂತ್ರ ಖರೀದಿ.

►ರಾಜ್ಯದ 500 ಅಂಧ ವಿದ್ಯಾರ್ಥಿಗಳಿಗೆ ತಲಾ 25,000 ರೂ.ಗಳ ಮೊತ್ತದ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್ ಹಾಗೂ ವಾಕಿಂಗ್ ಸ್ಟಿಕ್‍ಗಳನ್ನೊಳಗೊಂಡ ಕಿಟ್ ವಿತರಣೆ. 1.25 ಕೋಟಿ ರೂ. ಅನುದಾನ.

►ಅಂಧ ತಾಯಂದಿರಿಗೆ ನೀಡುವ ಮಾಸಿಕ 2000 ರೂ. ಶಿಶುಪಾಲನಾ ಭತ್ತೆ ಯೋಜನೆ ಮಗುವಿನ ಮೊದಲ ಎರಡು ವರ್ಷಗಳಿಂದ ಐದು ವರ್ಷದ ವರೆಗೆ ವಿಸ್ತರಣೆ.

►“ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ”ಯೋಜನೆಯಡಿಯಲ್ಲಿ ಒಂದು ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರುಗಳಿಗೆ ಅನುಮೋದಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು “ಉಚಿತ ಪ್ರಿಪೇಯ್ಡ್ ಹೆಲ್ತ್ ಕಾರ್ಡ್” ವಿತರಣೆ.

►“ವನಿತಾ ಸಂಗಾತಿ”ಯೋಜನೆಯಡಿ ಗಾರ್ಮೆಂಟ್ ಉದ್ಯಮಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಮಾಸಿಕ ಬಸ್ ಪಾಸ್ ವಿತರಣೆಗೆ 25 ಕೋಟಿ ರೂ. ಅನುದಾನ.

►ನಗರ ಪ್ರದೇಶಗಳಲ್ಲಿ ದುಡಿಯುತ್ತಿರುವ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರ ಆರೋಗ್ಯ ರಕ್ಷಣೆಗೆ 10 “ಮೊಬೈಲ್ ಕ್ಲಿನಿಕ್”ಪ್ರಾರಂಭ.

►ಕಟ್ಟಡ ಕಾರ್ಮಿಕರ ಮಕ್ಕಳ ಪಾಲನೆಗೆ ಕಟ್ಟಡ ನಿರ್ಮಾಣ

►ಸ್ಥಳದಲ್ಲಿ 10 ಸಂಚಾರಿ ಶಿಶುಪಾಲನಾ ಕೇಂದ್ರಗಳನ್ನು ಒಳಗೊಂಡಂತೆ

►ಒಟ್ಟು 110 “ಕಿತ್ತೂರು ರಾಣಿ ಚೆನ್ನಮ್ಮ” ಶಿಶು ಪಾಲನಾ ಕೇಂದ್ರಗಳ ಸ್ಥಾಪನೆ.

►“ಆಹಾರ” ತಂತ್ರಾಂಶ ಉನ್ನತೀಕರಿಸಲು ಕ್ರಮ.

►ಕಾನೂನು ಮಾಪನ ಶಾಸ್ತ್ರ ಇಲಾಖೆಯ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಉಸ್ತುವಾರಿ  ಬಿಗಿಗೊಳಿಸಲು “ಇ-ಮಾಪನ” ತಂತ್ರಾಂಶ ಉನ್ನತೀಕರಣ.

►2020-21ನೇ ಸಾಲಿನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ನಿಗದಿ ಪಡಿಸಿದ ಒಟ್ಟು ಅನುದಾನ 72,093 ಕೋಟಿ ರೂ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X