Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕೊರೊನಾವೈರಸ್ ಅಪಾಯದಿಂದ ಪಾರಾಗಲು ಏನು...

ಕೊರೊನಾವೈರಸ್ ಅಪಾಯದಿಂದ ಪಾರಾಗಲು ಏನು ಮಾಡಬೇಕು: ಇಲ್ಲಿದೆ ವಿವರ

ವಾರ್ತಾಭಾರತಿವಾರ್ತಾಭಾರತಿ5 March 2020 7:18 PM IST
share
ಕೊರೊನಾವೈರಸ್ ಅಪಾಯದಿಂದ ಪಾರಾಗಲು ಏನು ಮಾಡಬೇಕು: ಇಲ್ಲಿದೆ ವಿವರ

ಇಡೀ ವಿಶ್ವವನ್ನು ತಲ್ಲಣಗೊಳಿಸಿರುವ ಕೊರೊನಾವೈರಸ್‌ನ ವಿರುದ್ಧ ಲಸಿಕೆಯು ಈವರೆಗೂ ಸಿದ್ಧಗೊಂಡಿಲ್ಲ. ಹೀಗಾಗಿ ಕೊರೋನವೈರಸ್‌ನ್ನು ತಡೆಗಟ್ಟುವುದೇ ಈವರೆಗಿನ ಅತ್ಯುತ್ತಮ ಚಿಕಿತ್ಸೆಯಾಗಿರುವಂತಿದೆ. ಈ ಮಾರಣಾಂತಿಕ ವೈರಸ್‌ನ್ನು ದೂರವಿಡಲು ಪ್ರತಿಯೊಬ್ಬರೂ ಅಗತ್ಯವಾಗಿ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳು ಇಲ್ಲಿವೆ.

ಅನಾರೋಗ್ಯಕ್ಕೆ ಗುರಿಯಾಗಿರುವ ವ್ಯಕ್ತಿಗಳ ನಿಕಟ ಸಂಪರ್ಕವನ್ನು ನಿವಾರಿಸಿ. ಕೆಮ್ಮುತ್ತಿರುವ ಅಥವಾ ಸೀನುತ್ತಿರುವ ಯಾವುದೇ ವ್ಯಕ್ತಿ ಮತ್ತು ನಿಮ್ಮ ನಡುವೆ ಕನಿಷ್ಠ ಮೂರು ಅಡಿಗಳ ಅಂತರವನ್ನು ಕಾಯ್ದುಕೊಳ್ಳಿ.

ನಿಮ್ಮ ಕಣ್ಣುಗಳು,ಮೂಗು ಮತ್ತು ಬಾಯಿಯನ್ನು ಕೈಗಳಿಂದ ಸ್ಪರ್ಶಿಸಬೇಡಿ.

ನಿಮಗೆ ಅನಾರೋಗ್ಯ ಕಾಡುತ್ತಿದ್ದರೆ ಮನೆಯಲ್ಲಿಯೇ ಇರಿ.

ಕೆಮ್ಮುವಾಗ ಅಥವಾ ಸೀನುವಾಗ ಟಿಶ್ಯೂ ಪೇಪರ್‌ನಿಂದ ಮುಖವನ್ನು ಮುಚ್ಚಿಕೊಳ್ಳಿ. ಬಳಸಿದ ಟಿಶ್ಯೂ ಪೇಪರ್‌ನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಿ.

ಆಗಾಗ್ಗೆ ಸ್ಪರ್ಶಿಸುವ ವಸ್ತುಗಳನ್ನು ಮತ್ತು ಮೇಲ್ಮೈಗಳನ್ನು ಮನೆಯಲ್ಲಿ ಬಳಸುವ ಕ್ಲೀನಿಂಗ್ ಸ್ಪ್ರೇ ನಿಂದ ಸ್ವಚ್ಛಗೊಳಿಸುತ್ತಿರಿ ಅಥವಾ ಸ್ವಚ್ಛವಾದ ಬಟ್ಟೆಯಿಂದ ಒರೆಸುತ್ತಿರಿ. ಇದರಿಂದಾಗಿ ಅವುಗಳಲ್ಲಿ ವಾಸವಿರುವ ಕೀಟಾಣುಗಳು ನಿವಾರಣೆಯಾಗುತ್ತವೆ.

ಕೊರೋನ ಸೋಂಕುಪೀಡಿತ ವ್ಯಕ್ತಿಯ ಆರೈಕೆಯಲ್ಲಿ ನೀವು ತೊಡಗಿಕೊಂಡಿಲ್ಲವಾದರೆ ಮುಖಕ್ಕೆ ಮಾಸ್ಕ್ ಧರಿಸಬೇಕಿಲ್ಲ. ಸೋಂಕಿಗೊಳಗಾಗಿರುವ ವ್ಯಕ್ತಿಗಳು ಮಾತ್ರ ಸೋಂಕು ಇತರರಿಗೆ ಹರಡದಂತಿರಲು ಮಾಸ್ಕ್‌ಗಳನ್ನು ಧರಿಸಬೇಕು ಎಂದು ರೋಗ ನಿಯಂತ್ರಣ ಕೇಂದ್ರಗಳು ಶಿಫಾರಸು ಮಾಡಿವೆ.

ಆಗಾಗ್ಗೆ ಸಾಬೂನು ಮತ್ತು ನೀರು ಬಳಸಿ ಕನಿಷ್ಠ 20 ಸೆಕೆಂಡ್‌ಗಳ ಕಾಲ ಕೈಗಳನ್ನು ತೊಳೆದುಕೊಳ್ಳುವುದನ್ನು ರೂಢಿಸಿಕೊಳ್ಳಿ. ಬಾತ್‌ರೂಮ್‌ನಿಂದ ಹೊರಕ್ಕೆ ಬರುವಾಗ,ಆಹಾರ ಸೇವನೆಗೆ ಮೊದಲು,ಮೂಗಿನಿಂದ ಸಿಂಬಳ ಹೊರಕ್ಕೆ ಹಾಕಿದ್ದರೆ,ಕೆಮ್ಮಿದರೆ ಅಥವಾ ಸೀನಿದರೆ ಕೈಗಳನ್ನು ಕಡ್ಡಾಯವಾಗಿ ತೊಳೆದುಕೊಳ್ಳಿ.

 ಸಾಬೂನು ಮತ್ತು ನೀರು ತಕ್ಷಣಕ್ಕೆ ಲಭ್ಯವಿಲ್ಲದಿದ್ದರೆ ಅಲ್ಕೋಹಾಲ್ ಅಂಶವನ್ನೊಳಗೊಂಡಿರುವ ಹ್ಯಾಂಡ್ ಸ್ಯಾನಿಟೈಸರ್ ಅನ್ನು ಬಳಸಿ. ಕೈಗಳಲ್ಲಿ ಕೊಳೆ ಎದ್ದುಕಾಣುತ್ತಿದ್ದರೆ ಸಾಬೂನು ಮತ್ತು ನೀರನ್ನು ಬಳಸಿ ಅವುಗಳನ್ನು ತೊಳೆದುಕೊಳ್ಳಿ.

ಜ್ವರ,ಕೆಮ್ಮು ಮತ್ತು ಉಸಿರಾಟದಲ್ಲಿ ತೊಂದರೆ ಈ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 ದೂರದ ಪ್ರಯಾಣವನ್ನು ಆದಷ್ಟು ತಪ್ಪಿಸಿ. ಅನಿವಾರ್ಯವಾಗಿದ್ದರೆ ಆರೋಗ್ಯ ಸಚಿವಾಲಯವು ಹೊರಡಿಸಿರುವ ಪ್ರಯಾಣ ಸಲಹೆಗಳನ್ನು ಪಾಲಿಸಲು ಪ್ರಯತ್ನಿಸಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X