Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ: ಹಲವು ಕಳ್ಳತನ ಪ್ರಕರಣ;...

ಉಪ್ಪಿನಂಗಡಿ: ಹಲವು ಕಳ್ಳತನ ಪ್ರಕರಣ; ಮಹತ್ವದ ಸುಳಿವು ಲಭ್ಯ

ವಾರ್ತಾಭಾರತಿವಾರ್ತಾಭಾರತಿ5 March 2020 11:16 PM IST
share

ಉಪ್ಪಿನಂಗಡಿ, ಮಾ. 5: ಕಳೆದ ಕೆಲವು ಸಮಯಗಳಿಂದ ಉಪ್ಪಿನಂಗಡಿಯ ಪರಿಸರದಲ್ಲಿ ನಡೆದಿರುವ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆದಿರುವ ಕಳ್ಳತನದ ಪ್ರಕರಣಗಳಲ್ಲಿ ಸಾಮ್ಯತೆಯನ್ನು ಗುರುತಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಸುಳಿವನ್ನು ಪಡೆದುಕೊಂಡಿದೆ.

ಕಳೆದ ಎರಡು ವರ್ಷಗಳ  ಹಿಂದೆ ಕರಾಯದ ನಿವೃತ್ತ ಸೇನಾಧಿಕಾರಿ ಕೆ. ಸುರೇಶ್ ಎಂಬವರ ಮನೆಯಿಂದ ಸುಮಾರು 76 ಪವನ್ ಚಿನ್ನಾಭರಣ ಕಳವು ನಡೆದಿದ್ದು, ಪೊಲೀಸ್ ಇಲಾಖೆ ಈ ಪ್ರಕರಣದಲ್ಲಿ ಯಾವುದೇ ಸಾಧನೆಯನ್ನು ತೋರಿಸಿಲ್ಲ. ಅದರ ಬೆನ್ನಿಗೆ ಜಿ.ಪಂ. ಸದಸ್ಯ ಕೆ.ಕೆ. ಶಾಹುಲ್ ಹಮೀದ್ ರವರ ಮನೆಯೂ ಸೇರಿದಂತೆ ಪರಿಸರದ ಕೆಲ ಮನೆಗಳಲ್ಲಿ ಕಳ್ಳತನ ನಡೆದಿತ್ತು. ಬಳಿಕದ ದಿನಗಳಲ್ಲಿ ಉಪ್ಪಿನಂಗಡಿಯ ಮಠ ಎಂಬಲ್ಲಿನ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಈ ಎಲ್ಲಾ ಪ್ರಕರಣಗಳಲ್ಲಿ ಕಳ್ಳರ ಪತ್ತೆ ಕಾರ್ಯ ನಡೆದಿರಲಿಲ್ಲ.

ಈ ಮಧ್ಯೆ ಕಳೆದ ಒಂದು ತಿಂಗಳಾವಧಿಯಲ್ಲಿ ಉಪ್ಪಿನಂಗಡಿಯ ಪರಿಸರದಲ್ಲಿ ಕಳವು ಪ್ರಕರಣಗಳು ಸಂಭವಿಸಿ ನಾಗರಿಕರ ನಿದ್ದೆ ಕೆಡಿಸಿತ್ತು. 34ನೇ ನೆಕ್ಕಿಲಾಡಿಯ ಎನ್ ಗೋಪಾಲ ಹೆಗ್ಡೆ  ಎಂಬವರ ಮನೆಯ ಬಾತ್ ರೂಂ ಕಿಟಕಿಯ ಸರಳು ಕಿತ್ತು  ಒಳ ನುಗ್ಗಿದ ಕಳ್ಳ ನಗ ನಗದನ್ನು  ದೋಚಿದ್ದ ಪ್ರಕರಣದಲ್ಲಿ  ಮನೆಯಲ್ಲಿ ಅಳವಡಿಸಲಾಗಿದ್ದ  ಸಿಸಿ ಕ್ಯಾಮರಾದಲ್ಲಿ ಕಳ್ಳನ ಭಾವಚಿತ್ರ ಸ್ಪಷ್ಟವಾಗಿ ಸೆರೆಯಾಗಿತ್ತು. ಹಾಗೂ ಈ ಮನೆಯಲ್ಲಿ ಲಭಿಸಿದ ಬೆರಳಚ್ಚು  ಹಾಗೂ ಇತರ ಕಡೆಗಳಲ್ಲಿ ನಡೆದಿರುವ ಕಳ್ಳತನದ ಪ್ರಕರಣದಲ್ಲಿ ಲಭಿಸಿದ ಬೆರಳಚ್ಚುಗಳ ಸಾಮ್ಯತೆಯ ಆಧಾರದಲ್ಲಿ ಹಲವು ಪ್ರಕರಣಗಳಲ್ಲಿ ಓರ್ವನೇ ಭಾಗಿಯಾಗಿದ್ದಾನೆ ಎನ್ನುವುದನ್ನು ಪೊಲೀಸ್ ಇಲಾಖೆ ಖಚಿತ ಪಡಿಸಿಕೊಂಡಿದೆ ಹಾಗೂ ಈತನಿಂದಲೇ ಜಿಲ್ಲೆಯ ಇತರೆಡೆಗಳಲ್ಲಿಯೂ ಕಳ್ಳತನ ನಡೆದಿರುವ ಸಾಧ್ಯತೆಯೂ ಗೋಚರಿಸಿದ್ದು, ಈ ಬಗ್ಗೆಯೂ ಪೊಲೀಸ್ ಇಲಾಖೆ ಹೆಚ್ಚಿನ ನಿಗಾಇರಿಸಿದೆ.

ಆರೋಪಿ ಹಾಸನ, ಶಿವಮೊಗ್ಗ, ದ.ಕ ಜಿಲ್ಲೆಯಲ್ಲಿಯೂ ವಾಸ್ತವ್ಯವನ್ನು ಹೊಂದಿರುವ ಅಂಶಗಳನ್ನೂ ಪೊಲೀಸರು ಕಲೆ ಹಾಕಿದ್ದು, ಬಂಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಲ್ಲಿ ಈಗಾಗಲೇ ಮೂರು ತಂಡಗಳನ್ನು ರಚಿಸಿ ಕಾರ್ಯ ತಂತ್ರವನ್ನು ಹೆಣೆಯಲಾಗಿದೆ. ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಹಾಗೂ ಉಪ್ಪಿನಂಗಡಿ ಎಸೈ ಈರಯ್ಯರವರ ನೇತೃತ್ವದಲ್ಲಿ ಮೂರು ತಂಡಗಳನ್ನು  ರಚಿಸಲಾಗಿದ್ದು, ಕಲೆ ಹಾಕಿದ ಮಾಹಿತಿಯನುಸಾರ ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದು, ಶೀಘ್ರವಾಗಿ ಆರೋಪಿಯ ಬಂಧನವಾಗುವ ನಿರೀಕ್ಷೆಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X