Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರ ಬಗ್ಗೆ ವರದಿ: 'ಮೀಡಿಯಾ...

ದಿಲ್ಲಿ ಹಿಂಸಾಚಾರ ಬಗ್ಗೆ ವರದಿ: 'ಮೀಡಿಯಾ ಒನ್', 'ಏಶಿಯಾನೆಟ್ ನ್ಯೂಸ್'ಗಳಿಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ

'ವರದಿಗಳು ಆರೆಸ್ಸೆಸ್, ದಿಲ್ಲಿ ಪೊಲೀಸರನ್ನು ಟೀಕಿಸಿತ್ತು' ಎಂದ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ6 March 2020 9:41 PM IST
share
ದಿಲ್ಲಿ ಹಿಂಸಾಚಾರ ಬಗ್ಗೆ ವರದಿ: ಮೀಡಿಯಾ ಒನ್, ಏಶಿಯಾನೆಟ್ ನ್ಯೂಸ್ಗಳಿಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ

ಬೆಂಗಳೂರು,ಮಾ.6: ದಿಲ್ಲಿ ಹಿಂಸಾಚಾರದ ಬಗ್ಗೆ ಪ್ರಸಾರ ಮಾಡಿದ ವರದಿಗಳಿಗಾಗಿ ಮಲಯಾಳಂನ ‘ಏಶ್ಯಾನೆಟ್ ನ್ಯೂಸ್’ ಹಾಗೂ ‘ಮೀಡಿಯಾ ಒನ್’ ಸುದ್ದಿವಾಹಿನಿಗಳ ಪ್ರಸಾರಕ್ಕೆ ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯವು 48 ತಾಸುಗಳ ನಿಷೇಧ ವಿಧಿಸಿದೆ. ಶುಕ್ರವಾರ ಸಂಜೆ 7:30ರಿಂದ ಈ ಎರಡು ಸುದ್ದಿವಾಹಿನಿಗಳ ಪ್ರಸಾರ ಸ್ಥಗಿತಗೊಳಿಸಿದೆ. ಮಾರ್ಚ್ 8, ರವಿವಾರ ಸಂಜೆ. 7:30ರ ಬಳಿಕವಷ್ಟೇ ಅವು ತಮ್ಮ ಪ್ರಸಾರವನ್ನು ಪುನಾರಂಭಿಸಲಿವೆ. ಏಶ್ಯಾನೆಟ್ ನ್ಯೂಸ್ ಹಾಗೂ ಮೀಡಿಯಾ ಒನ್, ದಿಲ್ಲಿ ಹಿಂಸಾಚಾರದ ಬಗ್ಗೆ ಪ್ರಸಾರ ಮಾಡಿದ ವರದಿಗಳು ಪ್ರಚೋದನಕಾರಿ, ಪಕ್ಷಪಾತದಿಂದ ಕೂಡಿದ್ದವು ಹಾಗೂ ಆರೆಸ್ಸೆಸ್, ದಿಲ್ಲಿ ಪೊಲೀಸರನ್ನು ಟೀಕಿಸಿವೆ ಮತ್ತು ಒಂದು ನಿರ್ದಿಷ್ಟ ಸಮುದಾಯದ ಪರವಹಿಸಿದ್ದವು. ಅಲ್ಲದೆ ಪೌರತ್ವ ತಿದ್ದುಪಡಿ ಕಾಯ್ದೆಯ ಬೆಂಬಲಿಗರನ್ನು ಕೆಟ್ಟದಾಗಿ ಬಿಂಬಿಸಿವೆ ಎಂದು ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯದ ಆದೇಶದಲ್ಲಿ ಆಪಾದಿಸಲಾಗಿದೆ.

 ದಿಲ್ಲಿಯ ಜಫ್ರಾಬಾದ್‌ನಲ್ಲಿ ನಡೆದ ಹಿಂಸಾಚಾರ ಹಾಗೂ ಗಲಭೆಯ ವೇಳೆ ಪೊಲೀಸರು ಮೂಕ ಪ್ರೇಕ್ಷಕರಾಗಿ ವರ್ತಿಸಿದ್ದಾರೆಂದು ಏಶ್ಯಾನೆಟ್ ನ್ಯೂಸ್ ವರದಿಗಾರ ಪ್ರಕಟಿಸಿದ ವರದಿಯು ಈ ತಾತ್ಕಾಲಿಕ ನಿಷೇಧಕ್ಕೆ ಕಾರಣವೆಂದು ಆದೇಶದಲ್ಲಿ ತಿಳಿಸಲಾಗಿದೆ. ಮೀಡಿಯಾ ಒನ್ ನ್ಯೂಸ್‌ನ ಫೋನ್ ಇನ್ ಸಂಭಾಷಣೆ. ಕಾರ್ಯಕ್ರಮದಲ್ಲಿ ದಿಲ್ಲಿ ವರದಿಗಾರ ಹಸ್ಸನುಲ್ ಬನ್ನಾ ಅವರು ಹಿಂಸಾಚಾರದಲ್ಲಿ ಸಿಎಎ ವಿರೋಧಿ ಪ್ರತಿಭಟನಕಾರರು ಗಾಯಗೊಂಡಿದ್ದಾರೆ ಮತ್ತು ಘಟನಾ ಸ್ಥಳಕ್ಕೆ ಆಗಮಿಸಲು ಹಾಗೂ ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು ನಿರಾಕರಿಸಿದ್ದರೆಂದು ವರದಿ ಮಾಡಿದ್ದುದು, ಸುದ್ದಿವಾಹಿನಿಯ 48 ತಾಸುಗಳ ನಿಷೇಧಕ್ಕೆ ಕಾರಣವೆಂದು ಆದೇಶ ತಿಳಿಸಿದೆ.

  ಗಲಭೆಕೋರರು ಪ್ರಯಾಣಿಕರಿಗೆ ತಡೆಯೊಡ್ಡಿ, ಧರ್ಮದ ಗುರುತಿನಲ್ಲಿ ಅವರ ಮೇಲೆ ದಾಳಿ ನಡೆಸಿದ್ದಾರೆ. ಹಿಂಸಾಚಾರ ಸತತ ಮೂರು ದಿನಗಳ ಕಾಲ ಮುಂದು ವರಿದು, ಗಲಭೆಕೋರರು ಅಂಗಡಿಗಳು, ಮನೆಗಳು ಹಾಗೂ ವಾಹನಗಳನ್ನು ದಾಳಿಕೋರರು ಸುಟ್ಟುಹಾಕಿದರೂ, ಪೊಲೀಸರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಮತ್ತು ಗಲಭೆಗಳನ್ನು ನಿಯಂತ್ರಿಸಲು ಕೇಂದ್ರ ಸರಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲವೆಂಬ ಏಶ್ಯಾನೆಟ್ ನ್ಯೂಸ್‌ನ ವರದಿಯ ಬಗ್ಗೆ ಆದೇಶದಲ್ಲಿ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ಮೀಡಿಯಾ ಒನ್ ಸುದ್ದಿವಾಹಿನಿಯು ದಿಲ್ಲಿ ಹಿಂಸಾಚಾರದ ಕುರಿತ ತನ್ನ ವರದಿಯಲ್ಲಿ ಕಲ್ಲೆಸೆತ, ಗಲಭೆ ಹಾಗೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರು ಸುದ್ದಿಯನ್ನು ಪ್ರಸಾರ ಮಾಡಿದೆ. ಉದ್ರಿಕ್ತ ಪರಿಸ್ಥಿತಿಯಲ್ಲಿ ಇಂತಹ ವರದಿಯ ಪ್ರಸಾರವು ಹಿಂಸಾಚಾರಕ್ಕೆ ಪ್ರಚೋದನೆ ನೀಡುವಂತಾಗಿತ್ತು ಹಾಗೂಕಾನೂನು ಮತ್ತು ಶಿಸ್ತು ನಿರ್ವಹಣೆಗೆ ಅಪಾಯವನ್ನೊಡ್ಡುತ್ತದೆ ಎಂದು ಆದೇಶವು ತಿಳಿಸಿದೆ.

1994ರ ಕೇಬಲ್ ಜಾಲ ನಿಯಮಾವಳಿಗಳಡಿ ಈ ಎರಡು ಚಾನೆಲ್‌ಗಳ ಮೇಲೆ ತಾತ್ಕಾಲಿಕ ನಿಷೇಧವನ್ನು ವಿಧಿಸಲಾಗಿದೆ ಎಂದು ಆದೇಶವು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X