Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಹ್ಲು ಖಾನ್ ಹತ್ಯೆ ಪ್ರಕರಣ: ಇಬ್ಬರು...

ಪೆಹ್ಲು ಖಾನ್ ಹತ್ಯೆ ಪ್ರಕರಣ: ಇಬ್ಬರು ಅಪ್ರಾಪ್ತರು ತಪ್ಪಿತಸ್ಥರು ಎಂದು ಬಾಲನ್ಯಾಯ ಮಂಡಳಿಯ ತೀರ್ಪು

ಪ್ರಕರಣದಲ್ಲಿ ಮೊದಲ ದೋಷನಿರ್ಣಯ

ವಾರ್ತಾಭಾರತಿವಾರ್ತಾಭಾರತಿ6 March 2020 10:08 PM IST
share
ಪೆಹ್ಲು ಖಾನ್ ಹತ್ಯೆ ಪ್ರಕರಣ: ಇಬ್ಬರು ಅಪ್ರಾಪ್ತರು ತಪ್ಪಿತಸ್ಥರು ಎಂದು ಬಾಲನ್ಯಾಯ ಮಂಡಳಿಯ ತೀರ್ಪು

ಆಲ್ವಾರ್(ರಾಜಸ್ಥಾನ),ಮಾ.6: ಸುಮಾರು ಮೂರು ವರ್ಷಗಳ ಹಿಂದೆ ಜಿಲ್ಲೆಯ ಬೆಹ್ರೂರ್ ಬಳಿ ಅಕ್ರಮ ಗೋಸಾಗಾಟ ಆರೋಪದಲ್ಲಿ ಹರ್ಯಾಣದ ಹೈನುಗಾರ ಪೆಹ್ಲು ಖಾನ್(55) ಅವರನ್ನು ಥಳಿಸಿ ಹತ್ಯೆಗೈದಿದ್ದ ಗುಂಪಿನಲ್ಲಿದ್ದ ಇಬ್ಬರು ಹದಿಹರೆಯದ ಬಾಲಕರು ತಪ್ಪಿತಸ್ಥರು ಎಂದು ಆಲ್ವಾರ್‌ನ ಬಾಲನ್ಯಾಯ ಮಂಡಳಿ (ಜೆಜೆಬಿ)ಯು ತೀರ್ಪು ನೀಡಿದೆ ಎಂದು ಪ್ರತಿವಾದಿ ಪರ ವಕೀಲ ಆದರ್ಶ ಯಾದವ ಅವರು ಶುಕ್ರವಾರ ತಿಳಿಸಿದರು.

 2017,ಎಪ್ರಿಲ್ 1ರಂದು ಜೈಪುರದ ಸಾಪ್ತಾಹಿಕ ಜಾನುವಾರು ಸಂತೆಯಲ್ಲಿ ಹೈನುಗಾರಿಕೆಗಾಗಿ ದನಗಳನ್ನು ಖರೀದಿಸಿದ್ದ ಖಾನ್ ಅವುಗಳನ್ನು ತನ್ನಿಬ್ಬರು ಪುತ್ರರೊಂದಿಗೆ ಸ್ವಗ್ರಾಮ ಹರ್ಯಾಣದ ನುಹ್‌ಗೆ ಸಾಗಿಸುತ್ತಿದ್ದಾಗ ಬೆಹರೂರ್ ಬಳಿ ವಾಹನವನ್ನು ಅಡ್ಡಗಟ್ಟಿದ್ದ ತಥಾಕಥಿತ ಗೋರಕ್ಷಕರ ಗುಂಪು ದನಗಳ ಕಳ್ಳ ಸಾಗಾಣಿಕೆಯ ಆರೋಪದಲ್ಲಿ ಹಲ್ಲೆ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಖಾನ್ ಎ.3ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಖಾನ್ ಮೇಲಿನ ದಾಳಿಯ ನೇತೃತ್ವ ವಹಿಸಿದ್ದ,ಕೊಲೆ,ದಂಗೆ ಇತ್ಯಾದಿ ಆರೋಪಗಳನ್ನು ಎದುರಿಸುತ್ತಿದ್ದ ಆರು ಆರೋಪಿಗಳನ್ನು ಆಳ್ವಾರ್‌ನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಎಡಿಜೆ)ವು ಕಳೆದ ವರ್ಷ ಸಂಶಯದ ಲಾಭ ನೀಡಿ ಬಿಡುಗಡೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರವು ರಾಜಸ್ಥಾನ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಿದೆ.

ಪ್ರಕರಣದಲ್ಲಿ ಮೊದಲ ಬಾರಿಗೆ ದೋಷನಿರ್ಣಯಗೊಂಡಿರುವ ಇಬ್ಬರು ಬಾಲಕರಿಗೆ ಶಿಕ್ಷೆಯನ್ನು ಜೆಜೆಬಿ ಶನಿವಾರ ಪ್ರಕಟಿಸಲಿದೆ. ಆದರೆ ದೇಶದ ಬಾಲನ್ಯಾಯ ಕಾನೂನಿನಂತೆ ಅವರನ್ನು ಗರಿಷ್ಠ ಮೂರು ವರ್ಷಗಳ ಅವಧಿಗೆ ದಿಗ್ಬಂಧನದಲ್ಲಿರಿಸಬಹುದು.

 ತಾನಿನ್ನೂ ಆದೇಶದ ಪ್ರತಿಯನ್ನು ನೋಡಿಲ್ಲ.ಹೀಗಾಗಿ ಬಾಲಾರೋಪಿಗಳ ದೋಷನಿರ್ಣಯಕ್ಕೆ ಕಾರಣ ಸ್ಪಷ್ಟವಾಗಿಲ್ಲ. ಶಿಕ್ಷೆ ಘೋಷಣೆಯಾದ ಬಳಿಕವಷ್ಟೇ ಅದು ಗೊತ್ತಾಗಲಿದೆ ಎಂದು ಯಾದವ ಹೇಳಿದರು.

16 ವರ್ಷಕ್ಕಿಂತ ಹೆಚ್ಚಿನ ಪ್ರಾಯದ ಇನ್ನೋರ್ವ ಆರೋಪಿಯು ಬೇರೊಂದು ನ್ಯಾಯಾಲಯದಲ್ಲಿ ವಿಚಾರಣೆಯನ್ನು ಎದುರಿಸುತ್ತಿದ್ದಾನೆ. ಆಲ್ವಾರ್ ಜೆಜೆಬಿ 16ಕ್ಕಿಂತ ಕಡಿಮೆ ಪ್ರಾಯದವರ ವಿಚಾರಣೆ ನಡೆಸುತ್ತದೆ.

ಜೆಜೆಬಿ ವಿಚಾರಣೆಯಲ್ಲಿ ಬಳಸಲಾದ ಸಾಕ್ಷ್ಯದ ಬಗ್ಗೆ ತನಗೆ ಗೊತ್ತಿಲ್ಲ. ಆದೇಶವನ್ನು ಓದಿದ ಬಳಿಕವಷ್ಟೇ ತೀರ್ಪಿನ ಬಗ್ಗೆ ತಾನು ಪ್ರತಿಕ್ರಿಯಿಸಬಹುದು. ಬಾಲನ್ಯಾಯ ಮಂಡಳಿಯಲ್ಲಿ ವಿಚಾರಣೆ ಸಂದರ್ಭ ಮುಖ್ಯ ಪ್ರಕರಣದಲ್ಲಿಯ ಲೋಪಗಳನ್ನು ನಿವಾರಿಸಿಕೊಂಡಿರಬಹುದು ಎಂದು ಎಡಿಜೆ ನ್ಯಾಯಾಲಯದ ಎಪಿಪಿ ಯೋಗೇಂದ್ರ ಖಟಾನಾ ತಿಳಿಸಿದರು.

ಜೆಜೆಬಿ ತೀರ್ಪು ಮುಖ್ಯ ಪ್ರಕರಣದ ಮೇಲೆ ಯಾವುದೇ ಪರಿಣಾಮವನ್ನು ಬೀರುವುದಿಲ್ಲ ಎಂದು ಎಡಿಜೆ ನ್ಯಾಯಾಲಯದಲ್ಲಿ ಆರೋಪಿಗಳ ಪರ ವಾದಿಸಿದ್ದ ಹುಕುಂ ಚಂದ್ ಶರ್ಮಾ ಹೇಳಿದರೆ,ಜೆಜೆಬಿ ತೀರ್ಪು ಮಹತ್ವದ ಬೆಳವಣಿಗೆಯಾಗಿದ್ದು,ಮೇಲ್ಮನವಿ ವಿಚಾರಣೆ ಸಂದರ್ಭ ಅದನ್ನು ಖಂಡಿತವಾಗಿಯೂ ಬಳಸಿಕೊಳ್ಳಲಾಗುವುದು ಎಂದು ರಾಜಸ್ಥಾನ ಉಚ್ಚ ನ್ಯಾಯಾಲಯದಲ್ಲಿ ಸರಕಾರದ ಪರ ವಾದಿಸಲಿರುವ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆರ್.ಪಿ.ಸಿಂಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X