Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶ್ವದ ಪ್ರತಿಯೊಬ್ಬರನ್ನೂ ಸ್ವಾಗತಿಸುವ...

ವಿಶ್ವದ ಪ್ರತಿಯೊಬ್ಬರನ್ನೂ ಸ್ವಾಗತಿಸುವ ಇನ್ನೊಂದು ದೇಶವನ್ನು ನನಗೆ ತೋರಿಸಿ: ಸಿಎಎ ಕುರಿತು ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ7 March 2020 10:53 PM IST
share
ವಿಶ್ವದ ಪ್ರತಿಯೊಬ್ಬರನ್ನೂ ಸ್ವಾಗತಿಸುವ ಇನ್ನೊಂದು ದೇಶವನ್ನು ನನಗೆ ತೋರಿಸಿ: ಸಿಎಎ ಕುರಿತು ಜೈಶಂಕರ್

ಹೊಸದಿಲ್ಲಿ,ಮಾ.7: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಕುರಿತು ಭಾರತವನ್ನು ಟೀಕಿಸುತ್ತಿರುವವರ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು,ವಿಶ್ವದ ಬೇರೆ ಯಾವುದೇ ದೇಶವು ಪ್ರತಿಯೊಬ್ಬರನ್ನೂ ಸ್ವಾಗತಿಸುವುದಿಲ್ಲ ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿನ ಸ್ಥಿತಿ ಕುರಿತು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಆರ್‌ಸಿ)ಯ ಟೀಕೆಗಾಗಿ ಅದನ್ನು ಕುಟುಕಿದ ಜೈಶಂಕರ್, ಅದರ ನಿರ್ದೇಶಕರು ಈ ಮೊದಲೂ ತಪ್ಪು ಹೇಳಿಕೆಯನ್ನು ನೀಡಿದ್ದರು ಮತ್ತು ಕಾಶ್ಮೀರ ವಿಷಯವನ್ನು ನಿರ್ವಹಿಸುವಲ್ಲಿ ಮಂಡಳಿಯ ಈ ಹಿಂದಿನ ದಾಖಲೆಯನ್ನು ನೋಡಬೇಕಾಗಿದೆ ಎಂದರು.

ಇಕನಾಮಿಕ್ ಟೈಮ್ಸ್ ಜಾಗತಿಕ ಉದ್ಯಮ ಶೃಂಗದಲ್ಲಿ ಸಿಎಎ ಕುರಿತು ಪ್ರಶ್ನೆಗೆ,‘ಈ ಕಾನೂನಿನ ಮೂಲಕ ದೇಶರಹಿತ ಜನರ ಸಂಖ್ಯೆಯನ್ನು ತಗ್ಗಿಸಲು ನಾವು ಪ್ರಯತ್ನಿಸಿದ್ದೇವೆ. ಇದನ್ನು ಮೆಚ್ಚಿಕೊಳ್ಳಬೇಕು’ ಎಂದು ಉತ್ತರಿಸಿದ ಅವರು, ‘ನಮಗೆ ಹೆಚ್ಚಿನ ಸಮಸ್ಯೆ ಸೃಷ್ಟಿಯಾಗದ ರೀತಿಯಲ್ಲಿ ನಾವು ಈ ಕಾನೂನನ್ನು ಮಾಡಿದ್ದೇವೆ’ ಎಂದರು.

‘ವಿಶ್ವದಲ್ಲಿಯ ಪ್ರತಿಯೊಬ್ಬರನ್ನೂ ಸ್ವಾಗತಿಸುವ ಇನ್ನೊಂದು ದೇಶವನ್ನು ನನಗೆ ತೋರಿಸಿ. ಯಾರೂ ಅದನ್ನು ಮಾಡುವುದಿಲ್ಲ. ಅಮೆರಿಕ,ಯುರೋಪ್ ಕಡೆಗೆ ನೋಡಿ. ನಾನು ಪ್ರತಿಯೊಂದೂ ಐರೋಪ್ಯ ದೇಶದ ಉದಾಹರಣೆಯನ್ನು ನೀಡಬಲ್ಲೆ. ಏನಾದರೂ ಸಾಮಾಜಿಕ ಮಾನದಂಡವಿರುತ್ತದೆ’ ಎಂದರು.

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವದಿಂದ ಹೊರಗೆ ಹೋಗುವುದು ಭಾರತದ ಉದ್ಯಮ ಹಿತಾಸಕ್ತಿಗಳಿಗೆ ಪೂರಕವಾಗಿದೆ ಎಂದೂ ಜೈಶಂಕರ ಈ ಸಂದರ್ಭದಲ್ಲಿ ತಿಳಿಸಿದರು.

ಭಾರತವು ತನ್ನ ಮಿತ್ರರನ್ನು ಕಳೆದುಕೊಳ್ಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಿಜಕ್ಕೂ ನಮ್ಮ ಮಿತ್ರರು ಯಾರು ಎನ್ನುವುದನ್ನು ತಿಳಿಯುವ ಅವಕಾಶ ನಮಗೆ ದೊರೆಯುತ್ತಿರಬಹುದು” ಎಂದರು. ಯುಎನ್‌ಎಚ್‌ಆರ್‌ಸಿ ನಿರ್ದೇಶಕರು ಕಾಶ್ಮೀರ ವಿಷಯದಲ್ಲಿ ಭಾರತದೊಂದಿಗೆ ಸಹಮತಿ ಹೊಂದಿಲ್ಲವಲ್ಲ ಎಂಬ ಪ್ರಶ್ನೆಗೆ ಜೈಶಂಕರ,ಅವರು ಹಿಂದೆಯೂ ತಪ್ಪು ನಿಲುವು ಹೊಂದಿದ್ದರು. ನೆರೆಯ ದೇಶಕ್ಕೆ ಯಾವುದೇ ಸಂಬಂಧವೇ ಇಲ್ಲ ಎನ್ನುವಂತೆ ತುಂಬ ಎಚ್ಚರಿಕೆಯಿಂದ ಅವರು (ಯುಎನ್‌ಎಚ್‌ಆರ್‌ಸಿ) ಗಡಿಯಾಚೆಯ ಭಯೋತ್ಪಾದನೆ ಸಮಸ್ಯೆಯಿಂದ ನುಣುಚಿಕೊಳ್ಳುತ್ತಿದ್ದಾರೆ. ಅವರು ಎಲ್ಲಿಂದ ಬಂದಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಿ,ಅವರು ಕಾಶ್ಮೀರ ವಿಷಯವನ್ನು ಹೇಗೆ ನಿರ್ವಹಿಸಿದ್ದರು ಎನ್ನುವುದಕ್ಕೆ ಯುಎನ್‌ಎಚ್‌ಆರ್‌ಸಿಯ ಹಿಂದಿನ ದಾಖಲೆಗಳನ್ನು ನೋಡಿ ಎಂದು ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X