Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಅನ್ಯಾಯ': ಸಿಎಎ ಪ್ರತಿಭಟನಕಾರರ...

'ಅನ್ಯಾಯ': ಸಿಎಎ ಪ್ರತಿಭಟನಕಾರರ ಫೋಟೊಗಳಿರುವ ಬ್ಯಾನರ್ ಹಾಕಿದ ಆದಿತ್ಯನಾಥ್ ಸರಕಾರಕ್ಕೆ ಹೈಕೋರ್ಟ್ ತರಾಟೆ

ಬ್ಯಾನರ್ ಗಳ ತೆರವುಗೊಳಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ8 March 2020 2:01 PM IST
share
ಅನ್ಯಾಯ: ಸಿಎಎ ಪ್ರತಿಭಟನಕಾರರ ಫೋಟೊಗಳಿರುವ ಬ್ಯಾನರ್ ಹಾಕಿದ ಆದಿತ್ಯನಾಥ್ ಸರಕಾರಕ್ಕೆ ಹೈಕೋರ್ಟ್ ತರಾಟೆ

 ಲಕ್ನೊ, ಮಾ. 8: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಸಂದರ್ಭ ಸಂಭವಿಸಿದ ಹಿಂಸಾಚಾರದ ಆರೋಪಿಗಳ ಭಾವಚಿತ್ರ ಹಾಗೂ ವಿವರನ್ನು ಒಳಗೊಂಡ ಹೋರ್ಡಿಂಗ್ ಅನ್ನು ಉತ್ತರಪ್ರದೇಶ ಸರಕಾರ ಅಳವಡಿಸಿದ ಪ್ರಕರಣವನ್ನು ರವಿವಾರ ವಿಚಾರಣೆಗೆ ಕೈಗೆತ್ತಿಕೊಂಡಿರುವ ಅಲಹಾಬಾದ್ ಉಚ್ಚ ನ್ಯಾಯಾಲಯ, ಇಂತಹ ನಡೆ ನಾಗರಿಕರ ಸ್ವಾತಂತ್ರ್ಯ, ಗೌರವ ಹಾಗೂ ಖಾಸಗಿತನದ ಮೇಲಿನ ಅತಿಕ್ರಮಣ ಆಗಬಹುದು ಎಂದು ಹೇಳಿದೆ.

ರವಿವಾರ ರಜೆ ಇದ್ದರೂ ನ್ಯಾಯಾಲಯ ಈ ಪ್ರಕರಣವನ್ನು ಸ್ವಯಂತಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿತು. ಅಪರಾಹ್ನ 3 ಗಂಟೆಯ ನಂತರ 1 ಗಂಟೆಗಳ ಕಾಲ ನಡೆದ ವಿಚಾರಣೆ ಸಂದರ್ಭ ನ್ಯಾಯಾಲಯ ಹಲವು ಪ್ರಶ್ನೆಗಳನ್ನು ಕೇಳಿತು. ಅದಕ್ಕೆ ಸರಕಾರದ ಪ್ರತಿನಿಧಿಗಳು ಉತ್ತರಿಸಿದರು. ಅನಂತರ ನ್ಯಾಯಾಲಯ ತೀರ್ಪನ್ನು ಸೋಮವಾರ ಅಪರಾಹ್ನಕ್ಕೆ ಮುಂದೂಡಿದೆ.

  

ಪೂರ್ವಾಹ್ನ 10 ಗಂಟೆಗೆ ಆರಂಭವಾದ ವಿಚಾರಣೆಯಲ್ಲಿ ಮುಖ್ಯ ನ್ಯಾಯಮೂರ್ತಿ ಗೋವಿಂದ ಮಾಥುರ್, ಸರಕಾರ ನಾಗರಿಕರ ಸ್ವಾತಂತ್ರ್ಯ ಹಾಗೂ ಖಾಸಗಿತನವನ್ನು ಅತಿಕ್ರಮಿಸುತ್ತಿಲ್ಲವೇ ಎಂದು ಪ್ರಶ್ನಿಸಿತು. ಅಲ್ಲದೆ, ಹಾಗೆ ನಡೆದಿದ್ದರೆ, ಮುಂದಿನ ವಿಚಾರಣೆಗೆ ಮುನ್ನ ಅದನ್ನು ಸರಿಪಡಿಸುವಂತೆ ಸೂಚಿಸಿತು.

ಉತ್ತರಪ್ರದೇಶ ಸರಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಸರಕಾರದ ನಿಲುವನ್ನು ನ್ಯಾಯಾಲಯದ ಮುಂದಿರಿಸಿದರು. ಅವರ ವಾದವನ್ನು ಆಲಿಸಿದ ನ್ಯಾಯಾಲಯ ಆದೇಶವನ್ನು ಕಾದಿರಿಸಿದ್ದು, ಸೋಮವಾರ 2 ಗಂಟೆಗೆ ಪ್ರಕಟಿಸಲಿದೆ ಎಂದು ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ನೀರಜ್ ತ್ರಿಪಾಠಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಲಕ್ನೊದ ಹೃದಯಭಾಗಗಳಲ್ಲಿ ಆರೋಪಿಗಳ ಭಾವಚಿತ್ರ ಹಾಗೂ ವಿಳಾಸಗಳನ್ನು ಹೊಂದಿರುವ ಹೋರ್ಡಿಂಗ್‌ಗಳನ್ನು ಅಳವಡಿಸಲಾಗಿತ್ತು. ಲಕ್ನೊದಲ್ಲಿ ನಡೆದ ಪ್ರತಿಭಟನೆ ಸಂದರ್ಭ ನಾಶವಾದ ಸೊತ್ತಿಗೆ ಹಣ ಪಾವತಿಸುವಂತೆ ಈ ಹೋರ್ಡಿಂಗ್‌ನಲ್ಲಿ ಸೂಚಿಸಲಾಗಿತ್ತು. ಒಂದು ವೇಳೆ ಹಣ ಪಾವತಿಸದೇ ಇದ್ದರೆ ಅವರ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಚ್ಚರಿಸಲಾಗಿತ್ತು. ಇದಕ್ಕಿಂತ ಮೊದಲು ಉತ್ತರಪ್ರದೇಶ ಸರಕಾರ ಈ ಆರೋಪಿಗಳಿಗೆ ವೈಯುಕ್ತಿಕವಾಗಿ ಸೊತ್ತು ಮುಟ್ಟುಗೋಲು ಹಾಕಿಕೊಳ್ಳುವ ನೋಟಿಸು ಕೂಡ ಜಾರಿ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X