Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉತ್ತರ ಕರ್ನಾಟಕ ಭವನ ನಿರ್ಮಾಣ ಕುರಿತು...

ಉತ್ತರ ಕರ್ನಾಟಕ ಭವನ ನಿರ್ಮಾಣ ಕುರಿತು ಸಿಎಂ ಜತೆ ಚರ್ಚೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ8 March 2020 8:48 PM IST
share
ಉತ್ತರ ಕರ್ನಾಟಕ ಭವನ ನಿರ್ಮಾಣ ಕುರಿತು ಸಿಎಂ ಜತೆ ಚರ್ಚೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮಾ.8: ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುವ ಜನರಿಗಾಗಿ ಮೂಲಭೂತ ಸೌಲಭ್ಯಗಳನ್ನೊಳಗೊಂಡ ಉತ್ತರ ಕರ್ನಾಟಕ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗ ಮತ್ತು ಅನುದಾನವನ್ನು ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ರವಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಉದ್ಘಾಟಿಸಿ ಮಾತನಾಡಿದ ಅವರು, ಉ.ಕ. ಭಾಗದ ಜನರು ಪರಿಶ್ರಮ, ಪ್ರಾಮಾಣಿಕತೆ ಮೈಗೂಡಿಸಿಕೊಂಡಿದ್ದು, ಬೆಂಗಳೂರನ್ನು ಕಟ್ಟಿ ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಆ ಭಾಗದಿಂದ ಬೆಂಗಳೂರಿಗೆ ಬರುವ ಜನರಿಗೆ ವಸತಿ, ಊಟ ಇನ್ನಿತರ ಸೌಲಭ್ಯಗಳನ್ನೊಳಗೊಂಡ ಭವನ ನಿರ್ಮಾಣದ ಬಗ್ಗೆ ಸಿಎಂ ಗಮನಕ್ಕೆ ತರುತ್ತೇನೆ ಎಂದರು.

ಭವನ ನಿರ್ಮಾಣದ ಜೊತೆಗೆ ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗಾಗಿ ಶಿಕ್ಷಣ ಸಂಸ್ಥೆಯೊಂದನ್ನು ತೆರೆಯುವ ಚಿಂತನೆಯನ್ನೂ ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಮಹಾ ಸಂಸ್ಥೆ ಮಾಡಬೇಕಾಗಿದೆ. ಇದರಿಂದ, ಆ ಎಲ್ಲ ವಿದ್ಯಾರ್ಥಿಗಳಿಗೆ ಶಿಕ್ಷಣ ಲಭಿಸಿ ಉನ್ನತ ಹುದ್ದೆಗಳಿಗೆ ಹೋಗಲು ಸಾಧ್ಯ. ನಮ್ಮ ಸರಕಾರ ಕೃಷ್ಣಾ ನದಿಯ ನೀರನ್ನು ರೈತರ ಜಮೀನುಗಳಿಗೆ ಸರಾಗವಾಗಿ ಹರಿಸಲು ಕಾಲುವೆ ನಿರ್ಮಾಣಕ್ಕಾಗಿ 10 ಸಾವಿರ ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದರು.

ಕೂಡಲಸಂಗಮದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಉತ್ತರ ಕರ್ನಾಟಕದ ಜನರು ಬೆಂಗಳೂರು ಸೇರಿದಂತೆ ಇನ್ನಿತರ ನಗರಗಳನ್ನು ಕಟ್ಟಿ ಬೆಳೆಸಿದ್ದು, ಅವರಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕೃಷ್ಣಾ, ಮಹದಾಯಿ ಸೇರಿ ಉ-ಕ ಭಾಗದ ಎಲ್ಲ ನದಿಗಳ ಅಭಿವೃದ್ಧಿ ಕೇಂದ್ರ ಸರಕಾರ ರಾಷ್ಟ್ರೀಯ ಯೋಜನೆ ಅಡಿಯಲ್ಲಿ 1 ಲಕ್ಷ ಕೋಟಿ ರೂ.ಮೀಸಲಿಡಬೇಕೆಂದು ತಿಳಿಸಿದರು.

ಉತ್ತರ ಕರ್ನಾಟಕದ ಶಾಸಕರಿಗೆ ಇಚ್ಛಾಶಕ್ತಿಯ ಕೊರತೆಯಿದ್ದು, ಮುಂದಿನ ದಿನಗಳಲ್ಲಿ ಉ.ಕ.ಭಾಗದ ಜನರಿಗೆ ಎಲ್ಲ ರೀತಿಯ ಅನುಕೂಲಗಳನ್ನು ಮಾಡಿಕೊಡುತ್ತಾರೆ ಎಂದು ನಂಬಿದ್ದೇವೆ ಎಂದು ಹೇಳಿದರು. ಉ-ಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಗೌರವಾಧ್ಯಕ್ಷ ಶಂಕರ್ ಬಿದರಿ, ಕೃಷ್ಣಭಾಗ್ಯ ಜಲನಿಗಮದ ಚಂದ್ರಶೇಖರ್ ಬೂದಿಹಾಳಮಠ, ಜಲನಿಗಮದ ಬಿ.ಎನ್.ಬಿರಾದಾರ್ ಉಪಸ್ಥಿತರಿದ್ದರು.

ಬಿಎಸ್‌ವೈಗೆ ವಿಶ್ರಾಂತಿ ಇಲ್ಲ

ಮುಖ್ಯಮಂತ್ರಿ ಯಡಿಯೂರಪ್ಪ ಉ.ಕ. ಸಂಘ-ಸಂಸ್ಥೆಗಳ ಮಹಾ ಸಂಸ್ಥೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು. ಆದರೆ, ದಿಲ್ಲಿಯಿಂದ ಮಧ್ಯರಾತ್ರಿ ಬೆಂಗಳೂರಿಗೆ ಬಂದಿದ್ದರಿಂದ ಅವರಿಗೆ ವಿಶ್ರಾಂತಿ ಇಲ್ಲದಂತಾಗಿದೆ. ಬೆಳಗ್ಗೆ ಆರೆಸ್ಸೆಸ್ಸ್ ಮುಖ್ಯಸ್ಥ ಮೋಹನ್ ಭಾಗವತ್, ಬಿಎಸ್‌ವೈ ಅವರಿಗೆ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಿದ್ದರಿಂದ ಅಲ್ಲಿಗೆ ಹೋಗಿದ್ದಾರೆ. ಹೀಗಾಗಿ, ಅವರ ಬದಲು ನಿಮ್ಮಲ್ಲಿ ನಾನು ಕ್ಷಮೆಯಾಚಿಸುತ್ತೇನೆ

-ಬಸವರಾಜ ಬೊಮ್ಮಾಯಿ, ಗೃಹ ಸಚಿವ

ಬಿಎಸ್‌ವೈ ವಿರುದ್ಧ ಆಕ್ರೋಶ

ಉ-ಕ ಸಂಘ-ಸಂಸ್ಥೆಗಳ ಮಹಾ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಬಿಎಸ್‌ವೈ ಆಗಮಿಸದ ಹಿನ್ನೆಲೆಯಲ್ಲಿ ಆ ಭಾಗದ ಮುಖಂಡರು, ಕಾರ್ಯಕರ್ತರು ಬಹಿರಂಗವಾಗಿ ಬಿಎಸ್‌ವೈ, ಉ-ಕ ಭಾಗದ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X