Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಘರ್ಷ, ಯುದ್ಧದಿಂದ ಮಹಿಳೆಯರಿಗೇ ಹೆಚ್ಚು...

ಸಂಘರ್ಷ, ಯುದ್ಧದಿಂದ ಮಹಿಳೆಯರಿಗೇ ಹೆಚ್ಚು ಸಂಕಷ್ಟ: ಪತ್ರಕರ್ತೆ ಡಾ.ಆರ್.ಪೂರ್ಣಿಮಾ

ವಾರ್ತಾಭಾರತಿವಾರ್ತಾಭಾರತಿ8 March 2020 10:55 PM IST
share

ಬೆಂಗಳೂರು, ಮಾ.8: ವಿಶ್ವದಾದ್ಯಂತ ಇಂದು ನಡೆಯುತ್ತಿರುವ ಎಲ್ಲ ಸಂಘರ್ಷ, ಯುದ್ಧಗಳು ನಡೆದಾಗ ಹೆಚ್ಚಾಗಿ ಮಹಿಳೆಯರೇ ಸಂಕಷ್ಟಕ್ಕೆ ಒಳಗಾಗುತ್ತಿರುವುದು ವಿಷಾದನೀಯ ಎಂದು ಪತ್ರಕರ್ತೆ ಡಾ.ಆರ್.ಪೂರ್ಣಿಮಾ ಹೇಳಿದ್ದಾರೆ.

ರವಿವಾರ ನಗರದ ಸುಚಿತ್ರಾ ಫಿಲ್ಮ್‌ಂ ಸೊಸೈಟಿಯಲ್ಲಿ ಅಂತರ್ಜಾಲ ವೇದಿಕೆಯಾದ ಬುಕ್ ಬ್ರಹ್ಮವು ವಸಂತ ಪ್ರಕಾಶನದ ಸಹಯೋಗದಲ್ಲಿ ಆಯೋಜಿಸಿದ್ದ ಡಾ.ಪದ್ಮಿನಿ ನಾಗರಾಜ್‌ಅವರ ‘ಉರಿವ ಬೆಂಕಿಗೆ ಮೈಯಲ್ಲ ಬಾಯಿ’ ಕೃತಿ ಲೋಕಾರ್ಪಣೆ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂದಿನ ಸಂದರ್ಭದಲ್ಲಿ ವಿಶ್ವದಾದ್ಯಂತ ಎಲ್ಲ ಕಡೆಗಳಲ್ಲಿ ಒಂದಲ್ಲ ಒಂದು ಕಾರಣಕ್ಕೆ ತಲ್ಲಣ, ತವಕಗಳು ನಡೆಯುತ್ತಿವೆ. ಯಾವುದೇ ದೇಶದ ಸಂಘರ್ಷ, ಯುದ್ಧ ಹಾಗೂ ಮತ್ತಿತರೆ ಘಟನೆಗಳು ನಡೆದಾಗ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಹೆಚ್ಚು ಕಷ್ಟಕ್ಕೆ ಒಳಗಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವಿಶ್ವದಲ್ಲಿ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಮುಂದುವರಿದಿದ್ದಾರೆ ಎಂದು ಹೇಳಲಾಗುತ್ತದೆ. ಅಲ್ಲದೆ, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿಲ್ಲ ಎಂದೂ ಹೇಳುತ್ತಿದ್ದಾರೆ. ಆದರೆ, ಇನ್ನೂ ಯಾಕೆ ಮಹಿಳೆಯರು ಸಂಕಷ್ಟದ ಸ್ಥಿತಿಯಲ್ಲಿದ್ದಾರೆ ಎಂದು ಹೇಳುತ್ತಿಲ್ಲ ಎಂದ ಅವರು, ಇತಿಹಾಸದಲ್ಲಿ ಮಹಿಳೆಯರ ಸಾಧನೆ, ತ್ಯಾಗವನ್ನು ಹುಡುಕಬೇಕಿದೆ ಎಂದು ಬೇಸರ ವ್ಯಕ್ತಪಡಿಸಿದರು. ಲೋಕಸಭೆಯಲ್ಲಿ ಮಹಿಳಾ ಸ್ಥಾನ ಮೀಸಲಾತಿ ಕುರಿತು ಯಾವೊಂದು ರಾಜಕೀಯ ಪಕ್ಷವೂ ಮಹಿಳಾ ಪರವಾಗಿಲ್ಲ. ವಾಸ್ತವ ಹೀಗಿದ್ದರೆ, ಭಾರತದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆಗೆ ಏನರ್ಥ ಎಂದು ಪೂರ್ಣಿಮಾ ಪ್ರಶ್ನಿಸಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಮಾತನಾಡಿ, ಹೊಸ ಕನಸುಗಳನ್ನು ಕಟ್ಟಿಕೊಳ್ಳಬೇಕಾದ ಇಂದಿನ ಯುವ ಜನಾಂಗವು ಮೊಬೈಲ್‌ಗಳಲ್ಲಿ ಕಾಲ ಕಳೆಯುತ್ತಿದ್ದು, ಈ ಬಗ್ಗೆ ತಾಯಂದಿರು ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ ಎಂದು ಹೇಳಿದರು.

ಮುಂದಿನ ಭವಿಷ್ಯದ ಕನಸು ಕಾಣಬೇಕಾದ ಇಂದಿನ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೊಬೈಲ್ ಗೀಳಿಗೆ ಬೀಳುತ್ತಿದ್ದಾರೆ. ಇದರ ಪರಿಣಾಮವಾಗಿ, ಮಕ್ಕಳಲ್ಲಿ ಬೌದ್ಧಿಕತೆ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂದ ಅವರು, ಮಕ್ಕಳಲ್ಲಿ ಕನಸು ಸೃಷ್ಟಿಸಿ, ಅದನ್ನು ಸಾಧ್ಯವಾಗಿಸುವುದು ತಾಯಿ. ಹೀಗಾಗಿ, ತಾಯಿ ಈ ಕುರಿತು ಜಾಗೃತಿ ವಹಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.

ತಾಯಿಯು ಮಕ್ಕಳು ಸಣ್ಣವರಿದ್ದಾಗಲೇ ಮಾತೃಭಾಷೆಯನ್ನು ಕಲಿಸುತ್ತಾರೆ. ಅಲ್ಲದೆ, ಅವರು ಸಂಸ್ಕೃತಿ ಮತ್ತು ಸಂಸ್ಕಾರಗಳನ್ನು ಕಲಿಸುತ್ತಾರೆ. ಆದರೆ, ರಾಜ್ಯಾಡಳಿತದ ಬಿಗಿ-ಗತ್ತು ಮಾತ್ರ ತಂದೆ ನಿರ್ವಹಿಸಿ ಇತಿಹಾಸ ಸೃಷ್ಟಿಸಬಲ್ಲ. ಪುರಾಣ-ಇತಿಹಾಸವೂ ಸೇದಂತೆ ಜನಸಾಮಾನ್ಯರ ಜಾನಪದೀಯ ಮನದಾಳವೂ ಇದೇ ಆಗಿದೆ ಎಂದರು. ಕಾರ್ಯಕ್ರಮದಲ್ಲಿ ಕಥೆಗಾರ್ತಿ ಡಾ.ಪದ್ಮಿನಿ ನಾಗರಾಜ್, ಬುಕ್ ಬ್ರಹ್ಮ ಸಂಪಾದಕ ದೇವುಪತ್ತಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X