Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಶಿಷ್ಟರು-ಹಿಂದುಳಿದವರ ಶಿಕ್ಷಣ...

ಪರಿಶಿಷ್ಟರು-ಹಿಂದುಳಿದವರ ಶಿಕ್ಷಣ ಸೌಲಭ್ಯದಲ್ಲಿ ರಾಜ್ಯ ಪ್ರಥಮ: ಡಿಸಿಎಂ ಗೋವಿಂದ ಕಾರಜೋಳ

ವಾರ್ತಾಭಾರತಿವಾರ್ತಾಭಾರತಿ8 March 2020 11:34 PM IST
share
ಪರಿಶಿಷ್ಟರು-ಹಿಂದುಳಿದವರ ಶಿಕ್ಷಣ ಸೌಲಭ್ಯದಲ್ಲಿ ರಾಜ್ಯ ಪ್ರಥಮ: ಡಿಸಿಎಂ ಗೋವಿಂದ ಕಾರಜೋಳ

ಹಾವೇರಿ, ಮಾ.8: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಸೌಲಭ್ಯ ಕಲ್ಪಿಸುವಲ್ಲಿ ರಾಷ್ಟ್ರದಲ್ಲೆ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಸರ್ವಜ್ಞ ಕೆರೆ ತುಂಬಿಸುವ ಯೋಜನೆ, ದೂದಿಹಳ್ಳಿ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರ ಚೆನ್ನಮ್ಮ ವಸತಿ ಶಾಲೆಯ ನೂತನ ಕಟ್ಟಡದ ಲೋಕಾರ್ಪಣೆ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇಡೀ ದೇಶದಲ್ಲಿ ಬಡವರ ಮಕ್ಕಳ ಶಿಕ್ಷಣ ನೀಡುವಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನದಲ್ಲಿದೆ. ರಾಷ್ಟ್ರೀಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಆಯೋಗ ದೇಶದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಕರ್ನಾಟಕ ರಾಜ್ಯ ಅತ್ಯುತ್ತಮ ರಾಜ್ಯವೆಂದು ಘೋಷಿಸಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ 826 ವಸತಿ ಶಾಲೆಗಳಿವೆ. 456 ವಸತಿ ಶಾಲೆಗಳು ಸ್ವಂತ ಕಟ್ಟಡದಲ್ಲಿವೆ. 190 ವಸತಿ ಶಾಲೆಗಳು ನಿರ್ಮಾಣ ಹಂತದಲ್ಲಿವೆ. ಎಸ್ಸಿ, ಎಸ್ಟಿ ಇಲಾಖೆಯಿಂದ ರಾಜ್ಯದ 43 ಲಕ್ಷ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, 2009 ಹಾಸ್ಟೇಲ್, 826 ಸರಕಾರಿ ವಸತಿ ಶಾಲೆಗಳಲ್ಲಿ 4 ಲಕ್ಷ ಮಕ್ಕಳು ಉಂಡು ಓದುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಹೊಸದಾಗಿ ಮಂಜೂರು ಮಾಡಿದ 26 ವಸತಿ ಶಾಲೆಗಳಲ್ಲಿ ಆರು ವಸತಿ ಶಾಲೆಗಳನ್ನು ಹಾವೇರಿ ಜಿಲ್ಲೆಗೆ ಮಂಜೂರು ಮಾಡಲಾಗಿದೆ. ಮುಂದಿನ ತಿಂಗಳಿಂದ 137 ಕೋಟಿ ರೂ.ವೆಚ್ಚದಲ್ಲಿ ಕಟ್ಟಡ ಕಾಮಗಾರಿ ಆರಂಭಗೊಳ್ಳಲಿದೆ. 250 ಮಕ್ಕಳ ಪ್ರವೇಶ ಅವಕಾಶ ಕಲ್ಪಿಸುವ ನೂತನ ವಸತಿ ಶಾಲೆಯ ಕಟ್ಟಡಕ್ಕೆ ಹಿರೇಕೆರೂರಿನಲ್ಲಿಂದು ಅಡಿಗಲ್ಲು ಹಾಕಲಾಗಿದೆ. 23 ಕೋಟಿ ರೂ.ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಮಾಡಲಾಗುವುದು ಎಂದು ಅವರು ಹೇಳಿದರು.

ದೂದಿಹಳ್ಳಿ ಮೊರಾರ್ಜಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲಾ ಸಂಕೀರ್ಣದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಆರಂಭಿಸಲು ಮುಂದಿನ ಶೈಕ್ಷಣಿಕ ಸಾಲಿನಿಂದ ಮಂಜೂರಾತಿ ನೀಡಲಾಗುವುದು ಎಂದು ಗೋವಿಂದ ಕಾರಜೋಳ ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ರಾಜ್ಯ ಉಗ್ರಾಣ ಅಭಿವೃದ್ಧಿ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X