Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ಮಾ.14, 15ರಂದು ವಕೀಲರಿಗಾಗಿ...

ಉಡುಪಿಯಲ್ಲಿ ಮಾ.14, 15ರಂದು ವಕೀಲರಿಗಾಗಿ ರಾಜ್ಯ ಮಟ್ಟದ ವಾಲಿಬಾಲ್, ತ್ರೋಬಾಲ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ9 March 2020 10:40 PM IST
share

ಉಡುಪಿ, ಮಾ.9: ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ವಾಲಿಬಾರ್ (ಪುರುಷರಿಗೆ) ಹಾಗೂ ತ್ರೋಬಾಲ್ (ಮಹಿಳೆಯರಿಗೆ) ಟೂರ್ನಿ ಮಾ.14 ಮತ್ತು 15ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಕೋರ್ಟ್‌ಗಳಲ್ಲಿ ನಡೆಯಲಿವೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ದಿವಾಕರ ಎಂ.ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ವಕೀಲರ ಸಂಘದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊನಲು ಬೆಳಕಿನಲ್ಲಿ ಟೂರ್ನಿ ನಡೆಯಲಿವೆ. ವಾಲಿಬಾಲ್ ಪಂದ್ಯಾಟ ವಿಜೇತ ತಂಡಕ್ಕೆ 44,444 ರೂ.ನಗದು ಹಾಗೂ ಮಿರುಗುವ ಟ್ರೋಫಿ, ರನ್ನರ್‌ಅಪ್ ತಂಡಕ್ಕೆ 33,333ರೂ., ತೃತೀಯ ಸ್ಥಾನಿ ತಂಡಕ್ಕೆ 22,222ರೂ. ಮತ್ತು ಟ್ರೋಫಿ ಮತ್ತು ಚತುರ್ಥ ಸ್ಥಾನಿ ತಂಡಕ್ಕೆ 11,111ರೂ. ನಗದು ಬಹುಮಾನ ಹಾಗೂ ಶಾಶ್ವತ ಟ್ರೋಫಿ ಯನ್ನು ನೀಡಲಾಗುವುದು ಎಂದವರು ಹೇಳಿದರು.

ಮಹಿಳೆಯರ ತ್ರೋಬಾಲ್ ಟೂರ್ನಿ ವಿಜೇತ ತಂಡಕ್ಕೆ 33,333ರೂ. ಮತ್ತು ಟ್ರೋಫಿ, ರನ್ನರ್ ಅಪ್‌ಗೆ 22,222ರೂ.ನಗದು ಮತ್ತು ಟ್ರೋಫಿ, ತೃತೀಯ ಸ್ಥಾನಿಗೆ 11,111ರೂ. ಹಾಗೂ ಚತುರ್ಥ ಸ್ಥಾನಿಗೆ 7,777ರೂ.ನಗದು ಮತ್ತು ಶಾಶ್ವತ ಟ್ರೋಫಿ ನೀಡಲಾಗುವುದು. ಅಲ್ಲದೇ ಪ್ರತಿ ವಿಭಾಗದ ಉತ್ತಮ ಆಟಗಾರರಿಗೆ ಆಕರ್ಷಕ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು ಎಂದರು.

ಟೂರ್ನಿಯನ್ನು ಮಾ.14ರ ಶನಿವಾರ ಬೆಳಗ್ಗೆ 11 ಗಂಟೆಗೆ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಜಸ್ಟಿಸ್ ಎಸ್.ಅಬಬ್ದ್ ನಝೀರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಜಸ್ಟಿಸ್ ಅಶೋಕ್ ಜಿ.ನಿಜಗನ್ನವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ.ಎಂ.ಜೋಷಿ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಟೂರ್ನಿಯ ಸಮಾರೋಪ ಸಮಾರಂಭ ಮಾ.15 ರವಿವಾರ ಸಂಜೆ 7 ಗಂಟೆಗೆ ನ್ಯಾಯಮೂರ್ತಿ ಸಿ.ಎಂ.ಜೋಷಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಭಾಷಣ ಮಾಡಲಿದ್ದಾರೆ. ಕರ್ನಾಟಕ ರಾಜ್ಯ ವಕೀಲರದ ಪರಿಷತ್‌ನ ಅಧ್ಯಕ್ಷ ಜೆ.ಎಂ.ಅನಿಲ್‌ಕುಮಾರ್ ಹಾಗೂ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಧೀಶರಾದ ನರಹರಿ ಪ್ರಭಾಕರ ಮರಾಠೆ ಮುಖ್ಯ ಅತಿಥಿಗಳಾಗಿರುವರು.

ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಡೆಯುವ ಈ ಟೂರ್ನಿಯಲ್ಲಿ ಸುಮಾರು 25ರಿಂದ 30 ಪುರುಷ ಹಾಗೂ 10ರಿಂದ 12 ಮಹಿಳಾ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ದಿವಾಕರ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ರೆನಾಲ್ಡ್ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಬಿ.ನಾಗರಾಜ್, ಟೂರ್ನಿ ಆರ್ಥಿಕ ಸಮಿತಿ ಸಂಚಾಲಕ ಶಾಂತರಾಮ ಶೆಟ್ಟಿ, ಕ್ರೀಡಾಕಾರ್ಯದರ್ಶಿ ಬಾಲಚಂದ್ರ ಹಾಗೂ ಇತರ ಪದಾಧಿಕಾರಿಗಳಾದ ಮಟ್ಟಾರು ರತ್ನಾಕರ ಹೆಗ್ಡೆ, ಅಸದುಲ್ಲಾ ಕಟಪಾಡಿ, ಎಚ್.ರಾಘವೇಂದ್ರ ಶೆಟ್ಟಿ, ಸತೀಶ್ ಪೂಜಾರಿ, ಮುರಳೀಧರ ರಾವ್ ಹಾಗೂ ರೊನಾಲ್ಡ್ ಪುಟಾಡೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X