Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ ತಂಡಕ್ಕೆ ವಾಪಸಾಗಲು ಐಪಿಎಲ್‌ನಲ್ಲಿ ...

ಧೋನಿ ತಂಡಕ್ಕೆ ವಾಪಸಾಗಲು ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ಅಗತ್ಯ: ಬಿಸಿಸಿಐ

ವಾರ್ತಾಭಾರತಿವಾರ್ತಾಭಾರತಿ9 March 2020 11:41 PM IST
share
ಧೋನಿ ತಂಡಕ್ಕೆ ವಾಪಸಾಗಲು ಐಪಿಎಲ್‌ನಲ್ಲಿ  ಉತ್ತಮ ಪ್ರದರ್ಶನ ಅಗತ್ಯ: ಬಿಸಿಸಿಐ

ರಾಜ್‌ಕೋಟ್, ಮಾ 9: ರಾಷ್ಟ್ರೀಯ ಆಯ್ಕೆ ಸಮಿತಿಯಲ್ಲಿ ಅಧ್ಯಕ್ಷರು ಸೇರಿದಂತೆ ಇಬ್ಬರು ಹೊಸ ಸದಸ್ಯರನ್ನು ಸೇರಿಸುವುದರಿಂದ ಎಂಎಸ್ ಧೋನಿ ಕುರಿತು ಸಮಿತಿಯ ನಿಲುವು ಬದಲಾಗಿಲ್ಲ, ಅವರನ್ನು ಟ್ವೆಂಟಿ-20 ವಿಶ್ವಕಪ್ ತಂಡದ ಆಯ್ಕೆ ವೇಳೆ ಪರಿಗಣಿಸಬೇಕಾದರೆ ಮುಂಬರುವ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗುತ್ತದೆ ಎಂದು ಬಿಸಿಸಿಐನ ಉನ್ನತ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಮಾರ್ಚ್ 12 ರಂದು ಧರ್ಮಶಾಲಾದಲ್ಲಿ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಸುನಿಲ್ ಜೋಶಿ ನೇತೃತ್ವದ ಆಯ್ಕೆ ಸಮಿತಿ ರವಿವಾರ ಮೊದಲ ಬಾರಿಗೆ ಅಹ್ಮದಾಬಾದ್‌ನಲ್ಲಿ ಸಭೆ ಸೇರಿತು.

ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್ ಮತ್ತು ಶಿಖರ್ ಧವನ್ ಫಿಟ್‌ನೆಸ್ ಸಮಸ್ಯೆಯಿಂದ ಪಾರಾಗಿರುವ ಹಿನ್ನೆಲೆಯಲ್ಲಿ ಮತ್ತೆ ತಂಡಕ್ಕೆ ಕಾಲಿಟ್ಟಿದ್ದಾರೆ.

 ಧೋನಿ ತಂಡದಲ್ಲಿಲ್ಲ. ಆದರೆ ಆಯ್ಕೆಗೆ ಪರಿಗಣಿಸಬೇಕಾದರೆ ಅವರು ಮೊದಲು ಆಡಬೇಕಾಗುತ್ತದೆ ಎಂದು ಜೋಶಿ ಸ್ಪಷ್ಟಪಡಿಸಿದ್ದಾರೆ. ಹಿಂದಿನ ಆಯ್ಕೆ ಸಮಿತಿಯ ಅಧ್ಯಕ್ಷ ಎಂಎಸ್‌ಕೆ ಪ್ರಸಾದ್ ಈ ಹಿಂದೆ ಈ ಮಾತನ್ನು ಹೇಳಿದ್ದರು. ಅದೇ ನಿಲುವನ್ನು ಅವರ ಉತ್ತರಾಧಿಕಾರಿ ಜೋಶಿ ಮುಂದುವರಿಸಲು ಬಯಸಿದ್ದಾರೆ.

 ಜುಲೈನಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಟೀಮ್ ಇಂಡಿಯಾದ ಪರ ಒಂದೇ ಒಂದು ಪಂದ್ಯವನ್ನು ಆಡದಿರುವ ಧೋನಿ ಮಾರ್ಚ್ 29 ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಐಪಿಎಲ್‌ನಲ್ಲಿ ಪುನರಾಗಮನವನ್ನು ಮಾಡಲಿದ್ದಾರೆ.

ಇದು ಬಹಳ ಸರಳವಾದ ಆಯ್ಕೆ ಸಭೆ ಮತ್ತು ಧೋನಿ ಈ ಬಾರಿ ದಕ್ಷಿಣ ಆಫ್ರಿಕಾ ಲೆಕ್ಕಾಚಾರದಲ್ಲಿಲ್ಲದ ಕಾರಣ, ಅವರ ಭವಿಷ್ಯದ ಬಗ್ಗೆ ಯಾವುದೇ ಔಪಚಾರಿಕ ಮಾತುಕತೆ ನಡೆದಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಧೋನಿ ಐಪಿಎಲ್‌ನಲ್ಲಿ ಚೆನ್ನಾಗಿ ಆಡಿದರೆ ಮಾತ್ರ ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ. ಐಪಿಎಲ್‌ನಲ್ಲಿ ಅವರೊಂದಿಗೆ ಹಲವು ಮಂದಿ ಹಿರಿಯರು ಮತ್ತು ಯುವ ಆಟಗಾರರು ಆಡಲಿದ್ದಾರೆ. ಅವರು ಉತ್ತಮವಾಗಿ ಆಡಿದರೆ ಅವರನ್ನು ಸಹ ಪರಿಗಣಿಸಬೇಕಾಗಿದೆ.ಆದರೆ ನೀವು ಕೆಲವು ಆಶ್ಚರ್ಯಕರ ಸೇರ್ಪಡೆಗಳನ್ನು ನೋಡಬಹುದು ಅವರು ಹೇಳಿದರು.

ಟ್ವೆಂಟಿ-20 ವಿಶ್ವಕಪ್‌ನ್ನು ಅಕ್ಟೋಬರ್-ನವಂಬರ್‌ನಲ್ಲಿ ಆಸ್ಟ್ರೇಲಿಯದಲ್ಲಿ ಆಡಲಾಗುವುದು.

ಐಪಿಎಲ್‌ನಲ್ಲಿ ಆಟಗಾರರು ನೀಡುವ ಪ್ರದರ್ಶನವನ್ನು ಗಮನಿಸಲಾಗುತ್ತದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದವರು ಮೆಗಾ ಈವೆಂಟ್‌ಗೆಭಾರತ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲಿದ್ದಾರೆ. ಐಪಿಎಲ್‌ನಲ್ಲಿನ ಸಾಧನೆ ಆಟಗಾರರಿಗೆ ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯಲು ನೆರವಾಗಲಿದೆ. ಮುಖ್ಯ ಕೋಚ್ ರವಿಶಾಸ್ತ್ರಿ ಕೂಡಾ ಧೋನಿ ಐಪಿಎಲ್ ನಂತರ ತಂಡಕ್ಕೆ ಮರಳಬಹುದೆಂದು ಸುಳಿವು ನೀಡಿದ್ದಾರೆ. ಆದರೆ ಏಳು ತಿಂಗಳಿಗಿಂತ ಹೆಚ್ಚು ಕಾಲ ಅವರು ಆಟವನ್ನು ಆಡದ ಕಾರಣ ಅವರ ಭವಿಷ್ಯವು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ.

ಧೋನಿ ಉತ್ತರಾಧಿಕಾರಿ ರಿಷಭ್ ಪಂತ್ ಅವರು ಇನ್ನೂ ತನ್ನ ಸಾಮರ್ಥ್ಯವನ್ನು ಜಗತ್ತಿನ ಮುಂದೆ ಸಾಬೀತುಪಡಿಸುವಲ್ಲಿ ಎಡವಿದ್ದಾರೆ. ಇದೀಗ ಲೋಕೇಶ್ ರಾಹುಲ್ ಅವರು ತಂಡದ ವಿಕೆಟ್ ಕೀಪರ್ ಜವಾಬ್ದಾರಿ ಹೊತ್ತುಕೊಂಡಿದ್ದರೂ, ಅವರು ತಂಡದ ಪೂರ್ಣಾವಧಿ ವಿಕೆಟ್ ಕೀಪರ್ ಆಗಿ ಬೆಳೆದಿಲ್ಲ. ಈ ಕಾರಣದಿಂದಾಗಿ ಧೋನಿಯ ಪುನರಾಗಮನವನ್ನು ತಳ್ಳಿಹಾಕುವಂತಿಲ್ಲ. ಮಾರ್ಚ್ 29ರಂದು ವಾಂಖೆಡೆ ಸ್ಟೇಡಿಯಂನಲ್ಲಿ ಐಪಿಎಲ್ ಟ್ವೆಂಟಿ-20 ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಧೋನಿ ನಾಯಕರಾಗಿ ಮುನ್ನಡೆಸುವುದನ್ನು ಅವರ ಅಸಂಖ್ಯಾತ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X