Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸೌರಾಷ್ಟ್ರಕ್ಕೆ ಅರ್ಪಿತ್-ಪೂಜಾರ ರಕ್ಷಣೆ

ಸೌರಾಷ್ಟ್ರಕ್ಕೆ ಅರ್ಪಿತ್-ಪೂಜಾರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ10 March 2020 11:11 PM IST
share
ಸೌರಾಷ್ಟ್ರಕ್ಕೆ ಅರ್ಪಿತ್-ಪೂಜಾರ ರಕ್ಷಣೆ

ರಾಜ್‌ಕೋಟ್, ಮಾ.10: ಚೇತೇಶ್ವರ ಪೂಜಾರ ಮತ್ತು ಅರ್ಪಿತ್ ವಸವಾಡ ಐದು ಗಂಟೆಗಳ ಕಾಲ ನಡೆಸಿರುವ ರಕ್ಷಣಾತ್ಮಕ ಬ್ಯಾಟಿಂಗ್‌ನ ನೆರವಿನಲ್ಲಿ ಸೌರಾಷ್ಟ್ರ ತಂಡ ಇಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಬಂಗಾಳ ವಿರುದ್ಧ ಉತ್ತಮ ಸ್ಥಿತಿಯಲ್ಲಿದೆ. ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ಪಂದ್ಯದ ಎರಡನೇ ದಿನವಾಗಿರುವ ಮಂಗಳವಾರ ಸೌರಾಷ್ಟ್ರ ತಂಡ ದಿನದಾಟದಂತ್ಯಕ್ಕೆ 160 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟದಲ್ಲಿ 384 ರನ್ ಗಳಿಸಿದೆ.

13 ರನ್ ಗಳಿಸಿರುವ ಚಿರಾಗ್ ಜೈನ್ ಹಾಗೂ 13 ರನ್ ಗಳಿಸಿರುವ ಧಮೇಂದ್ರ ಸಿನ್ಹಾ ಜಡೇಜ ಕ್ರೀಸ್‌ನಲ್ಲಿದ್ದಾರೆ. ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಪ್ರಥಮ ಇನಿಂಗ್ಸ್‌ನಲ್ಲಿ 80.5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟದಲ್ಲಿ 206 ರನ್ ಗಳಿಸಿದ್ದ ಸೌರಾಷ್ಟ್ರ ತಂಡ ಬ್ಯಾಟಿಂಗ್ ಮುಂದುವರಿಸಿ ಈ ಮೊತ್ತಕ್ಕೆ 178 ರನ್ ಸೇರಿಸಿದೆ. 29 ರನ್ ಗಳಿಸಿ ಕ್ರೀಸ್‌ನಲ್ಲಿದ್ದ ಅರ್ಪಿತ್ ವಸವಾಡ ಮತ್ತು ಜ್ವರದಿಂದಾಗಿ 5 ರನ್ ಗಳಿಸಿ ನಿವೃತ್ತರಾಗಿದ್ದ ಚೇತೇಶ್ವರ ಪೂಜಾರ ಬ್ಯಾಟಿಂಗ್ ಮುಂದುವರಿಸಿ 6ನೇ ವಿಕೆಟ್‌ಗೆ 380 ಎಸೆತಗಳಲ್ಲಿ (79.1 ಓವರ್‌ಗಳಲ್ಲಿ ) 142 ರನ್‌ಗಳ ಜೊತೆಯಾಟ ನೀಡಿದರು. ವಸವಾಡ ಸತತ ಎರಡನೇ ಶತಕ ದಾಖಲಿಸಿದರು. ಅವರು 287 ಎಸೆತಗಳಲ್ಲಿ 11 ಬೌಂಡರಿಗಳ ಸಹಾಯದಿಂದ 106 ರನ್ ದಾಖಲಿಸಿದರು. ಇದು ಈ ಆವೃತ್ತಿಯಲ್ಲಿ ಅವರ ನಾಲ್ಕನೇ ಶತಕವಾಗಿದೆ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 8ನೇ ಶತಕವಾಗಿದೆ. ಗುಜರಾತ್ ವಿರುದ್ಧ ಸೆಮಿಫೈನಲ್‌ನಲ್ಲಿ ತಂಡದ ಗೆಲುವಿನಲ್ಲಿ ವಸವಾಡ ದೊಡ್ಡ ಕೊಡುಗೆ ನೀಡಿದ್ದರು.

 ಪೂಜಾರ ಮತ್ತು ವಸವಾಡ ಅವರ ಇಂದಿನ ಆಟದಲ್ಲಿ 15ನೇ ಓವರ್‌ನಲ್ಲಿ ಮೊದಲ ಬೌಂಡರಿ ದಾಖಲಿಸಿದರು. ಅರ್ನಾಬ್ ನಂದಿ ಎಸೆತದಲ್ಲಿ ಚೆಂಡನ್ನು ಬೌಂಡರಿಗಟ್ಟುವ ಮೂಲಕ ವಸವಾಡ ಅರ್ಧಶತಕ ದಾಖಲಿಸಿದರು. ಚಹಾ ವಿರಾಮಕ್ಕಿಂತ ಸ್ವಲ್ಪ ಮೊದಲು ಶತಕ ಪೂರೈಸಿದರು. 106 ರನ್ ಗಳಿಸಿದ ಅರ್ಪಿತ್ ಅವರು ಶಹಬಾಝ್ ಅಹ್ಮದ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು. 66 ರನ್ (237 ಎಸೆತ, 5 ಬೌಂಡರಿ) ಗಳಿಸಿದ ಪೂಜಾರರನ್ನು ಮುಕೇಶ್ ಕುಮಾರ್ ಎಲ್ಬಿಡಬ್ಲು ಬಲೆಗೆ ಬೀಳಿಸಿದರು. ಪ್ರೇರಕ್ ಮಂಕಡ್ ಮುಕೇಶ್ ಕುಮಾರ್ ಎಸೆತದಲ್ಲಿ ಖಾತೆ ತೆರೆಯದೆ ನಿರ್ಗಮಿಸಿದರು. ಬಂಗಾಳ ತಂಡದ ಆಕಾಶ್ ದೀಪ್ 77ಕ್ಕೆ 3 ವಿಕೆಟ್, ಮುಕೇಶ್ ಕುಮಾರ್ ಮತ್ತು ಶಹಬಾಝ್ ತಲಾ 2 ವಿಕೆಟ್, ಇಶಾನ್ ಪೊರೆಲ್ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X