Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಕಮ್ಯುನಿಸ್ಟ್ ಅಲ್ಪಸಂಖ್ಯಾತನೊಬ್ಬನ

ಕಮ್ಯುನಿಸ್ಟ್ ಅಲ್ಪಸಂಖ್ಯಾತನೊಬ್ಬನ ತಲ್ಲಣ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ10 March 2020 6:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಮ್ಯುನಿಸ್ಟ್ ಅಲ್ಪಸಂಖ್ಯಾತನೊಬ್ಬನ ತಲ್ಲಣ

 ಇಮ್ತಿಯಾಜ್ ಹುಸೇನ್ ಅವರು ಹಿರಿಯ ಕಾರ್ಮಿಕ ಹೋರಾಟಗಾರರು. ರಾಜಕೀಯ ಸಂಘಟಕರು, ಸಾಮಾಜಿಕ ಕಾರ್ಯಕರ್ತರು. ಒಂದು ಕಾಲದ ಕಾಮ್ರೆಡ್. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಹೋದರೂ, ಅಲ್ಲೂ ಕಾರ್ಮಿಕ ವೌಲ್ಯಗಳನ್ನು ಎತ್ತಿ ಹಿಡಿದವರು. ಇದೀಗ ಹುಸೇನ್ ಅವರು ‘ಹೆಜ್ಜೆ ಗುರುತುಗಳು ’ ಹೆಸರಿನಲ್ಲಿ ತಮ್ಮ ಆತ್ಮಕತನವನ್ನು ಬರೆದಿದ್ದಾರೆ.

ಕಮ್ಯುನಿಸ್ಟನೊಬ್ಬನ ಬದುಕಿನ ಕಥನ ಉಳಿದ ರಾಜಕೀಯ ಸಂಘಟಕರ ಕಥನಕ್ಕಿಂತ ಭಿನ್ನವಾಗಿರುವಂತಹದು. ಇದೇ ಸಂದರ್ಭದಲ್ಲಿ ಮುಸ್ಲಿಮ್ ಸಮುದಾಯದ ವ್ಯಕ್ತಿಯೊಬ್ಬ ಕಮ್ಯುನಿಸ್ಟನಾಗುವ ಸಂದರ್ಭ ಉಳಿದವರ ಅನುಭವಕ್ಕಿಂತ ಭಿನ್ನವಾದುದು. ಕಮ್ಯುನಿಸ್ಟ್ ಪಕ್ಷದೊಳಗೂ ‘ಇಸ್ಲಾಮಾಫೋಬಿಯಾ’ ಲಕ್ಷಣಗಳು ಹೆಚ್ಚಿರುವುದರಿಂದ ಮತ್ತು ಇತ್ತ ಮುಸ್ಲಿಮ್ ಸಮುದಾಯದೊಳಗೆ ಕಮ್ಯುನಿಸ್ಟನೊಬ್ಬನನ್ನು ಸ್ವೀಕರಿಸುವ ಮನಸ್ಥಿತಿ ಬೇರೆಯೇ ಇರುವುದರಿಂದ ಇವರ ಆತ್ಮಕತೆ ಭಿನ್ನವಾಗಿ, ಕುತೂಹಲಕರವಾಗಿ ಕಾಡುತ್ತದೆ. ವಿಶೇಷವೆಂದರೆ ‘ನಿಮ್ಮಿಡನಿದ್ದೂ ನಿಮ್ಮಂತಾಗದೆ’ ಎನ್ನುವಂತೆ, ಕಮ್ಯುನಿಸ್ಟ್ ಆಗಿದ್ದರೂ ಕೋಮುಗಲಭೆಯ ಸಂದರ್ಭದಲ್ಲಿ ಅವರು ಮುಸ್ಲಿಮನಾಗಿಯೇ ನೋವನ್ನನುಭವಿಸಬೇಕಾಯಿತು. ‘ತನ್ನ ಸಂತ್ರಸ್ತ ಸಮುದಾಯದೊಂದಿಗೆ ಗುರುತಿಸಿಕೊಳ್ಳುವುದು’ ಅವರಿಗೆ ಅನಿವಾರ್ಯವಾಯಿತು. ಈ ಬಗ್ಗೆಯೂ ಅವರು ಅತ್ಯಂತ ತಲ್ಲಣದಿಂದ ಬರೆದುಕೊಂಡಿದ್ದಾರೆ.

‘...ಇಲ್ಲಿಯ ಪ್ರತಿ ಹೆಜ್ಜೆಯೂ ಬದುಕಿನ ಅನೇಕ ವಿವರಗಳನ್ನು ಸೂಚಿಸುತ್ತವೆ. ಆ ಹೆಜ್ಜೆಗಳು ಒಣ ವರದಿಗಳಲ್ಲ ಬದಲಿಗೆ ಇಡೀ ಬದುಕನ್ನು ಆಮೂಲಾಗ್ರವಾಗಿ ಪರಿವರ್ತಿಸಿರುವ ತಿರುವುಗಳಾಗಿವೆ. ಬಾಲ್ಯದಿಂದ ಈತನಕ ಆ ತಿರುವುಗಳಿಂದ ಇಮ್ತಿಯಾಜ್ ಎನ್ನುವ ಸಣ್ಣ ವ್ಯಕ್ತಿತ್ವವು ಎಲ್ಲರ ಗಮನ ಸೆಳೆಯುವ ಪ್ರಮುಖ ವ್ಯಕ್ತಿತ್ವವಾಗಿ ರೂಪಾಂತರವಾಗಿರುವುದೊಂದು ವಿಸ್ಮಯಕರ. ತನ್ನ ಬದುಕಿನ ತಿರುವುಗಳಿಗೆ ಮತ್ತು ಪರಿವರ್ತನೆಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ತಾನು ಕಂಡುಕೊಂಡ ಚಳವಳಿಗಳು, ದೊಡ್ಡ ಪ್ರಮಾಣದಲ್ಲಿ ಬದುಕಿನ ಮೇಲೆ ಪ್ರಭಾವಿಸಿರುವ ಧಾತುಗಳನ್ನು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ...’ ಎಂದು ಬೆನ್ನುಡಿಯಲ್ಲಿ ಕೃತಿಯ ಕುರಿತಂತೆ ಪ್ರೊ. ಸಿ.ಕೆ. ಮಹೇಶ್ ಅರ್ಥಪೂರ್ಣವಾಗಿ ಬರೆಯುತ್ತಾರೆ.

ಇಲ್ಲಿ ಇಮ್ತಿಯಾಜ್ ಅವರು ಏಕಕಾಲದಲ್ಲಿ ಮುಸ್ಲಿಮ್ ಸಮುದಾಯವನ್ನು, ಪಿಂಜಾರ ಸಮುದಾಯವನ್ನು ಪ್ರತಿನಿಧಿಸುವುದು....ಜೊತೆಗೆ ಇವೆಲ್ಲವನ್ನು ಮೀರಿ ಮಾನವ ಕುಲವನ್ನು ಪ್ರತಿನಿಧಿಸುವ ತವಕ ವಿಶೇಷವಾದುದು.

ಸಹನಾ ಪ್ರಕಾಶನ ದಾವಣಗೆರೆ ಈ ಕೃತಿಯನ್ನು ಹೊರತಂದಿದೆ. ಕೃತಿಯ ಒಟ್ಟು ಪುಟಗಳು 190. ಮುಖಬೆಲೆ 150 ರೂಪಾಯಿ. ಆಸಕ್ತರು 94485 34347 ದೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X