Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರವನ್ನು ಶೀಘ್ರ ತಡೆದ...

ದಿಲ್ಲಿ ಹಿಂಸಾಚಾರವನ್ನು ಶೀಘ್ರ ತಡೆದ ಪೊಲೀಸರು ಅಭಿನಂದನಾರ್ಹರು: ಸಂಸತ್ ನಲ್ಲಿ ಅಮಿತ್ ಶಾ

700ಕ್ಕೂ ಅಧಿಕ ಎಫ್ ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ11 March 2020 7:53 PM IST
share
ದಿಲ್ಲಿ ಹಿಂಸಾಚಾರವನ್ನು ಶೀಘ್ರ ತಡೆದ ಪೊಲೀಸರು ಅಭಿನಂದನಾರ್ಹರು: ಸಂಸತ್ ನಲ್ಲಿ ಅಮಿತ್ ಶಾ

ಹೊಸದಿಲ್ಲಿ: ದಿಲ್ಲಿ ಹಿಂಸಾಚಾರವನ್ನು ನಗರದ 4 ಶೇ. ವ್ಯಾಪ್ತಿಯೊಳಗೆ ನಿಯಂತ್ರಿಸುವ ಮೂಲಕ ದಿಲ್ಲಿ ಪೊಲೀಸರು ಅಭಿನಂದನಾರ್ಹ ಕೆಲಸ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಫೆಬ್ರವರಿ 24ರಂದು ಮಧ್ಯಾಹ್ನ 2 ಗಂಟೆಗೆ ಗಲಭೆಯ ಮೊದಲ ವರದಿ ಬಂದಿದ್ದು, ಫೆಬ್ರವರಿ 25ರಂದು ರಾತ್ರಿ 11 ಗಂಟೆಗೆ ಕೊನೆಯ ವರದಿ ಬಂದಿದೆ ಎಂದು ಅಮಿತ್ ಶಾ ಲೋಕಸಭೆಗೆ ಮಾಹಿತಿ ನೀಡಿದರು.

"ಫೆಬ್ರವರಿ 25ರ ನಂತರ ಯಾವುದೇ ಹಿಂಸಾಚಾರ ನಡೆದಿಲ್ಲ. ಹಿಂಸಾಚಾರವನ್ನು ರಾಜಕೀಯಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ" ಎಂದವರು ಹೇಳಿದರು.

700ಕ್ಕೂ ಅಧಿಕ ಎಫ್  ಐಆರ್ ಗಳು ದಾಖಲಾಗಿವೆ. 2600ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆಯಲಾಗಿದೆ ಅಥವಾ ಬಂಧಿಸಲಾಗಿದೆ. ದಿಲ್ಲಿ ಪೊಲೀಸರಿಂದ ಸ್ವೀಕರಿಸಲ್ಪಟ್ಟ 1000ಕ್ಕೂ ಅಧಿಕ ವಿಡಿಯೋಗಳನ್ನು 'ಫೇಸ್ ಐಡೆಂಟಿಫಿಕೇಶನ್' ಮೂಲಕ ಆರೋಪಿಗಳ ಪತ್ತೆಗೆ ಬಳಸಲಾಗುತ್ತಿದೆ ಎಂದವರು ಮಾಹಿತಿ ನೀಡಿದರು.

ಅಮಾಯಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ನಾವು ಭರವಸೆ ನೀಡುತ್ತಿದ್ದೇವೆ. ಎಲ್ಲಾ ಸಾಕ್ಷಿಗಳಿದ್ದರೆ ಮಾತ್ರ ಬಂಧಿಸಲಾಗುವುದು. ನಾನು ಹಿಂದೂ-ಮುಸ್ಲಿಂ ಎನ್ನುವುದರಲ್ಲಿ ನಂಬಿಕೆ ಇರಿಸಿಲ್ಲ. ದಿಲ್ಲಿ ಹಿಂಸಾಚಾರದಲ್ಲಿ 52 ಭಾರತೀಯರು ಮೃತಪಟ್ಟಿದ್ದಾರೆ. ಧರ್ಮದ ಆಧಾರದಲ್ಲಿ ನಾವು ಸಂಸತ್ತನ್ನೂ ಒಡೆಯಬಹುದೇ? ಎಂದವರು ಪ್ರಶ್ನಿಸಿದರು.

ಭಾರತದಲ್ಲಿ ಕೋಮು ಹಿಂಸಾಚಾರದಲ್ಲಿ ಮೃತಪಟ್ಟವರಲ್ಲಿ ಶೇ. 76 ಜನರು ಕಾಂಗ್ರೆಸ್ ಆಡಳಿತದ ಸಂದರ್ಭ ಸಾವನ್ನಪ್ಪಿದ್ದಾರೆ. ಶಾಂತಿ ಕಾಪಾಡುವಂತೆ ಗೃಹ ಸಚಿವರು ಮನವಿ ಮಾಡಿಲ್ಲ ಎಂದು ಜನರು ಹೇಳುತ್ತಾರೆ. ಒಂದು ವೇಳೆ ಹಾಗೆ ಹೇಳದಿದ್ದರೂ ದೊಡ್ಡ ಮರ ಬಿದ್ದಾಗ ಭೂಮಿ ಕಂಪಿಸುತ್ತದೆ ಎಂದು ಹೇಳಿಲ್ಲ. 3000 ಸಿಕ್ಖ್ ಸಹೋದರು, ಸಹೋದರಿಯರನ್ನು ಜೀವಂತ ಸುಟ್ಟು ಕೊಂದು ಹಾಕಿದಾಗ ದೊಡ್ಡ ಮರ ಬೀಳುವಾಗ ಭೂಮಿ ಕಂಪಿಸುತ್ತದೆ ಎಂದು ನೀವು ಹೇಳಿದಿರಿ ಎಂದರು.

 ಮುಖ ಗುರುತಿಸುವ ಸಾಫ್ಟ್‌ವೇರ್ ಮೂಲಕ ಗುರುತಿಸಲಾದ 1,100 ಜನರನ್ನು ಬಂಧಿಸಲು ನಾವು 40 ತಂಡಗಳನ್ನು ರೂಪಿಸಿದ್ದೇವೆ. ಹಿಂಸಾಚಾರದಲ್ಲಿ ಪಾಲ್ಗೊಂಡ ಯಾರೊಬ್ಬರನ್ನೂ ನರೇಂದ್ರ ಮೋದಿ ಸರಕಾರ ಸುಮ್ಮನೆ ಬಿಡುವುದಿಲ್ಲ.

 ನಾವು ಪಿತೂರಿ ಪ್ರಕರಣವನ್ನು ಕೂಡ ದಾಖಲಿಸಿದ್ದೇವೆ. ಯಾಕೆಂದರೆ ಇಂತಹ ಗಲಭೆಗಳು ಪಿತೂರಿಯ ಹೊರತು ನಡೆಯಲಾರದು ಎಂದು ಅವರು ಹೇಳಿದರು. ನಾವು ಅಮಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 49 ಪ್ರಕರಣಗಳನ್ನು ದಾಖಲಿಸಲಾಗಿದೆ. 153 ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಕೂಲಕಂಷ ತನಿಖೆ ಬಳಿಕವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅಮಿತ್ ಶಾ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X