ಹಕ್ಕುಗಳ ಬಗ್ಗೆ ಜಾಗೃತರಾಗಿ: ನ್ಯಾಯಾಧೀಶೆ ಶಿಲ್ಪಾ ಕರೆ

ಮಂಗಳೂರು, ಮಾ.11: ಮನೆಗೆ ಮಹಿಳೆ ಜೀವನಾಧಾರ. ಇಂದು ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹಿಳೆಯರು ಸಂಘಟಿತರಾಗಿ ತಮಗೆ ನೀಡಲಾದ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಎಂದು ದ.ಕ ಜಿಲ್ಲೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶಿಲ್ಪಾ ಎಜಿ ಕರೆ ನೀಡಿದರು.
ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು ಮಂಗಳೂರು ಮತ್ತು ಸಂತ ಆ್ಯನ್ಸ್ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.
ಎಸ್ಡಿಎಂ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಚಾರ್ಯ ಸುಬ್ಬಲಕ್ಷ್ಮಿ ‘ಮಹಿಳೆಯರಿಗೆ ಆಸ್ತಿಹಕ್ಕು ಮತ್ತಿತರ ಕಾಯ್ದೆ’ಗಳ ಬಗ್ಗೆ ಕಾನೂನಿನ ಅರಿವು ನೀಡಿದರು.
ಕಾಲೇಜಿನ ಪ್ರಾಚಾರ್ಯ ಭಗಿನಿ ಮರಿಯಾ ಶೋಭಾ ಅಧ್ಯಕ್ಷತೆ ವಹಿಸಿದ್ದರು.
Next Story





