ಮಂಗಳೂರು, ಮಾ.11: ಕಾಸರಗೋಡಿನಲ್ಲಿರುವ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಮಾ.12ರಂದು ಹಮ್ಮಿಕೊಂಡಿದ್ದ ‘ಅನುವಾದ-ಅನುಸಂಧಾನ: ತತ್ವ ಮತ್ತು ಪ್ರಯೋಗ’ ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣವನ್ನು ಕಾರಣಾಂತರಗಳಿಂದ ಮುಂದೂಡ ಲಾಗಿದೆ ಎಂದು ಮಂಗಳೂರು ವಿವಿ ಕನ್ನಡ ಅಧ್ಯಯನ ವಿಭಾಗದ ಪ್ರಕಟನೆ ತಿಳಿಸಿದೆ.