Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೀವು ಗೋವುಗಳನ್ನು ರಕ್ಷಿಸಲು ಏನು...

ನೀವು ಗೋವುಗಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತೀರಿ, ಜನರನ್ನಲ್ಲ: ಸರಕಾರಕ್ಕೆ ಸಿಬಲ್ ಚಾಟಿಯೇಟು

ವಾರ್ತಾಭಾರತಿವಾರ್ತಾಭಾರತಿ12 March 2020 5:21 PM IST
share
ನೀವು ಗೋವುಗಳನ್ನು ರಕ್ಷಿಸಲು ಏನು ಬೇಕಾದರೂ ಮಾಡುತ್ತೀರಿ, ಜನರನ್ನಲ್ಲ: ಸರಕಾರಕ್ಕೆ ಸಿಬಲ್ ಚಾಟಿಯೇಟು

ಹೊಸದಿಲ್ಲಿ: "ನೀವು ಗೋವುಗಳನ್ನು ರಕ್ಷಿಸಲು ಏನು ಬೇಕಾದರೂ ಮಾಡಬಲ್ಲಿರಿ ಆದರೆ ಮನುಷ್ಯರನ್ನಲ್ಲ'' ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕೇಂದ್ರ ಸರಕಾರವನ್ನು ಟೀಕಿಸಿದ್ದಾರೆ.

ಗುರುವಾರ ರಾಜ್ಯಸಭೆಯಲ್ಲಿ ದಿಲ್ಲಿ ಹಿಂಸಾಚಾರದ ಕುರಿತ ಚರ್ಚೆಯಲ್ಲಿ ಭಾಗವಹಿಸಿದ ಸಿಬಲ್,  ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಹಲವು ಬಿಜೆಪಿ ನಾಯಕರ ವಿರುದ್ಧ ಎಫ್‍ಐಆರ್ ದಾಖಲಿಸದೇ ಇರುವುದಕ್ಕೆ  ಆಕ್ರೋಶ ವ್ಯಕ್ತಪಡಿಸಿದರು.

"ಎಫ್‍ಐಆರ್ ದಾಖಲಿಸಲು ಇದು ಸೂಕ್ತ ಸಮಯವಲ್ಲ ಎಂದು ನಿಮ್ಮ ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ  ಹೇಳಿದ್ದಾರೆ. ಎಫ್‍ಐಆರ್ ದಾಖಲಿಸಲೂ ಸೂಕ್ತ ಸಮಯವಿದೆಯೇ ನನಗೆ ಕಾನೂನು ಕಲಿಸಿ'' ಎಂದು ಸಿಬಲ್ ವ್ಯಂಗ್ಯವಾಡಿದರು.

"ಕಾಶ್ಮೀರದಲ್ಲಿ ಬಂಧಿತರಾಗಿರುವ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ ಅವರನ್ನು ಬಿಡುಗಡೆಗೊಳಿಸಿದರೆ ಜಮ್ಮು ಕಾಶ್ಮೀರದಲ್ಲಿ ಹಿಂಸೆ ತಾಂಡವವಾಡಬಹುದು ಎಂದು ಹೇಳುವ ಸರಕಾರ  ಜನರನ್ನು ಪ್ರಚೋದಿಸಿದ ತನ್ನದೇ ಪಕ್ಷದ ಸದಸ್ಯರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ?'' ಎಂದು ಅವರು ಪ್ರಶ್ನಿಸಿದರು.

‘‘ಏನು ನಡೆಯಲಿದೆ ಎಂಬುದು ನಮಗೆ ಗೊತ್ತಿದೆ. ನೀವು ಅಮಾಯಕರನ್ನು ಶಿಕ್ಷಿಸುತ್ತೀರಿ. ತಪ್ಪೆಸಗಿದವರನ್ನು ರಕ್ಷಿಸುತ್ತೀರಿ. ಆರೋಪಿ ಯಾರೆಂದು ನಿಮಗೆ ಗೊತ್ತಿದ್ದರೂ ನೀವು ಎಫ್‌ಐಆರ್ ದಾಖಲಿಸಲಾರಿರಿ. ಅಂತಹದು ನಡೆಯಲು ಅವಕಾಶ ನೀಡಬೇಡಿ’’ ಎಂದು ಕಪಿಲ್ ಸಿಬಲ್ ಹೇಳಿದರು. ‘‘ನೀವು ಏನು ಹೇಳುತ್ತೀರಿ ಎಂದು ನಮಗೆ ಈಗಾಗಲೇ ಗೊತ್ತಿದೆ. ನೀವು ಇತಿಹಾಸಕ್ಕೆ ಮರುಳುತ್ತೀರಿ ಹಾಗೂ ಕಾಂಗ್ರೆಸ್ ಅದನ್ನು ಮಾಡಿತು, ಇದನ್ನು ಮಾಡಿತು ಎಂದು ಹೇಳುತ್ತೀರಿ. ಆದರೆ, ನೀವು ದಿಲ್ಲಿ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲಾರಿರಿ’’ ಎಂದು ಕಪಿಲ್ ಸಿಬಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X