Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಹಾರ ಮೂಲದ ಕಾರ್ಮಿಕನ ಕೊಲೆ ಪ್ರಕರಣ:...

ಬಿಹಾರ ಮೂಲದ ಕಾರ್ಮಿಕನ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ12 March 2020 9:53 PM IST
share
ಬಿಹಾರ ಮೂಲದ ಕಾರ್ಮಿಕನ ಕೊಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ನಾಲ್ವರಿಗೆ ಜೀವಾವಧಿ ಶಿಕ್ಷೆ

ಮಂಗಳೂರು, ಮಾ.12: ಬಿಹಾರ ಮೂಲದ ಕಟ್ಟಡ ಕಾರ್ಮಿಕ ಅಜಯ್ ಕುಮಾರ್ ಚೌಧರಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಉತ್ತರ ಪ್ರದೇಶ ರಾಜ್ಯದ ಗೋರಖ್‌ಪುರ ಜಿಲ್ಲೆಯ ಬಂಡಾರು ಗ್ರಾಮದ ಶಶಿಶೇಖರ್ ಯಾದವ್ (22), ಮಂಗಾರು ಯಾದವ್ (28), ರಿತೇಶ್ ಯಾದವ್ (23), ಜಿತೇಂದರ್ ಯಾದವ್ (21) ಶಿಕ್ಷೆಗೊಳಗಾದವರು.

ಪ್ರಕರಣದ ವಿವರ: ನಗರದ ಸುರತ್ಕಲ್ ನಲ್ಲಿರುವ ಎನ್‌ಐಟಿಕೆ ಕ್ಯಾಂಪಸ್‌ನ ಕಟ್ಟಡ ಕೆಲಸಕ್ಕೆ ಈ ನಾಲ್ವರು ಬಂದಿದ್ದರು. ಕಟ್ಟಡದ ಕಾಮಗಾರಿ ಯನ್ನು ಸುಖದೇವ್ ಕಂಪೆನಿಯು ವಹಿಸಿಕೊಂಡಿದ್ದು, ಇವರು ಬೇರೆ ಬೇರೆ ರಾಜ್ಯಗಳಿಂದ ಕಟ್ಟಡ ಕಾಮಗಾರಿಗೆ ಕಾರ್ಮಿಕರನ್ನು ಕರೆಸಿದ್ದರು. ಅವರಿಗೆ ಉಳಿದುಕೊಳ್ಳಲು ಸುರತ್ಕಲ್ ಸಮೀಪ ಶೆಡ್‌ಗಳನ್ನು ನಿರ್ಮಿಸಿದ್ದರು.

2018 ಮಾ.11ರಂದು ಸಂಜೆ 6:45ರ ಸುಮಾರಿಗೆ ಶಶಿಶೇಖರ್ ಯಾದವ್ ಶೆಡ್‌ನಲ್ಲಿನ ತನ್ನ ಕೋಣೆಯ ಮುಂಭಾಗ ನಿಂತು ‘ನನ್ನ ಮೊಬೈಲ್ ಫೋನನ್ನು ಒಡೆದವರು ಯಾರು?’ಎಂದು ಕಿರಿಚಾಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಉಳಿದ ಮೂವರೂ ಆರೋಪಿಗಳು ಸೇರಿ ಆತನೊಂದಿಗೆ ಮೊಬೈಲ್ ಫೋನ್ ಒಡೆದಿರುವ ಬಗ್ಗೆ ಚರ್ಚೆ ನಡೆಸುತ್ತಿದ್ದರು. ಈ ಮಧ್ಯೆ ಅದೇ ಕಂಪೆನಿಯಲ್ಲಿ ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿದ್ದ ಶೆಡ್ ವಾಸಿ ಬಿಹಾರ ರಾಜ್ಯದ ಕದಾರಿಯಾ ಜಿಲ್ಲೆಯ ಶಿಷ್ಟಾ ಗ್ರಾಮದ ನಿವಾಸಿ ಅಜಯ್ ಕುಮಾರ್ ಚೌಧುರಿ (21)ಕೊಲೆಯಾಗಿದ್ದರು.

ಅಜಯ್ ಕುಮಾರ್ ಚೌಧರಿ ಅಲ್ಲಿಗೆ ಬಂದು ಯಾಕೆ ಸುಮ್ಮನೆ ಈ ರೀತಿಯಲ್ಲಿ ಬೈಯ್ಯುತ್ತೀರಿ ಎಂದು ಪ್ರಶ್ನಿಸಿದ್ದ. ಆಗ ನಾಲ್ವರು ಆರೋಪಿಗಳು ಸೇರಿ ಈ ಶೆಡ್‌ನಲ್ಲಿ ಯಾವ ವಿಷಯಕ್ಕೂ ಮೂಗು ತೂರಿಸಿ ಮಾತನಾಡುತ್ತೀ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಶಶಿಶೇಖರ್ ಯಾದವ್ ಅಲ್ಲೇ ಇದ್ದ ಮರದ ಕೋಲಿನಿಂದ ತಲೆಗೆ, ದೇಹದ ಇತರ ಭಾಗಗಳಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾನೆ. ಆವಾಗ ಇತರ ಮೂವರೂ ಅಜಯ್ ಕುಮಾರ್ ಚೌಧರಿ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಆತ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ. ಈ ಘಟನೆಯನ್ನು ಪ್ರತ್ಯಕ್ಷ ಕಂಡ ಪುಳಕಿತ್ ಯಾದವ್ ಹಾಗೂ ಇತರರು ಸೇರಿ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲದೆ ಈ ಬಗ್ಗೆ ಪುಳಕಿತ್ ಯಾದವ್ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅಜಯ್ ಕುಮಾರ್ ಚೌಧರಿಯು ಚಿಕಿತ್ಸೆ ಫಲಕಾರಿಯಾಗದೆ ಮರುದಿನ ಮುಂಜಾನೆ 4:15ರ ವೇಳೆಗೆ ಮೃತಪಟ್ಟಿದ್ದರು.

ಪ್ರಕರಣದ ತನಿಖೆ ನಡೆಸಿದ ಇನ್‌ಸ್ಪೆಕ್ಟರ್ ರಾಮಕೃಷ್ಣ ಕೆ.ಜೆ. ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ 6ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ 21 ಮಂದಿ ಸಾಕ್ಷಿಗಳನ್ನು ವಿಚಾರಣೆ ನಡೆಸಿ, 36 ದಾಖಲೆಗಳನ್ನು ಪರಿಗಣಿಸಿ ಆರೋಪಿಗಳನ್ನು ದೋಷಿ ಎಂದು ಪರಿಗಣಿಸಿದೆ.

ಅದರಂತೆ ಅವಾಚ್ಯ ಶಬ್ದಗಳಿಂದ ನಿಂದನೆ (ಸೆಕ್ಷನ್ 504) ಮಾಡಿರುವುದಕ್ಕೆ 3 ತಿಂಗಳು ಶಿಕ್ಷೆ ಮತ್ತು 500 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 15 ದಿನಗಳ ಸಾದಾ ಜೈಲು ಶಿಕ್ಷೆ, ಕೈಗಳಿಂದ ಹಲ್ಲೆ (ಸೆಕ್ಷನ್ 323) ಮಾಡಿರುವುದಕ್ಕೆ 1 ವರ್ಷ ಶಿಕ್ಷೆ ಮತ್ತು 1,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ವರ್ಷ ಸಾದಾ ಜೈಲು ಶಿಕ್ಷೆ, ದೊಣ್ಣೆಯಿಂದ ಹಲ್ಲೆ (ಸೆಕ್ಷನ್ 324) ಮಾಡಿರುವುದಕ್ಕೆ 1 ವರ್ಷ ಶಿಕ್ಷೆ ಮತ್ತು 5,000 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ತಿಂಗಳು ಸಾದಾ ಜೈಲು ಶಿಕ್ಷೆ, ಗಂಭೀರ ಸ್ವರೂಪದ ಹಲ್ಲೆ ನಡೆಸಿರುವುದಕ್ಕೆ (ಸೆಕ್ಷನ್ 326) 10 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 6ತಿಂಗಳು ಜೈಲು ಶಿಕ್ಷೆ, ಕೊಲೆ ಬೆದರಿಕೆ ಒಡ್ಡಿರುವುದಕ್ಕೆ (ಸೆಕ್ಷನ್ 506) 3 ತಿಂಗಳು ಜೈಲು ಶಿಕ್ಷೆ ಮತ್ತು 500 ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 15 ದಿನಗಳು ಸಾದಾ ಜೈಲು ಶಿಕ್ಷೆ, ಕೊಲೆ ಮಾಡಿರುವುದಕ್ಕೆ (302) ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ ಮತ್ತೆ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶೆ ಸೈದುನ್ನೀಸಾ ತೀರ್ಪು ನೀಡಿದ್ದಾರೆ. ಸರಕಾರದ ಅಭಿಯೋಜಕ ಜಯರಾಂ ಶೆಟ್ಟಿ ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X