Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಎನ್ನ ಗರುಡಾ ಸೌಖ್ಯಮಾ...’: ವಿಧಾನ...

‘ಎನ್ನ ಗರುಡಾ ಸೌಖ್ಯಮಾ...’: ವಿಧಾನ ಪರಿಷತ್‌ನಲ್ಲಿ ಬಿಜೆಪಿ ಹಿರಿಯ ಸದಸ್ಯ ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ12 March 2020 11:18 PM IST
share
‘ಎನ್ನ ಗರುಡಾ ಸೌಖ್ಯಮಾ...’: ವಿಧಾನ ಪರಿಷತ್‌ನಲ್ಲಿ ಬಿಜೆಪಿ ಹಿರಿಯ ಸದಸ್ಯ ಹೇಳಿದ್ದೇನು ?

ಬೆಂಗಳೂರು, ಮಾ.12: ಇತ್ತೀಚಿನ ದಿನಗಳಲ್ಲಿ ಮಂತ್ರಿ, ಶಾಸಕರ ಸುತ್ತಲೂ ಇರುವ ಆಪ್ತ ಸಹಾಯಕರು ತಾವೇ ಪ್ರಮುಖರು ಎಂದು ಬಿಂಬಿಸಿಕೊಳ್ಳುತ್ತಾರೆ. ಇದಕ್ಕೆ ಹೊಂದಿಕೊಳ್ಳುವಂತೆ ತಮಿಳಿನಲ್ಲಿ ‘ಎನ್ನ ಗರುಡಾ ಸೌಖ್ಯಮಾ’ ಎನ್ನುವ ತಮಿಳು ಜೋಕ್ ಇದೆ ಎಂದು ಹೇಳಿ ಬಿಜೆಪಿ ಹಿರಿಯ ಸದಸ್ಯ ಆಯನೂರು ಮಂಜುನಾಥ ಸದನದ ಗಮನ ಸೆಳೆದರು.

ಗುರುವಾರ ವಿಧಾನ ಪರಿಷತ್‌ನಲ್ಲಿ ಮಧ್ಯಾಹ್ನ ಭೋಜನ ನಂತರ ಆರಂಭವಾದ ಭಾರತ ಸಂವಿಧಾನದ ಮೇಲಿನ ವಿಶೇಷ ಚರ್ಚೆಯಲ್ಲಿ ಮಾತನಾಡಿದ ಅವರು, ವಿಷ್ಣುವಿನ ವಾಹನ ಗರುಡಾ ಶಿವನನ್ನು ನೋಡಲು ಹೋಗುವ ಸಂದರ್ಭದಲ್ಲಿ ಅಲ್ಲಿನ ಮಂಡಲವೆಲ್ಲ ಅಲ್ಲೋಲ ಕಲ್ಲೋಲವಾಗುತ್ತದೆ. ಆಗ ಶಿವ ಕೊರಳಲ್ಲಿದ್ದ ಹಾವು ಗರುಡ ಬರುವ ರಭಸಕ್ಕೆ ಅವಿತುಕೊಳ್ಳುತ್ತದೆ. ಶಾಂತ ಸ್ವರೂಪದತ್ತ ಮಂಡಲ ಇದ್ದಾಗ ಹಾವು ಮೆಲ್ಲಗೆ ಗರುಡನ ಮುಂದೆ ಬಂದಾಗ ‘ಎನ್ನ ಗರುಡಾ ಸೌಖ್ಯಮಾ’ ಎಂದು ಕೇಳುತ್ತದೆ. ಅಂದರೆ ಶಿವನು ಇದ್ದಾಗ ಹಾವಿಗೆ ಪೌರುಷ. ಹಾಗೆಯೇ ಜನಪ್ರತಿನಿಧಿಗಳ ಹೆಸರು ಹೇಳಿಕೊಂಡು ಕೆಲ ವ್ಯಕ್ತಿಗಳು ತಮ್ಮ ಕೆಲಸ ಪೂರೈಸಿಕೊಳ್ಳುತ್ತಾರೆ ಎಂದು ಅವರು ತಮಿಳು ಭಾಷೆಯಲ್ಲಿಯೇ ಉಲ್ಲೇಖಿಸಿದರು.

ಅಲ್ಲದೆ, ಜನಪ್ರತಿನಿಧಿಗಳು ನಮ್ಮ ಪಕ್ಕದಲ್ಲಿರುವ ಚೇಲಾಗಳ ಬಗ್ಗೆ ಎಚ್ಚರಿಕೆ ಇರಬೇಕು. ಆಪ್ತ ಸಹಾಯಕರು ನಮ್ಮ ಹೆಸರು ಹೇಳಿಕೊಂಡು ಅಧಿಕಾರಿಗಳ ಮೇಲೆ ದರ್ಪ ತೋರುತ್ತಾರೆ ಎಂಬುದನ್ನು ತಿಳಿಯಬೇಕು ಎಂದು ಆಯನೂರು ನುಡಿದರು.

ಜಾತಿಗೊಂದು ನಗರ: ಹಣವಿದ್ದವರು ಗಾಂಧಿನಗರದಲ್ಲಿ, ಕೆಳವರ್ಗ ಅಥವಾ ಬಡವರು ಬಾಪೂಜಿ ನಗರದಲ್ಲಿ ಎಂಬುದಾಗಿ ವಿಂಗಡಿಸಿರುವುದು ಬೇಸರದ ಸಂಗತಿ. ಸಮಾಜದಲ್ಲಿ ಮಾತ್ರವಲ್ಲದೆ ರಾಜಕೀಯದಲ್ಲೂ ತಾರತಮ್ಯವಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಅವರು ಅಲ್ಪಜ್ಞಾನಿಗಳಿಗೆ ದಲಿತ ನಾಯಕರೆನಿಸಬಹುದು. ಅವರು ದಲಿತ ನಾಯಕ ಅಲ್ಲ. ಇಡೀ ಸರ್ವ ಧರ್ಮಗಳ ಸಮನ್ವಯ ಸಾರಿದ ವ್ಯಕ್ತಿ. ಅವರಿಗಾದ ನೋವಿನ ದ್ವೇಷವನ್ನು ಸಂವಿಧಾನ ಹಂಚಲಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X