Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜೋರ್ಡನ್‌ನಿಂದ ವಾಪಸಾದ ಭಾರತದ ಬಾಕ್ಸರ್...

ಜೋರ್ಡನ್‌ನಿಂದ ವಾಪಸಾದ ಭಾರತದ ಬಾಕ್ಸರ್ ಗಳಿಗೆ ಮನೆಯಲ್ಲೇ ಇರಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ12 March 2020 11:30 PM IST
share

ಅಮ್ಮಾನ್(ಜೋರ್ಡನ್), ಮಾ.12: ಏಶ್ಯನ್ ಕ್ವಾಲಿಫೈಯರ್ ಟೂರ್ನಿಯಲ್ಲಿ ಭಾಗವಹಿಸಲು ಜೋರ್ಡನ್‌ಗೆ ತೆರಳಿದ್ದ ಭಾರತೀಯ ಬಾಕ್ಸಿಂಗ್ ತಂಡ ಸ್ವದೇಶಕ್ಕೆ ವಾಪಸಾಗಿದ್ದು, ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲ ಬಾಕ್ಸರ್‌ಗಳಿಗೆ ತಮ್ಮ ಮನೆಯಲ್ಲಿ ಉಳಿದುಕೊಳ್ಳಲು ಸೂಚಿಸಲಾಗಿದೆ ಎಂದು ರಾಷ್ಟ್ರೀಯ ಬಾಕ್ಸಿಂಗ್ ಒಕ್ಕೂಟ ಗುರುವಾರ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

 ಬುಧವಾರ ಅಮ್ಮಾನ್‌ನಲ್ಲಿ ಕೊನೆಗೊಂಡಿರುವ ಏಶ್ಯನ್ ಕ್ವಾಲಿಫೈಯರ್‌ನಲ್ಲಿ ಪಾಲ್ಗೊಂಡಿದ್ದ ಒಟ್ಟು 13 ಬಾಕ್ಸರ್‌ಗಳು ಹಾಗೂ ಅಷ್ಟೇ ಸಂಖ್ಯೆಯ ಕೋಚಿಂಗ್ ಸಿಬ್ಬಂದಿ ಗುರುವಾರ ಭಾರತಕ್ಕೆ ವಾಪಸಾದರು. ಜೋರ್ಡನ್‌ನಲ್ಲಿ ಎಲ್ಲ ಬಾಕ್ಸರ್‌ಗಳು, ಕೋಚಿಂಗ್ ಸಿಬ್ಬಂದಿಗಳ ಆರೋಗ್ಯ ಸಂಬಂಧಿಸಿದ ವಿಚಾರದಲ್ಲಿ ಅಗತ್ಯವಿರುವ ಅನುಮತಿ ಪಡೆದಿದ್ದರೂ ಅವರಿಗೆ ಮನೆಗೆ ತೆರಳುವಂತೆ ಸೂಚಿಸಲಾಗಿದೆ. ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ 9 ಬಾಕ್ಸರ್‌ಗಳು ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡು ಅಭೂತಪೂರ್ವ ಪ್ರದರ್ಶನ ನೀಡಿದ್ದಾರೆ.

‘‘ಜೋರ್ಡನ್‌ಗೆ ಹೋಗಿಬಂದಿರುವ ಬಾಕ್ಸರ್‌ಗಳಿಗೆ ಕೆಲವು ದಿನಗಳ ಕಾಲ ಮನೆಗಳಲ್ಲಿ ಅಥವಾ ಹಾಸ್ಟೆಲ್‌ಗಳಲ್ಲಿ ನೆಲೆಸುವಂತೆ ತಿಳಿಸಲಾಗಿದೆ. ಜೋರ್ಡನ್ ಒಲಿಂಪಿಕ್ಸ್ ಸಂಸ್ಥೆ ಎಲ್ಲರಿಗೂ ಆರೋಗ್ಯಕ್ಕೆ ಸಂಬಂಧಿಸಿದ ಅನುಮತಿ ನೀಡಿದೆ’’ ಎಂದು ಭಾರತದ ಬಾಕ್ಸಿಂಗ್ ಒಕ್ಕೂಟದ ಕಾರ್ಯಕಾರಿ ನಿರ್ದೇಶಕ ಆರ್.ಕೆ. ಸಚೇಟಿ ತಿಳಿಸಿದ್ದಾರೆ.

ಭಾರತದ ಬಾಕ್ಸರ್‌ಗಳು ಅಸ್ಸಿಸಿಯಿಂದ ಅಮ್ಮಾನ್‌ಗೆ ಫೆಬ್ರವರಿ 27ರಂದು ತೆರಳಿದ್ದರು. ಕೊರೋನ ವೈರಸ್ ಲಕ್ಷಣ ಪತ್ತೆ ಮಾಡುವ ಕಡ್ಡಾಯ ಪರೀಕ್ಷೆಯಲ್ಲಿ ಭಾರತದ ಎಲ್ಲ ಬಾಕ್ಸರ್‌ಗಳು ಪಾಸಾಗಿದ್ದರು. ಜೋರ್ಡನ್‌ನಲ್ಲಿ ಈ ತನಕ ಕೇವಲ ಒಂದು ಕೊರೋನ ವೈರಸ್ ಸೋಂಕು ಪತ್ತೆ ಪ್ರಕರಣ ವರದಿಯಾಗಿದೆ.

‘‘ನಮ್ಮ ಎಲ್ಲ ಬಾಕ್ಸರ್‌ಗಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆ. ಜೊತೆಗೆ ಸರಕಾರಿ ಮಾರ್ಗಸೂಚಿಗಳನ್ನು ನಾವು ಪಾಲಿಸುತ್ತಿದ್ದೇವೆ. ಎಲ್ಲ ಬಾಕ್ಸರ್‌ಗಳಿಗೆ ಕೆಲವು ಸಮಯ ಮನೆಯಲ್ಲೇ ಇರಲು ಸೂಚಿಸಲಾಗಿದೆ. ಕಳವಳಪಡುವ ಅಗತ್ಯವಿಲ್ಲ. ಎಲ್ಲರೂ ಆರೋಗ್ಯವಂತರಾಗಿದ್ದಾರೆ. ಅವರಿಗೆ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಲಾಗಿದೆ. ಹೆಚ್ಚಿನ ಸೂಚನೆಗಳಿಗಾಗಿ ನಾವು ಆರೋಗ್ಯ ಸಚಿವಾಲಯದ ಸಂಪರ್ಕದಲ್ಲಿದ್ದೇವೆ’’ ಎಂದು ಸಚೇಟಿ ತಿಳಿಸಿದ್ದಾರೆ.

ಜೋರ್ಡನ್‌ನ ರಾಜಧಾನಿಯಲ್ಲಿ ನಡೆದ ಒಲಿಂಪಿಕ್ಸ್ ಕ್ವಾಲಿಫೈಯರ್‌ನಲ್ಲಿ ಎಂ.ಸಿ. ಮೇರಿಕೋಮ್(51ಕೆಜಿ), ಸಿಮ್ರಾನ್‌ಜಿತ್ ಕೌರ್(60ಕೆಜಿ), ಲವ್ಲೀನಾ ಬೊರ್ಗೊಹೈನ್(69ಕೆಜಿ), ಪೂಜಾ ರಾಣಿ(75ಕೆಜಿ), ಅಮಿತ್ ಪಾಂಘಾಲ್(52ಕೆಜಿ), ಮನೀಷ್ ಕೌಶಿಕ್(63ಕೆಜಿ), ವಿಕಾಸ್ ಕ್ರಿಶನ್(69ಕೆಜಿ), ಆಶೀಷ್ ಕುಮಾರ್(75ಕೆಜಿ) ಹಾಗೂ ಸತೀಶ್ ಕುಮಾರ್(+91ಕೆಜಿ)ಒಲಿಂಪಿಕ್ಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X