Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಹುತೇಕ ಎಲ್ಲ ಸರಕಾರಿ ಅಧಿಕಾರಿಗಳೂ...

ಬಹುತೇಕ ಎಲ್ಲ ಸರಕಾರಿ ಅಧಿಕಾರಿಗಳೂ ಭ್ರಷ್ಟರು: ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ13 March 2020 6:10 PM IST
share
ಬಹುತೇಕ ಎಲ್ಲ ಸರಕಾರಿ ಅಧಿಕಾರಿಗಳೂ ಭ್ರಷ್ಟರು: ಬಸವರಾಜ ಹೊರಟ್ಟಿ

ಬೆಂಗಳೂರು, ಮಾ.13: ರಾಜ್ಯದಾದ್ಯಂತ ಕೆಲವು ಪ್ರಾಮಾಣಿಕ ಅಧಿಕಾರಿಗಳು ಬಿಟ್ಟರೆ, ಬಹುತೇಕ ಎಲ್ಲರೂ ಭ್ರಷ್ಟರಾಗಿದ್ದಾರೆ ಎಂದು ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಆರೋಪಿಸಿದ್ದಾರೆ.

ಶುಕ್ರವಾರ ವಿಧಾನಪರಿಷತ್‌ನಲ್ಲಿ ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕಾರ್ಯಾಂಗದಲ್ಲಿನ ಅಧಿಕಾರಿಗಳಲ್ಲಿ ಕೆಲವರು ಬಿಟ್ಟರೆ, ಎಲ್ಲರೂ ಭ್ರಷ್ಟರು. ತಹಶೀಲ್ದಾರ್ ಕಚೇರಿಯಿಂದ ಎಂ.ಎಸ್.ಬಿಲ್ಡಿಂಗ್‌ವರೆಗೂ ಕನೆಕ್ಷನ್ ಇದೆ ಎಂದು ದೂರಿದರು.

ಕಾರ್ಯಾಂಗ ಅಷ್ಟೇ ಅಲ್ಲದೆ, ನ್ಯಾಯಾಂಗದಲ್ಲಿಯೂ ಈ ಭ್ರಷ್ಟಾಚಾರವಿದೆ ಎಂದ ಅವರು, ನ್ಯಾಯಾಲಯಗಳ ಒಳಗೆ ನಮಗೆ ಇಂತಹ ನ್ಯಾಯಾಧೀಶರೇ ಬೇಕು, ವಕೀಲರೇ ಬೇಕು ಎನ್ನುವ ಜನರೂ ಇದ್ದಾರೆ. ಜನಪ್ರತಿನಿಧಿಗಳು ಸರಿಯಾಗಿ ಇರದಿದ್ದಲ್ಲಿ ಪ್ರಜಾಪ್ರಭುತ್ವದ ಮೂರು ಅಂಗಗಳು ಬಲಿಷ್ಠವಾಗುವುದಿಲ್ಲ ಎಂದರು.

ಭಾರತ ಜಾತಿಗಳ ದೇಶವಾಗಿದೆ: ಭಾರತವನ್ನು ಸಂವಿಧಾನದ ಅಡಿಯಲ್ಲಿ ಜಾತ್ಯತೀತ ದೇಶ ಎಂದು ಗುರುತಿಸಲಾಗುತ್ತದೆ. ಆದರೆ, ಈ ದೇಶದೊಳಗೆ ಜಾತಿಗಳದೇ ಕಾರುಬಾರು ನಡೆಯುತ್ತಿದೆ. ಇಂತಹ ಜಾತಿಯವರಿಗೆ ಟಿಕೆಟ್ ನೀಡಬೇಕು, ಮಂತ್ರಿ ಮಾಡಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ಧಗಂಗಾ ಮಠದ ಸ್ವಾಮೀಜಿ ಸೇರಿ ಕೆಲವೊಂದು ಸ್ವಾಮೀಜಿಗಳು ಬಿಟ್ಟರೆ ಯಾರೂ ಸರಿಯಿಲ್ಲ. ನಮ್ಮಲ್ಲಿ ಜಾತಿಗೊಂದು ಮಠ ನಿರ್ಮಾಣವಾಗಿದೆ. ಎಲ್ಲ ಜಾತಿಗಳ ಸರಕಾರಿ ಸಹಕಾರ ಸಂಘಗಳಿವೆ ಎಂದ ಅವರು, ಈ ವ್ಯವಸ್ಥೆಯು ಒಂದು ಕ್ಯಾನ್ಸರ್ ಇದ್ದಂತೆ. ಈ ವ್ಯವಸ್ಥೆಯನ್ನು ಜನರಾದರೂ ಎಷ್ಟು ದಿನ ಸಹಿಸುತ್ತಾರೆ. ಒಂದಲ್ಲಾ ಒಂದು ದಿನ ದಂಗೆ ಏಳುತ್ತಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X