Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಾಖಲೀಕರಣಗೊಂಡ ಮರಾಟಿ ಜನಾಂಗದ ಹೋಳಿ...

ದಾಖಲೀಕರಣಗೊಂಡ ಮರಾಟಿ ಜನಾಂಗದ ಹೋಳಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ14 March 2020 8:54 PM IST
share
ದಾಖಲೀಕರಣಗೊಂಡ ಮರಾಟಿ ಜನಾಂಗದ ಹೋಳಿ ಆಚರಣೆ

ಉಡುಪಿ, ಮಾ.14: ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಹಲವು ಕಡೆಗಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಮರಾಟಿ (ನಾಯ್ಕ) ಜನಾಂಗ ತಲೆತಲಾಂತರದಿಂದ ಆಚರಿಸಿಕೊಂಡು ಬರುತ್ತಿರುವ ಸಾಂಪ್ರದಾಯಿಕ ಹೋಳಿ ಆಚರಣೆಯ ದಾಖಲೀಕರಣ ಇತ್ತೀಚೆಗೆ ಉಡುಪಿ ಎಂಜಿಎಂ ಕಾಲೇಜು ಆವರಣದಲ್ಲಿರುವ ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯ ಕೇಂದ್ರದ ವತಿಯಿಂದ ನಡೆಯಿತು.

 ಹೋಳಿ ಹುಣ್ಣಿಮೆಯ ಮೊದಲ ಏಕಾದಶಿಯಂದು ಆರಂಭಗೊಳ್ಳುವ ಈ ವಿಶಿಷ್ಟ ರಂಗುರಂಗಿನ ಹೋಳಿ ಹಬ್ಬ, ಹಲವು ಕಡೆ ಹುಣ್ಣಿಮೆಗೆ ಕೊನೆಯಾದರೆ, ಕೆಲಭಾಗಗಳಲ್ಲಿ ಹುಣ್ಣಿಮೆಯ ಪಾಡ್ಯಕ್ಕೆ ಹೋಳಿಹಬ್ಬ ಕೊನೆಗೊಳ್ಳುವುದು. ಮೂಲ ಸಂಪ್ರದಾಯ ಕಣ್ಮರೆಯಾಗುತ್ತಿರುವ, ನೆನಪಿನಿಂದ ಮಾಸುತ್ತಿರುವ ಅಥವಾ ಬದಲಾವಣೆ ಹೊಂದುತ್ತಿರುವ ಜನಪದ ಕಲೆಯಾದ ಹೋಳಿ ಹಬ್ಬವನ್ನು ಇಲ್ಲೊಂದು ಊರಿನಲ್ಲಿ ವಿಶಿಷ್ಠ ಹಾಗೂ ಸಾಂಪ್ರದಾಯಿಕವಾಗಿ ಆಚರಿಸುತ್ತಾರೆ.

ಕುಂದಾಪುರ ತಾಲೂಕಿನ ಅಂಪಾರು, ಮೂಡುಬಗೆ ಕೆರೆಮನೆ ಗುರಿಕಾರ ರಾದ ಶಿವರಾಮ ನಾಯ್ಕಾ ಇವರ ನೇತೃತ್ವದಲ್ಲಿ ಹತ್ತು ಸಮಸ್ತರ ಕಟ್ಟೆಯಲ್ಲಿ ಅರ್ಚಕ, ಪಾತ್ರಿ ಶಂಕರ ನಾಯ್ಕಿ ಹಾಗೂ ಆನಂದ ನಾಯ್ಕಿ ಇವರ ಸಂದರ್ಶನ ನಡೆಸಲಾಯಿತು.

ಹೋಳಿ ಹಬ್ಬದ ಆಚರಣೆ, ಅದರ ವೈಶಿಷ್ಟ್ಯತೆ, ಆಚಾರ-ವಿಚಾರ, ಗುಮಟೆ ಹಾಡು, ಕೋಲಾಟದ ಹಾಡುಗಳನ್ನು ದಾಖಲಿಸಿಕೊಳ್ಳಲಾಯಿತು. ಇದೇ ಸಮಯದಲ್ಲಿ ಗಿರಿಜಾ ನಾಯ್ಕಿ ಅವರು ಹಾಡಿದ ಸಂಪ್ರದಾಯದ ಮದುವೆ ಹಾಡನ್ನು ಸಹ ಮಾಹೆ ಆಡಳಿತಕ್ಕೊಳಪಟ್ಟ ಆರ್‌ಆರ್‌ಸಿ ದಾಖಲೀಕರಣ ನಡೆಸಿತು.

ಪ್ರೇಮಾ, ಸುರೇಂದ್ರ ನಾಯ್ಕೊ, ಕೃಷ್ಣ ನಾಯ್ಕೊ, ಶ್ರೀಮತಿ, ನಾರಾಯಣ ನಾಯ್ಕೊ ಹಾಗೂ ಇವರ ಮಕ್ಕಳು ಹಾಗೂ ಸಮುದಾಯದ ಹತ್ತು ಸಮಸ್ತರು ದಾಖಲೀಕರಣಕ್ಕೆ ಸಹಕಾರ ನೀಡಿದರು.

ಅಧ್ಯಯನ ಕೇಂದ್ರದ ಸಂಯೋಜನಾಧಿಕಾರಿ ಪ್ರೊ. ವರದೇಶ ಹಿರೇಗಂಗೆ ಅವರ ಮಾರ್ಗದರ್ಶನದಲ್ಲಿ ಲಚ್ಚೇಂದ್ರ ಇವರು ಭಾರತಿಯವರ ಸಹಕಾ ದೊಂದಿಗೆ ದಾಖಲೀಕರಣ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X