ಅಡಿಕೆ ಮರದಿಂದ ಬಿದ್ದು ಮೃತ್ಯು
ಕಾರ್ಕಳ, ಮಾ.14: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಾ.14ರಂದು ಬೆಳಗ್ಗೆ 9.30ರ ಸುಮಾರಿಗೆ ಮುಂಡ್ಕೂರು ಗ್ರಾಮದ ಸಂಕಲಕರಿಯ ಎಂಬಲ್ಲಿ ನಡೆದಿದೆ.
ಮೃತರನ್ನು ವಾಸು ಶೆಟ್ಟಿ(62) ಎಂದು ಗುರುತಿಸಲಾಗಿದೆ. ಇವರು ಮನೆಯ ತೋಟದ ಅಡಿಕೆ ಮರದಿಂದ ಅಡಿಕೆ ಗೊನೆ ತೆಗೆಯುತ್ತಿರುವಾಗ ಮರ ತುಂಡಾಗಿ ಅಡಿಕೆ ಮರದೊಂದಿಗೆ ವಾಸು ಶೆಟ್ಟಿ ಕೆಳಗೆ ಬಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಇವರು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





