Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮಾಸ್ಕ್...

ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮಾಸ್ಕ್ ವಿತರಿಸಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊರೋನ ವೈರಸ್ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ14 March 2020 10:00 PM IST
share
ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮಾಸ್ಕ್ ವಿತರಿಸಲು ಕ್ರಮ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಮಾ.14: ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಮಾ.17ರಿಂದ ಮಾಸ್ಕ್ (ಮುಖಗವಸು) ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೊರೋನ ವೈರಸ್ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ವಾರ ಶಂಕಿತ ಜ್ವರದಿಂದ ಒಬ್ಬರು ದಾಖಲಾಗಿದ್ದರು. ಆದರೆ ಅಲ್ಲಿ ಅಗತ್ಯವಿರುವಷ್ಟು ಮಾಸ್ಕ್ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಿಯೂ ಕೂಡ ಮಾಸ್ಕ್ ಕೊರತೆ ತಲೆದೋರದಂತೆ ನೊಡಿಕೊಳ್ಳಬೇಕು ಎಂದು ಸಚಿವ ಕೋಟ ಜಿಲ್ಲಾ ಆರೋಗ್ಯಾ ಧಿಕಾರಿಗೆ ನಿರ್ದೇಶನ ನೀಡಿದರು.

ಅನಗತ್ಯ ಮಾಸ್ಕ್ ಬೇಡ: ರೋಗಪೀಡಿತರು ಹಾಗೂ ಅವರ ಕುಟುಂಬ ಮತ್ತು ವೈದ್ಯಕೀಯ ವಿಭಾಗದವರು ಮಾತ್ರ ಮಾಸ್ಕ್ ಧರಿಸಿದರೆ ಸಾಕು. ವೈದ್ಯಕೀಯ ವಿಭಾಗದವರು ಮಾತ್ರ ಸರ್ಜಿಕಲ್ ಮಾಸ್ಕ್ ಧರಿಸುತ್ತಾರೆ. ಉಳಿದವರು ಸಾಮಾನ್ಯ ಮಾಸ್ಕ್ ಧರಿಸುತ್ತಾರೆ. ಆದರೆ ಕೊರೋನ ಸೋಂಕಿನ ಭೀತಿಯಲ್ಲಿ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಸುಮಾರು 50 ಸಾವಿರ ಮಾಸ್ಕ್‌ಗಳ ಅಗತ್ಯವಿದ್ದು, 2 ಸಾವಿರ ಮಾಸ್ಕ್‌ ಗಳನ್ನು ಪೂರೈಸಲಾಗಿದೆ. ಉಳಿದ ಮಾಸ್ಕ್‌ಗಳನ್ನು ಮುಂದಿನ ವಾರದಲ್ಲಿ ಪೂರೈಸಲಾಗುವುದು. ಮೆಡಿಕಲ್ ಶಾಪ್‌ಗಳಲ್ಲಿ ಮಾಸ್ಕ್ ದರ ದುಬಾರಿ ಯಾಗದಂತೆ ಹಾಗೂ ಕೃತಕ ಅಭಾವ ಸೃಷ್ಟಿಸದಂತೆ ನೋಡಿಕೊಳ್ಳಲಾಗುವುದು. ನಿಗದಿತ ದರದಲ್ಲೇ ಮಾಸ್ಕ್ ವಿತರಣೆಗೆ ಸೂಚನೆ ನೀಡಲಾಗುವುದು ಎಂದು ಮಹಾನಗರ ಪಾಲಿಕೆ ಜಂಟಿ ಆಯುಕ್ತೆ ಗಾಯತ್ರಿ ನಾಯಕ್ ಸಭೆಗೆ ಮಾಹಿತಿ ನೀಡಿದರು.

ಮಾಲ್ ಬಂದ್‌ಗೆ ಕ್ರಮ: ಮಾಲ್, ಸಿನಿಮಾ ಥಿಯೇಟರ್‌ಗಳ ವಹಿವಾಟು ಬಂದ್‌ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಬೀದಿ ಬದಿ ವ್ಯಾಪಾರಕ್ಕೂ ಅವಕಾಶ ಕಲ್ಪಿಸಿಲ್ಲ. ಬೀದಿಬದಿಯ ಎಲ್ಲಾ ಶೆಡ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರದಂತೆ ತಿಳುವಳಿಕೆ ನೀಡಲಾಗುತ್ತಿದೆ. ಆರೋಗ್ಯ ಸಿಬ್ಬಂದಿ ಹಾಗೂ ಲ್ಯಾಬ್ ಟೆಕ್ನಿಶಿಯನ್‌ಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ಗಾಯತ್ರಿ ನಾಯಕ್ ಹೇಳಿದರು.

ಸೋಂಕು ಇಲ್ಲದಿದ್ದರೂ ನಿಗಾ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಆಗಮಿಸುವವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಶುಕ್ರವಾರ ಆಸ್ಟ್ರೇಲಿಯಾ ಮತ್ತು ಇರಾನ್‌ನಿಂದ ಆಗಮಿಸಿದ ಇಬ್ಬರನ್ನು ಎರಡು ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಿ ತಪಾಸಣೆಗೆ ಗುರಿ ಪಡಿಸಲಾ ಗಿದೆ. ಈ ಬಗ್ಗೆ ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯಾಧಿಕಾರಿ ಮಾಹಿತಿ ನೀಡಿದರು.

ವಿಮಾನದಲ್ಲಿ ವಿದೇಶದಿಂದ ಆಗಮಿಸುವವರಿಗೆ ಅನಾರೋಗ್ಯ ಇಲ್ಲದಿದ್ದರೂ ಅವರ ಮೇಲೆ ನಿಗಾ ಇರಿಸಲಾಗುತ್ತಿದೆ. ಸುಮಾರು 14 ದಿನಗಳ ಕಾಲ ಮನೆಯಿಂದ ಹೊರಗೆ ಹೋಗದಂತೆ ಹಾಗೂ ಮನೆ ಮಂದಿ ಜೊತೆಗೆ ಮುಕ್ತವಾಗಿ ಬೆರೆಯದಂತೆ ಸೂಚಿಸಲಾಗಿದೆ. ಅಲ್ಲದೆ ಶಂಕಿತ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರೆ, ಅಂತಹವರ ತಪಾಸಣೆ ವರದಿ ಬಂದ ಬಳಿಕ ನೆಗೆಟಿವ್ ಬಂದರೂ ಅವರನ್ನು 14 ದಿನಗಳ ಕಾಲ ನಿಗಾದಲ್ಲಿರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶನದಂತೆ ಕೊರೋನ ಎದುರಿಸಲು ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗಾಯತ್ರಿ ನಾಯಕ್ ಸ್ಪಷ್ಟಪಡಿಸಿದರು.

ಎಲ್ಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್: ನಗರದ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಕೊರೊನ ಸೋಂಕು ಪೀಡಿತರಿಗಾಗಿಯೇ 10 ಹಾಸಿಗೆಗಳ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಇವುಗಳಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಾರ್ಡ್ ಇರುತ್ತದೆ. ಈವರೆಗೆ 10 ಶಂಕಿತ ಪ್ರಕರಣ ಗಳು ಪತ್ತೆಯಾಗಿದೆ ಎಂದು ವೈದ್ಯಾಧಿಕಾರಿ ಡಾ.ರಾಜೇಶ್ವರಿದೇವಿ ಹೇಳಿದರು.

ವೆನ್ಲಾಕ್ ಆಸ್ಪತ್ರೆ ಹಾಗೂ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳಲ್ಲಿ ಹೆಲ್ಪ್‌ಡೆಸ್ಕ್ ತೆರೆಯಲಾಗಿದೆ. ಅಗತ್ಯ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗ್ರಾಪಂ ಮಟ್ಟದಲ್ಲಿ ಮನೆಗಳಿಗೆ ತೆರಳಿ ಕರಪತ್ರ, ಬ್ಯಾನರ್, ಪೋಸ್ಟರ್, ರೇಡಿಯೋ, ದೂರದರ್ಶನ ಮಾಧ್ಯಮ ಗಳ ಮೂಲಕ ಜಾಗೃತಿ ಮೂಡಿಸುವ ಕಾರ್ಯ ನಡೆಸಲಾಗುತ್ತಿದೆ ಎಂದರು.

ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಹೊರ ರಾಜ್ಯಗಳ ಪ್ರಯಾಣಿಕರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಇಲ್ಲಿಯೂ ಹೆಲ್ಫ್‌ಡೆಸ್ಕ್ ತೆರೆಯಲಾಗಿದೆ. ಸೋಂಕಿನ ಕುರಿತಂತೆ ನೆರೆಯ ಕೇರಳ ರಾಜ್ಯ ಜೊತೆ ನಿರಂತರ ಸಂಪರ್ಕವಿರಿಸಿಕೊಳ್ಳಲಾಗಿದೆ. ಇದುವರೆಗೆ ಯಾವುದೇ ಪ್ರಕರಣ ಕಂಡುಬಂದಿಲ್ಲ ಎಂದು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ತಿಳಿಸಿದರು.

ಧಾರ್ಮಿಕ ಕಾರ್ಯಕ್ರಮಗಳಿಗೆ ತಡೆಯಿಲ್ಲ

ಕರಾವಳಿಯಲ್ಲಿ ಸಾಂಪ್ರದಾಯಿಕವಾಗಿ ನಡೆಯುವ ಜಾತ್ರೆ, ನೇಮೋತ್ಸವ, ಯಕ್ಷಗಾನ ಪ್ರದರ್ಶನ ಸಹಿತ ಧಾರ್ಮಿಕ ಕಾರ್ಯಕ್ರಮಗಳಿಗೆ ತಡೆ ನೀಡುವ ಅಗತ್ಯವಿಲ್ಲ. ಇವು ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಅದಕ್ಕೆ ಚ್ಯುತಿ ಬಾರದಂತೆ ನೋಡಿಕೊಳ್ಳಬೇಕು. ಈ ಮಾನದಂಡವನ್ನು ಮಸೀದಿ ಹಾಗೂ ಚರ್ಚ್‌ಗಳ ಕಾರ್ಯಕ್ರಮಕ್ಕೂ ಅನ್ವಯಿಸಬೇಕು. ಇಲ್ಲೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಜನಸೇರದಂತೆ ನೋಡಿಕೊಳ್ಳಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳೂರಿಗೆ ವೈರಾಣು ಪರೀಕ್ಷಾ ಕೇಂದ್ರ ಬೇಡಿಕೆ

ವಿಮಾನ, ಬಂದರು, ರೈಲು ಹಾಗೂ ರಸ್ತೆ ಮಾರ್ಗ ಇರುವ ಮಂಗಳೂರಿನಲ್ಲಿ ಅವಶ್ಯಕವಾಗಿ ವೈರಾಣು ಪರೀಕ್ಷಾ ಕೇಂದ್ರ ಮಂಜೂರು ಮಾಡು ವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದನ್ನು ಜಿಲ್ಲಾ ಪ್ರಭಾರ ಆರೋಗ್ಯಾಧಿಕಾರಿ ಡಾ.ಅರುಣ್ ಸಭೆಯ ಗಮನ ಸೆಳೆದರು.

ಬೆಂಗಳೂರು, ಮೈಸೂರು, ಹಾಸನ, ಶಿವಮೊಗ್ಗಗಳಲ್ಲಿ ವೈರಾಣು ಪರೀಕ್ಷಾ ಕೇಂದ್ರಗಳಿವೆ. ಆದರೆ ಮಂಗಳೂರಿನಲ್ಲಿ ಈ ಕೇಂದ್ರದ ಅಗತ್ಯವಿದೆ. ಆದಷ್ಟು ಬೇಗ ಇಲ್ಲಿಗೆ ಈ ಕೇಂದ್ರವನ್ನು ಮಂಜೂರುಗೊಳಿಸಬೇಕು. ಮಂಗಳೂರಿನಲ್ಲಿ ಶಂಕಿತ ಕೊರೋನಾ ಪತ್ತೆಯಾದರೆ, ಸ್ಯಾಂಪಲ್‌ನ್ನು ಬೆಂಗಳೂರು ಬದಲು ಈಗ ಹಾಸನ ಕೇಂದ್ರಕ್ಕೆ ಕಳುಹಿಸಿಕೊಡಲಾಗುತ್ತಿದೆ ಎಂದು ಡಾ. ಅರುಣ್ ನುಡಿದರು.

27 ಸ್ಯಾಂಪಲ್ ರವಾನೆ

ಇದುವರೆಗೆ ವಿದೇಶದಿಂದ ವಿಮಾನದಲ್ಲಿ ಆಗಮಿಸಿದ ಸುಮಾರು 27 ಮಂದಿಯ ಗಂಟಲು ದ್ರಾವಣದ ಸ್ಯಾಂಪಲ್‌ನ್ನು ಹಾಸನದ ಪ್ರಯೋಗಾಲ ಯಕ್ಕೆ ಕಳುಹಿಸಲಾಗಿದೆ. ಈ ಪೈಕಿ 17 ಮಂದಿಯ ವರದಿ ನೆಗೆಟಿವ್ ಬಂದಿದೆ. ಉಳಿದ ಸ್ಯಾಂಪಲ್‌ಗಳ ವರದಿ ಬರಲು ಬಾಕಿ ಇದೆ. ಮಾರ್ಚ್‌ನಿಂದಲೇ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಆಗಮಿಸುವವರು ಅರ್ಜಿ ಫಾರಂನಲ್ಲಿ ಆರೋಗ್ಯದ ಬಗ್ಗೆ ಸ್ವಯಂ ಘೋಷಣೆ ಮಾಡ ಬೇಕಾಗುತ್ತದೆ. ಈವರೆಗೆ ಯಾವುದೇ ದೇಶೀಯ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿಲ್ಲ ಎಂದು ಡಾ.ನವೀನ್‌ಚಂದ್ರ ಸ್ಪಷ್ಟಪಡಿಸಿದರು.

ಹಡಗಿನ ಪ್ರಯಾಣಿಕರ ತಪಾಸಣೆ: ವಾರಕ್ಕೊಮ್ಮೆ ಸಂಚರಿಸುವ ಲಕ್ಷದ್ವೀಪ ಹಡಗಿನ ಪ್ರಯಾಣಿಕರನ್ನೂ ಆರೋಗ್ಯ ತಪಾಸಣೆಗೆ ಒಳಪಡಿಸಲಾ ಗಿದೆ. ಅಲ್ಲಿಯೂ ನೆಗೆಟಿವ್ ಪತ್ತೆಯಾಗಿಲ್ಲ ಮತ್ತು ಸ್ಕ್ರೀನಿಂಗ್ ಮುಂದುವರಿದಿದೆ ಎಂದರು.

ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯಕ್, ಐವನ್ ಡಿಸೋಜ, ಬಿಎಂ ಫಾರೂಕ್, ಮೇಯರ್ ದಿವಾಕರ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಸಿಂಧು ರೂಪೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ, ಜಿಪಂ ಸಿಇಒ ಡಾ.ಸೆಲ್ವಮಣಿ, ನಗರ ಪೊಲೀಸ್ ಕಮಿಷನರ್ ಡಾ.ಹರ್ಷ, ಜಿಲ್ಲಾ ಎಸ್ಪಿಲಕ್ಷ್ಮಿ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಕೊರೊನ ವೈರಸ್ ಹಿನ್ನಲೆ: ದ.ಕ.ಜಿಲ್ಲೆಯಲ್ಲಿ 836 ಮಂದಿಯ ತಪಾಸಣೆ

ಕೊರೊನ ವೈರಸ್ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಎನ್‌ಎಂಪಿಟಿಯಲ್ಲಿ ಶನಿವಾರ 836 ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ.

ತಪಾಸಣೆಯ ವೇಳೆ ಜ್ವರ, ಶೀತ, ಕೆಮ್ಮು, ತಲೆನೋವಿನಂತಹ ಲಕ್ಷಣ ಕಂಡು ಬಂದವರನ್ನು 14 ದಿನಗಳ ಕಾಲ ವಿಶೇಷ ನಿಗಾದಲ್ಲಿರಿಸಲಾಗು ತ್ತದೆ. ಈಗಾಗಲೇ 60 ಮಂದಿಯನ್ನು ಮನೆಯಲ್ಲೇ ವೈದ್ಯಕೀಯ ನಿಗಾದಲ್ಲಿರಿಸಲಾಗಿದೆ. ಆ ಪೈಕಿ 6 ಮಂದಿಯ ನಿಗಾ ಅವಧಿ ಮುಗಿದಿದ್ದು, ಯಾವುದೇ ಸೋಂಕಿನ ಲಕ್ಷಣ ಕಂಡು ಬಂದಿಲ್ಲ. ಪರೀಕ್ಷೆಗಾಗಿ 8 ಮಂದಿಯ ಗಂಟಲು ದ್ರವ ತಪಾಸಣೆಗೆ ಕಳುಹಿಸಲಾಗಿದೆ. ಆ ಪೈಕಿ ನಾಲ್ಕು ಮಂದಿಯ ವರದಿ ಸ್ವೀಕೃತವಾಗಿದ್ದು, ಕೋವಿಡ್-19 ಸೋಂಕು ಪತ್ತೆಯಾಗಿಲ್ಲ. ಉಳಿದ 4 ಮಂದಿಯ ಪರೀಕ್ಷೆಯ ವರದಿ ಬರಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X