Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಲಭೆ ಸಂತ್ರಸ್ತರ ವಿರುದ್ಧ ಕೇಂದ್ರ...

ಗಲಭೆ ಸಂತ್ರಸ್ತರ ವಿರುದ್ಧ ಕೇಂದ್ರ ಸರಕಾರ, ದಿಲ್ಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸಿ: ಪಾಪ್ಯುಲರ್ ಫ್ರಂಟ್

ವಾರ್ತಾಭಾರತಿವಾರ್ತಾಭಾರತಿ15 March 2020 12:23 PM IST
share
ಗಲಭೆ ಸಂತ್ರಸ್ತರ ವಿರುದ್ಧ ಕೇಂದ್ರ ಸರಕಾರ, ದಿಲ್ಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸಿ: ಪಾಪ್ಯುಲರ್ ಫ್ರಂಟ್

ಬೆಂಗಳೂರು : ಕೇಂದ್ರ ಸರಕಾರದ ಅಧೀನದಲ್ಲಿ ದಿಲ್ಲಿ ಪೊಲೀಸರು ಸಿಎಎ-ಎನ್‌ಪಿಆರ್-ಎನ್‌ಆರ್‌ಸಿ ವಿರೋಧಿ ಪ್ರತಿಭಟನೆಗಳು ಮತ್ತು ಗಲಭೆಗಳ ಮೊದಲು ಹಾಗೂ ನಂತರದ ಸಂತ್ರಸ್ತರ ಬೆಂಬಲಕ್ಕೆ ನಿಂತಿರುವ ಹೋರಾಟಗಾರರು ಮತ್ತು ಗುಂಪುಗಳ ವಿರುದ್ಧ ಕ್ರಮ ಕೈಗೊಳುತ್ತಿದ್ದಾರೆ. ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿತರಾಗುತ್ತಿರುವ ಪಟ್ಟಿಗೆ ಪೊಲೀಸರು ದಿನದಿಂದ ದಿನಕ್ಕೆ ಮುಸ್ಲಿಂ ಹೆಸರುಗಳು ಮತ್ತು ಹಿನ್ನೆಲೆಯ ವ್ಯಕ್ತಿಗಳ ಹೆಸರುಗಳನ್ನು ಸೇರಿಸುತ್ತಲೇ ಇದ್ದಾರೆ. ಈ ನಿಟ್ಟಿನಲ್ಲಿ ಗಲಭೆ ಸಂತ್ರಸ್ತರ ವಿರುದ್ಧ ಕೇಂದ್ರ ಸರಕಾರ ಮತ್ತು ದಿಲ್ಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಒತ್ತಾಯಿಸಿದೆ.

ಈಶಾನ್ಯ ದಿಲ್ಲಿಯಲ್ಲಿ ನಡೆದ ಹಿಂಸಾಚಾರಗಳಿಗೆ ಸಂಬಂಧಿಸಿದಂತೆ 2600 ಮಂದಿಯನ್ನು ಬಂಧಿಸಲಾಗಿದೆ, ಇವರಲ್ಲಿ ಬಹುತೇಕರು ಮುಸ್ಲಿಮರು. ಹಿಂಸಾಚಾರಗಳಲ್ಲಿ ಮೃತಪಟ್ಟ 53 ಜನರ ಸಂಪೂರ್ಣ ಮಾಹಿತಿಯೂ ಅಧಿಕೃತವಾಗಿ ಲಭ್ಯವಾಗಿದ್ದು ಮೃತರ ಪೈಕಿ ಬಹುತೇಕರು ಮುಸ್ಲಿಮರು.  ಗಲಭೆಗಳಲ್ಲಿ ಸುಮಾರು 25,000 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ನಾಶ ಮಾಡಲಾಗಿದೆ. ಕನಿಷ್ಟ 19 ಮಸೀದಿಗಳು ಮತ್ತು 4 ಮದ್ರಸಗಳನ್ನು ಧ್ವಂಸ ಅಥವಾ ಹಾನಿ ಮಾಡಲಾಗಿದೆ . ಶಿವ ವಿಹಾರ್‌ನಂತಹ ಪ್ರದೇಶಗಳಿಂದ ಓಡಿಸಲ್ಪಟ್ಟ ಮುಸ್ಲಿಮರಿಗೆ ಇನ್ನೂ ತಮ್ಮ ಹಾನಿಗೊಳಗಾದ ಮನೆಗಳಿಗೆ ವಾಪಸಾಗಲು ಅವಕಾಶ ನೀಡಲಾಗುತ್ತಿಲ್ಲ. ಕೇಂದ್ರ ಸರಕಾರದ ನಿಯಂತ್ರಣಕ್ಕೊಳಪಟ್ಟಿರುವ ದಿಲ್ಲಿ ಪೊಲೀಸರ ನಿಷ್ಕ್ರೀಯತೆಯಿಂದ ಮಾತ್ರವಲ್ಲ, ಜೊತೆಗೆ ಹಲವು ವೀಡಿಯೊ ದೃಶ್ಯಾವಳಿಗಳು ಸಾಬೀತುಪಡಿಸಿರುವಂತೆ ಪೊಲೀಸರೂ ಈ ಹಿಂಸಾಚಾರದಲ್ಲಿ ಸಕ್ರಿಯವಾಗಿ ತೊಡಗಿಕೊಂಡ ಪರಿಣಾಮ ಈ ಇಷ್ಟೆಲ್ಲವೂ ನಡೆದಿದೆ. ಬೆಂಕಿ ಹಚ್ಚುವವರು ಮತ್ತು ಗಲಭೆಕೋರ ಮುಖಗಳು, ಗಾಯಗೊಂಡ ಜನರನ್ನು ಹಿಂಸಿಸುವುದು ಮತ್ತು ಅವರನ್ನು ರಾಷ್ಟ್ರಗೀತೆ ಹಾಡುವಂತೆ ಒತ್ತಾಯಪಡಿಸುವುದು ಹಾಗೂ ಸಿಎಎ ವಿರೋಧಿ ಪ್ರತಿಭಟನೆಗಳ ಸಮಯದಲ್ಲಿ ಆಝಾದಿ ಘೋಷಣೆ ಕೂಗಿದ ಕಾರಣಕ್ಕೆ ಅವರನ್ನು ನಿಂದಿಸುವುದು, ಗಲಭೆಕೋರರ ಜೊತೆ ತಾವೂ ಕಲ್ಲುಗಳು ಮತ್ತು ಇಟ್ಟಿಗೆಗಳನ್ನು ಎತ್ತುವುದು ಮತ್ತು ಎಸೆಯುವುದು ಸಿಸಿಟಿವಿಯಲ್ಲಿ ಸೆರೆಯಾಗದಂತೆ ಪೊಲೀಸರು ಅವುಗಳನ್ನು ಒಡೆದು ಹಾಕುತ್ತಿರುವುದನ್ನು ಕೆಲವು ವೀಡಿಯೊಗಳು ಸ್ಪಷ್ಟವಾಗಿ ತೋರಿಸಿವೆ ಎಂದು ಪಿಎಫ್ಐ ರಾಜ್ಯ ಸಮಿತಿ ತಿಳಿಸಿದೆ.

ಪಾಪ್ಯುಲರ್ ಫ್ರಂಟ್ ದಿಲ್ಲಿ  ಅಧ್ಯಕ್ಷ ಫರ್ವೇಝ್ ಅಹ್ಮದ್ ಮತ್ತು ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಇಲ್ಯಾಸ್ ಅವರು ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನಾ ಜಾಥ ಆಯೋಜನೆ ಮಾಡಿರುವ ಬಗ್ಗೆ ತಿಳಿಸಲು ಪೊಲೀಸ್ ಠಾಣೆಗೆ ತೆರಳಿದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿತ್ತು. ಇದಕ್ಕೂ ಮೊದಲು ಪಿಎಫ್‌ಐ ಸದಸ್ಯ ಡ್ಯಾನಿಶ್ ಖಾನ್ ಅವರನ್ನೂ ಬಂಧಿಸಲಾಗಿತ್ತು. ಪಾಪ್ಯುಲರ್ ಫ್ರಂಟ್ ರಾಜ್ಯ ಕಚೇರಿ ಕಾರ್ಯದರ್ಶಿ ಮುಖೀತ್ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆದರೆ ದಿಲ್ಲಿ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ಪ್ರಭ್‌ದೀಪ್ ಕೌರ್ ಬಂಧಿತ ಎಲ್ಲರಿಗೂ ಜಾಮೀನು ಮಂಜೂರು ಮಾಡಿದ್ದರು. ಬಂಧಿತರ ಮೇಲೆ ಹೊರಿಸಲಾಗಿರುವ ಆರೋಪಗಳು ಜಾಮೀನಿಗೆ ಅರ್ಹವಾಗಿದ್ದರೂ ಇವರಿಗೆ ಮೊದಲೇ ಯಾಕೆ ಜಾಮೀನು ನೀಡಲಾಗಿರಲಿಲ್ಲ ಎಂದು ಮಾರ್ಚ್ 17ರ ಒಳಗಾಗಿ ಲಿಖಿತ ವಿವರಣೆ ನೀಡುವಂತೆ ನ್ಯಾಯಾಧೀಶರು ತನಿಖಾಧಿಕಾರಿಗೆ ಸೂಚಿಸಿದ್ದಾರೆ ಎಂದು ಸಮಿತಿ ತಿಳಿಸಿದೆ.

ಸಂವಿಧಾನದ ಮೌಲ್ಯಗಳ ಮತ್ತು ಈ ದೇಶದ ಕಾನೂನಿನ ಬಹಿರಂಗ ಉಲ್ಲಂಘನೆ ಮತ್ತು ಆರೆಸ್ಸೆಸ್-ಬಿಜೆಪಿಯ ಕೋಮು ಮತಾಂಧತೆಯ ರಾಜಕೀಯದ ವಿರುದ್ಧ ಜೊತೆಯಾಗಿ ನಮ್ಮ ಪ್ರತಿರೋಧವನ್ನು ಇನ್ನಷ್ಟು ಗಟ್ಟಿಗೊಳಿಸಲು ಎಲ್ಲ ನಾಗರಿಕರು ಮತ್ತು ಗುಂಪುಗಳು ತಮ್ಮ ಧ್ವನಿಯೆತ್ತಬೇಕೆಂದು ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಪ್ರಕಟನೆಯಲ್ಲಿ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X