Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್ ಬಿಐ 'ಹೃದಯವಿಲ್ಲದ' ಬ್ಯಾಂಕ್:...

ಎಸ್ ಬಿಐ 'ಹೃದಯವಿಲ್ಲದ' ಬ್ಯಾಂಕ್: ನಿರ್ಮಲಾ ಸೀತಾರಾಮನ್ ವಾಗ್ದಾಳಿಯ ಆಡಿಯೋ ವೈರಲ್

ಸಚಿವೆಯ ವರ್ತನೆ ಖಂಡಿಸಿ ಬಳಿಕ ಹೇಳಿಕೆ ವಾಪಸ್ ಪಡೆದ ಬ್ಯಾಂಕ್ ಅಸೋಸಿಯೇಶನ್

ವಾರ್ತಾಭಾರತಿವಾರ್ತಾಭಾರತಿ15 March 2020 2:41 PM IST
share
ಎಸ್ ಬಿಐ ಹೃದಯವಿಲ್ಲದ ಬ್ಯಾಂಕ್: ನಿರ್ಮಲಾ ಸೀತಾರಾಮನ್ ವಾಗ್ದಾಳಿಯ ಆಡಿಯೋ ವೈರಲ್

ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚೇರ್ ಮ್ಯಾನ್ ರಜನೀಶ್ ಕುಮಾರ್ ಅವರ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಕ್ರೋಶ ವ್ಯಕ್ತಪಡಿಸಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 'ಹೃದಯವಿಲ್ಲದ' ಮತ್ತು 'ಅಸಮರ್ಥ' ಬ್ಯಾಂಕ್ ಎಂದು ನಿರ್ಮಲಾ ಸೀತಾರಾಮನ್ ಹೇಳುತ್ತಿರುವುದು ಆಡಿಯೋದಲ್ಲಿ ಕೇಳಿಸುತ್ತದೆ. ಯುಟ್ಯೂಬ್ ನಲ್ಲಿ ಈ ಆಡಿಯೋವನ್ನು ಅಪ್ ಲೋಡ್ ಮಾಡಲಾಗಿದ್ದು, ವೈರಲ್ ಆಗಿದೆ.

ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿರುವ ಬ್ಯಾಂಕಿಂಗ್ ಸಮಸ್ಯೆಗಳ ಬಗ್ಗೆ ಬ್ಯಾಂಕರ್ ಗಳ ಜೊತೆ ಫೆಬ್ರವರಿಯಲ್ಲಿ ನಡೆದ ಚರ್ಚೆಯ ಸಂದರ್ಭ ನಿರ್ಮಲಾ ಸೀತಾರಾಮನ್ ಈ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ. ಈ ಸಭೆಯಲ್ಲಿ ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮ ಕೂಡ ಇದ್ದರು.

ಕೆವೈಸಿಯಲ್ಲಿನ ಸಮಸ್ಯೆಯಿಂದಾಗಿ ಅಸ್ಸಾಂನ 2.5 ಲಕ್ಷ ಚಹಾ ತೋಟದ ಕಾರ್ಮಿಕರ ಖಾತೆಗಳು ಸ್ಥಗಿತಗೊಂಡಿರುವುದರಿಂದ ನಿರ್ಮಲಾ ಸೀತಾರಾಮನ್ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಇದರಿಂದಾಗಿ ಕಾರ್ಮಿಕರು ನೇರ ಲಾಭ ವರ್ಗಾವಣೆ ಯೋಜನೆಯ ಲಾಭವನ್ನು  ಪಡೆಯಲು ಸಮಸ್ಯೆಯಾಗಿತ್ತು.

"ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ... ನೀವು ಅತಿ ದೊಡ್ಡ ಬ್ಯಾಂಕ್ ಎಂದು ನನಗೆ ಹೇಳಿದರೆ ಅದು ಒಳ್ಳೆಯದಲ್ಲ... ನಿಮ್ಮದು ಹೃದಯವಿಲ್ಲದ ಬ್ಯಾಂಕ್. ನಿಮ್ಮ ಅಸಮರ್ಥತೆಯೇ ಇದಕ್ಕೆಕಾರಣ. ಈ ವೈಫಲ್ಯಕ್ಕೆ ನೀವೇ ಸಂಪೂರ್ಣ ಜವಾಬ್ದಾರರು" ಎಂದು ನಿರ್ಮಲಾ ಸೀತಾರಾಮನ್ ಹೇಳುತ್ತಿರುವುದು ಆಡಿಯೋದಲ್ಲಿದೆ.

ತದನಂತರ ಎಸ್ ಬಿಐ ಮುಖ್ಯಸ್ಥ ಕುಮಾರ್ ನಿರ್ಮಲಾ ಸೀತಾರಾಮನ್ ಬಳಿ ಕ್ಷಮೆಯಾಚಿಸುತ್ತಿರುವುದೂ ಆಡಿಯೋದಲ್ಲಿದೆ.

ನಿರ್ಮಲಾ ಹೇಳಿಕೆ ಖಂಡಿಸಿ ಬಳಿಕ ವಾಪಸ್ ಪಡೆದ ಬ್ಯಾಂಕ್ ಅಸೋಸಿಯೇಶನ್

ಈ ಆಡಿಯೋ ವೈರಲ್ ಆದ ನಂತರ ಬ್ಯಾಂಕ್ ಅಧಿಕಾರಿಗಳ ಅಸೋಸಿಯೇಶನ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವರ್ತನೆಯನ್ನು ಖಂಡಿಸಿತ್ತು. ಆದರೆ ಕೂಡಲೇ ತನ್ನ ಹೇಳಿಕೆಯನ್ನು ವಾಪಸ್ ಪಡೆದಿದೆ.

ಸೀತಾರಾಮನ್ ಹೇಳಿಕೆಯನ್ನು ಖಂಡಿಸಿದ್ದ ಅಸೋಸಿಯೇಶನ್ ಅದನ್ನು 'ಅಹಿತಕರ' ಎಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X