ಮಂಗಳೂರು, ಮಾ.15: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ)ಯ ವತಿಯಿಂದ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯ ಮುಂದೆ ಮಾ.16ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಸಮಿತಿಯ ಸಂಚಾಲಕ ಜಗದೀಶ್ ಪಾಂಡೇಶ್ವರ ತಿಳಿಸಿದ್ದಾರೆ.