Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ...

ದ.ಕ.ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಕೊರತೆ: ಶಾಸಕ ಉಮನಾಥ ಕೋಟ್ಯಾಣ್

ಪಡೀಲ್‌ನಲ್ಲಿ ಕಾಮಗಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ15 March 2020 8:53 PM IST
share
ದ.ಕ.ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಅನುದಾನ ಕೊರತೆ: ಶಾಸಕ ಉಮನಾಥ ಕೋಟ್ಯಾಣ್

ಮಂಗಳೂರು, ಮಾ.15: ನಗರದ ಪಡೀಲ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾಮಗಾರಿಗೆ ಅನುದಾನದ ಕೊರತೆ ಇದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಂಸದರು ಮತ್ತು ಶಾಸಕರ ಸೇರಿ ಸಭೆ ನಡೆಸಿ ಕಾಮಗಾರಿಗೆ ವೇಗ ನೀಡುವ ಸಲುವಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.

ಪಡೀಲ್‌ಗೆ ರವಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

2008ರಲ್ಲಿ 41 ಕೋ.ರೂ.ಅಂದಾಜು ವೆಚ್ಚದಲ್ಲಿ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿತ್ತು. ಈಗ ಅದರ ಮೊತ್ತ 55 ಕೋ.ರೂ.ವರೆಗೆ ತಲುಪಿದೆ. ಕಾಮಗಾರಿ ಮುಗಿಯುವ ವೇಳೆಗೆ ಈ ಮೊತ್ತ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದರು.

ಕಟ್ಟಡ ರಚನೆಯು ಪೂರ್ಣಗೊಂಡಿದೆ. ಆದರೆ ಸಾರಣೆ, ನೆಲದ ಕಾಮಗಾರಿ, ಒಳಾಂಗಣ ವಿನ್ಯಾಸ ಸಹಿತ ತುಂಬಾ ಕೆಲಸಗಳು ಬಾಕಿ ಇವೆ. ಈಗಾಗಲೇ 32 ಕೋ.ರೂ. ಖರ್ಚಾಗಿದ್ದು, 24 ಕೋ.ರೂ. ಗುತ್ತಿಗೆದಾರರಿಗೆ ಪಾವತಿಸಲಾಗಿದೆ. ಕಟ್ಟಡದಲ್ಲಿ ಕಚೇರಿ ಹೊಂದಲಿರುವ ಪ್ರಮುಖ ಇಲಾಖೆಗಳಾದ ಆರೋಗ್ಯ ಇಲಾಖೆಯಿಂದ 7 ಕೋ.ರೂ., ಸಣ್ಣ ನೀರಾವರಿ ಇಲಾಖೆಯಿಂದ 1 ಕೋ.ರೂ. ಬರಲು ಬಾಕಿ ಇದೆ. ಹಳೆಯ ಡಿಸಿ ಕಚೇರಿಯನ್ನು ಸ್ಮಾರ್ಟ್ ಸಿಟಿಗೆ ನೀಡಲು ಉದ್ದೇಶಿಸಲಾಗಿದ್ದು, ಅವರಿಂದ 10 ಕೋ.ರೂ. ಪಡೆಯಲು ಉದ್ದೇಶಿಸಲಾಗಿದೆ ಎಂದು ಉಮನಾಥ ಕೋಟ್ಯಾನ್ ನುಡಿದರು.

ಈ ಸಂದಭ ಕಟ್ಟಡದ ಆರ್ಕಿಟೆಕ್ಟ್ ಧರ್ಮರಾಜ್, ಗುತ್ತಿಗೆದಾರ ಪ್ರಭಾಕರ ಯೆಯ್ಯಿಡಿ, ಸೈಟ್ ಇಂಜಿನಿಯರ್ ವಿಜಯ್ ಕುಮಾರ್, ಕರ್ನಾಟಕ ಹೌಸಿಂಗ್ ಬೋರ್ಡ್ ಇಂಜಿನಿಯರ್ ಸಹನಾ ಮತ್ತಿತರರಿದ್ದರು.

ಒಂದೇ ಕಟ್ಟಡದಲ್ಲಿ 38 ಇಲಾಖೆಗಳು!

5.8 ಎಕರೆ ಪ್ರದೇಶದಲ್ಲಿ 2.26 ಲಕ್ಷ ಚ.ಅಡಿ.ವಿಸ್ತೀರ್ಣದ ಡಿಸಿ ಕಚೇರಿ ನಿರ್ಮಾಣವಾಗಲಿದೆ. ಈ ಕಚೇರಿ ಸಂಕೀರ್ಣದಲ್ಲಿ 38 ವಿವಿಧ ಇಲಾಖೆಗಳು, ಜಿಲ್ಲಾ ಉಸ್ತುವಾರಿ ಸಚಿವ, ಸಂಸದ, ಶಾಸಕರ ಕಚೇರಿಯೂ ಇದರಲ್ಲಿ ತೆರೆಯಲಾಗುತ್ತದೆ. ಮುಂಭಾಗದಲ್ಲಿ ಹಾದು ಹೋಗುವ ರಸ್ತೆಯು ಹಿಂದೆ ಹೆದ್ದಾರಿಯಾಗಿತ್ತು. ಆಗ 45 ಮೀ. ಸೆಟ್‌ಬ್ಯಾಕ್ ಬಿಡಬೇಕಿತ್ತು. ಆದರೆ ಈಗ ಅದು ಪಾಲಿಕೆ ವ್ಯಾಪ್ತಿಯ ರಸ್ತೆಯಾಗಿರುವುದರಿಂದ 30 ಮೀ. ಮಾತ್ರ ಸೆಟ್‌ಬ್ಯಾಕ್ ಬಿಟ್ಟರೆ ಸಾಕಾಗುತ್ತದೆ. ಆದರೆ ಈ ಕುರಿತು ಅಂತಿಮ ತೀರ್ಮಾನವಾಗದಿರುವುದರಿಂದ ಆವರಣ ಗೋಡೆ ನಿರ್ಮಾಣಕ್ಕೆ ಸಮಸ್ಯೆಯಾಗಿದೆ ಎಂದು ಶಾಸಕ ಕೋಟ್ಯಾನ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X