Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರದ ಹೊರಗಿನ...

ಜಮ್ಮು-ಕಾಶ್ಮೀರದ ಹೊರಗಿನ ಜೈಲುಗಳಲ್ಲಿರುವವರನ್ನು ಮರಳಿ ಕರೆತರಲು ಒಂದಾಗುವಂತೆ ಪಕ್ಷಗಳಿಗೆ ಫಾರೂಕ್ ಅಬ್ದುಲ್ಲಾ ಕರೆ

ವಾರ್ತಾಭಾರತಿವಾರ್ತಾಭಾರತಿ15 March 2020 9:08 PM IST
share
ಜಮ್ಮು-ಕಾಶ್ಮೀರದ ಹೊರಗಿನ ಜೈಲುಗಳಲ್ಲಿರುವವರನ್ನು ಮರಳಿ ಕರೆತರಲು ಒಂದಾಗುವಂತೆ ಪಕ್ಷಗಳಿಗೆ ಫಾರೂಕ್ ಅಬ್ದುಲ್ಲಾ ಕರೆ

ಶ್ರೀನಗರ,ಮಾ.15: ಜಮ್ಮು-ಕಾಶ್ಮೀರದ ಹೊರಗಿನ ಜೈಲುಗಳಲ್ಲಿ ಬಂಧನದಲ್ಲಿರುವವರನ್ನು ಮಾನವೀಯ ನೆಲೆಯಲ್ಲಿ ಮರಳಿ ಕರೆತರಲು ಕೇಂದ್ರಕ್ಕೆ ಜಂಟಿಯಾಗಿ ಮನವಿ ಸಲ್ಲಿಸುವಂತೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ರವಿವಾರ ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

 ತನ್ನನ್ನು ದಿಗ್ಬಂಧನದಿಂದ ಮುಕ್ತಗೊಳಿಸಿರುವ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಪ್ರಜ್ಞಾಪೂರ್ವಕವಾಗಿ ನಿವಾರಿಸುತ್ತಿದ್ದೇನೆ ಎಂದು ಶುಕ್ರವಾರ ಬಿಡುಗಡೆಗೊಂಡ ಬಳಿಕ ನೀಡಿರುವ ತನ್ನ ಮೊದಲ ಹೇಳಿಕೆಯಲ್ಲಿ 82ರ ಹರೆಯದ ಫಾರೂಕ್ ಸ್ಪಷ್ಟಪಡಿಸಿದ್ದಾರೆ.

ಕಳೆದ ವರ್ಷದ ಆ.5ರಿಂದ ಜಮ್ಮು-ಕಾಶ್ಮೀರದಲ್ಲಿ ಆಗಿರುವ ಮಹತ್ವದ ಬದಲಾವಣೆಗಳನ್ನು ತಿಳಿದುಕೊಳ್ಳಲು ರಾಜಕೀಯ ಅಭಿಪ್ರಾಯಗಳ ಮುಕ್ತ ಮತ್ತು ನೇರ ವಿನಿಮಯವನ್ನು ಪ್ರತಿಪಾದಿಸಿದ ಅವರು,‘ಇಂತಹ ರಾಜಕೀಯ ಚರ್ಚೆಗಳಿಗೆ ಪೂರಕ ವಾತಾವರಣದಿಂದ,ವಿಶೇಷವಾಗಿ ಕಳೆದ ವರ್ಷದ ಆಗಸ್ಟ್‌ನಲ್ಲಿ ಬಂಧಿಸಲ್ಪಟ್ಟು ಜಮ್ಮು-ಕಾಶ್ಮೀರದ ಹೊರಗಿನ ಜೈಲುಗಳಲ್ಲಿರುವವರ ಸಂಖ್ಯೆಯನ್ನು ಪರಿಗಣಿಸಿದರೆ ನಾವಿನ್ನೂ ದೂರವೇ ಇದ್ದೇವೆ ’ಎಂದರು.

‘ರಾಜಕೀಯವು ನಮ್ಮನ್ನು ವಿಭಜಿಸುವ ಮುನ್ನ ಹೊರಗಿನ ಜೈಲುಗಳಲ್ಲಿರುವವರನ್ನು ಜಮ್ಮು-ಕಾಶ್ಮೀರಕ್ಕೆ ಮರಳಿ ಕರೆತರುವಂತೆ ಕೇಂದ್ರ ಸರಕಾರಕ್ಕೆ ಮನವಿಯನ್ನು ರಾಜ್ಯದಲ್ಲಿಯ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಬೆಂಬಲಿಸಬೇಕು’ ಎಂದ ಅವರು,‘ಅವರೆಲ್ಲ ಬಂಧಮುಕ್ತಗೊಳ್ಳುವುದನ್ನು ನೋಡಲು ನಾವು ಬಯಸಿದ್ದೇವೆ,ಅದಿಲ್ಲದಿದ್ದರೆ ಮಾನವೀಯ ನೆಲೆಯಲ್ಲಿ ಅವರನ್ನು ಇಲ್ಲಿಗೆ ಸ್ಥಳಾಂತರಿಸಬೇಕು’ಎಂದರು.

ಶನಿವಾರ ದಿಗ್ಬಂಧನದಲ್ಲಿರುವ ಪುತ್ರ ಒಮರ್ ಅಬ್ದುಲ್ಲಾರನ್ನು ಭೇಟಿಯಾಗಿದ್ದ ಫಾರೂಕ್,ನೂರಾರು ಕಾಶ್ಮೀರಿ ಕುಟುಂಬಗಳಿಗೆ ಹೋಲಿಸಿದರೆ ತಾನು ಹೆಚ್ಚು ಸುದೈವಿಯಾಗಿದ್ದೇನೆ ಎಂದರು. ಆದರೆ ಹೆಚ್ಚಿನ ಬಂಧಿತರ ಕುಟುಂಬಗಳಿಗೆ ತಮ್ಮವರನ್ನು ಭೇಟಿಯಾಗುವುದು ಅಷ್ಟು ಸುಲಭವಿಲ್ಲ. ಬಂಧಿತರನ್ನು ವಿವಿಧ ರಾಜ್ಯಗಳಲ್ಲಿ ಹರಡಿಕೊಂಡಿರುವ ಜೈಲುಗಳಲ್ಲಿ ಇರಿಸಲಾಗಿದೆ. ಅವರನ್ನು ವಾರಕ್ಕೆರಡು ಬಾರಿ ಭೇಟಿಯಾಗಲು ಅವಕಾಶವಿದ್ದು,ಇದಕ್ಕಾಗಿ ಪ್ರಯಾಣದ ವೆಚ್ಚವು ಕುಟುಂಬ ಸದಸ್ಯರಿಗೆ ಹೊರೆಯಾಗುತ್ತಿದೆ. ಇದರೊಂದಿಗೆ ಈಗ ದೂರದ ಪ್ರಯಾಣದಿಂದ ಕೊರೋನವೈರಸ್ ಸೋಂಕಿಗೆ ಗುರಿಯಾಗುವ ಭೀತಿಯೂ ಅವರನ್ನು ಕಾಡುತ್ತಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X