Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರಿಗಳಿಗೆ ಆಘಾತ ನೀಡಿದ್ದು 370ನೆ...

ಕಾಶ್ಮೀರಿಗಳಿಗೆ ಆಘಾತ ನೀಡಿದ್ದು 370ನೆ ವಿಧಿ ರದ್ದತಿಯಲ್ಲ, ಬದಲಾಗಿ…: ಮಾಜಿ ‘ರಾ’ ಮುಖ್ಯಸ್ಥ ದುಲತ್ ಹೇಳಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ15 March 2020 9:18 PM IST
share
ಕಾಶ್ಮೀರಿಗಳಿಗೆ ಆಘಾತ ನೀಡಿದ್ದು 370ನೆ ವಿಧಿ ರದ್ದತಿಯಲ್ಲ, ಬದಲಾಗಿ…: ಮಾಜಿ ‘ರಾ’ ಮುಖ್ಯಸ್ಥ ದುಲತ್ ಹೇಳಿದ್ದು ಹೀಗೆ

ಹೊಸದಿಲ್ಲಿ, ಮಾ. 14: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ವಿಧಿ 370ನ್ನು ರದ್ದುಗೊಳಿಸುವ ನಿರ್ಧಾರಕ್ಕಿಂತ, ಜಮ್ಮು ಹಾಗೂ ಕಾಶ್ಮೀರದ ರಾಜ್ಯದ ಸ್ಥಾನಮಾನವನ್ನು ರದ್ದುಗೊಳಿಸಿರುವ ನಿರ್ಧಾರದ ಬಗ್ಗೆ ಕಾಶ್ಮೀರ ಜನತೆ ಕಳವಳಗೊಂಡಿತ್ತು ಎಂದು ‘ರಾ’ದ ಮಾಜಿ ಮುಖ್ಯಸ್ಥ ಎ.ಎಸ್. ದುಲಾತ್ ಸುದ್ದಿ ಜಾಲ ತಾಣ Thewire.in ನೊಂದಿಗಿನ ಸಂದರ್ಶನದ ಸಂದರ್ಭ ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭ ಪ್ರಧಾನಿ ಕಚೇರಿಯ ಕಾಶ್ಮೀರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ದುಲತ್, ಜಮ್ಮು ಹಾಗೂ ಕಾಶ್ಮೀರ ರಾಜ್ಯದ ಸ್ಥಾನಮಾನಕ್ಕೆ ಮರಳುವ ಬೇಡಿಕೆಗೆ ಕಾಶ್ಮೀರದಲ್ಲಿ ಶೀಘ್ರ ಬಲ ಬರಲಿದೆ ಎಂದರು. ಅಲ್ಲದೆ, ಕಾಶ್ಮೀರ ಸಹಜ ಸ್ಥಿತಿಗೆ ಮರಳುವುದು ಹೇಗೆ ಎಂಬ ಚಿಂತೆ ಕಾಶ್ಮೀರ ಜನತೆಯನ್ನು ಕಾಡುತ್ತಿದೆ ಎಂದು ಹೇಳಿದರು.

 ಜಮ್ಮು ಹಾಗೂ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಸರಕಾರ 2019 ಆಗಸ್ಟ್ 5ರಂದು ರದ್ದುಗೊಳಿಸಿತ್ತು ಹಾಗೂ ಕಳೆದ ವರ್ಷ ಅಕ್ಟೋಬರ್‌ನಲ್ಲಿ ರಾಜ್ಯವನ್ನು ಜಮ್ಮು ಕಾಶ್ಮೀರ ಹಾಗೂ ಲಡಾಕ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು.

  ಆಗಿನ ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಬಿಡುಗಡೆಗೊಳಿಸಲು ಇದ್ದಕ್ಕಿದ್ದಂತೆ ಕೇಂದ್ರ ಸರಕಾರ ನಿರ್ಧಾರ ತೆಗೆದುಕೊಂಡ ಬಳಿಕ ಸುದ್ದಿ ಜಾಲ ತಾರಣ ‘ವೈರ್’ಗಾಗಿ ಕರಣ್ ಥಾಪರ್ ಅವರಿಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರ ಹಂಚಿಕೊಂಡ ದುಲತ್, ವಿಧಿ 370 ರದ್ದುಗೊಳಿಸಿರುವುದು ಕಾಶ್ಮೀರಿಗಳಿಗೆ ಆಘಾತ ಉಂಟು ಮಾಡಿತು. ಅನಂತರ ಕಾಶ್ಮೀರ ಹಾಗೂ ಕಾಶ್ಮೀರಿಗಳು ಈ ಬದಲಾವಣೆಯೊಂದಿಗೆ ಹೊಂದಿಕೊಂಡರು. ಯಾಕೆಂದರೆ ವಿಧಿ 370 ಮತ್ತೆ ಎಂದಿಗೂ ಬಾರದು ಎಂದು ಅವರಿಗೆ ತಿಳಿದಿತ್ತು ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

ಗೃಹಬಂಧನಕ್ಕೆ ಒಳಗಾದ 6 ತಿಂಗಳ ಬಳಿಕ ಫಾರೂಕ್ ಅಬ್ದುಲ್ಲಾ ಅವರ ಬಿಡುಗಡೆಯನ್ನು ಸುಗಮಗೊಳಿಸಲು ಕೇಂದ್ರ ಸರಕಾರಕ್ಕೆ ನೆರವು ನೀಡುವಲ್ಲಿ ಗುಪ್ತಚರ ಸಂಸ್ಥೆಯ ಹಿರಿಯ ಅಧಿಕಾರಿಯಾಗಿರುವ ದುಲತ್ ಪ್ರಮುಖ ಪಾತ್ರ ವಹಿಸಿದ್ದರು ಎಂದು ಪರಿಗಣಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯ ಭೇಟಿಗೆ ಅನುಮತಿ ನೀಡಿದ ಬಳಿಕ ಗೃಹಬಂಧನದಲ್ಲಿ ಇದ್ದ ಫಾರೂಕ್ ಅಬ್ದುಲ್ಲಾ ಅವರನ್ನು ಫೆಬ್ರವರಿ 12ರಂದು ತಾನು ಭೇಟಿಯಾಗಿದ್ದೆ ಎಂದು ಸಂದರ್ಶನದಲ್ಲಿ ದುಲತ್ ಒಪ್ಪಿಕೊಂಡಿದ್ದರು.

ಫಾರೂಕ್ ಅಬ್ದುಲ್ಲಾ ಅವರು ಬಿಡುಗಡೆಯಾಗುವ ಸಂದರ್ಭ ಇತರ ನಾಯಕರನ್ನು ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಇರಿಸಿದ್ದರು. ಇದರೊಂದಿಗೆ ಅವರ ಇನ್ನೊಂದು ಬೇಡಿಕೆಯಾಗಿದ್ದ ಜಮ್ಮು ಹಾಗೂ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿಸುವ ಆಗ್ರಹ ಶೀಘ್ರದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ದುಲತ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X