Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೇರಿಹಿಲ್: ಸರಕಾರಿ ಸಂಸ್ಥೆಯ ಗ್ಯಾರೇಜ್...

ಮೇರಿಹಿಲ್: ಸರಕಾರಿ ಸಂಸ್ಥೆಯ ಗ್ಯಾರೇಜ್ ಬಂದ್

ಮೆಕ್ಯಾನಿಕೂ ಇಲ್ಲ... ದುರಸ್ಥಿಗೆ ವಾಹನಗಳೂ ಇಲ್ಲ!

ವಾರ್ತಾಭಾರತಿವಾರ್ತಾಭಾರತಿ16 March 2020 9:17 PM IST
share
ಮೇರಿಹಿಲ್: ಸರಕಾರಿ ಸಂಸ್ಥೆಯ ಗ್ಯಾರೇಜ್ ಬಂದ್

ಮಂಗಳೂರು, ಮಾ.16: ನಗರದ ಮೇರಿಹಿಲ್-ಹೆಲಿಪ್ಯಾಡ್ ರಸ್ತೆ ಬದಿಯಲ್ಲಿ ರಾಜ್ಯ ಸರಕಾರದ ಕೇಂದ್ರ ಯಾಂತ್ರಿಕ ಸಂಸ್ಥೆ (ಸೆಂಟ್ರಲ್ ಮೆಕ್ಯಾನಿಕಲ್ ಆರ್ಗನೈಸೇಶನ್) ಅಂದರೆ ಗ್ಯಾರೇಜ್ ಬಂದ್ ಅಗಿ ಬರೋಬ್ಬರಿ 17 ವರ್ಷಗಳೇ ಕಳೆದಿವೆ. 2003ರಲ್ಲಿ ನಿರ್ಮಿಸಿದ ಈ ವರ್ಕ್‌ಶಾಪ್ ಸುಸಜ್ಜಿತ ಕಟ್ಟಡದಿಂದ ಕೂಡಿದೆ.

ಈ ವರ್ಕ್‌ಶಾಪ್ ಮೂರು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿವೆ. ಅಂದರೆ ದ.ಕ., ಉಡುಪಿ, ಕೊಡಗು ಜಿಲ್ಲೆಗಳ ವ್ಯಾಪ್ತಿಯ ಬೃಹತ್ ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆಯು ಲಾರಿ, ಟಿಪ್ಪರ್, ರೋಡ್ ರೋಲರ್, ಜೀಪ್ ಇತ್ಯಾದಿ ವಾಹನಗಳನ್ನು ದುರಸ್ತಿ ಮಾಡಲೆಂದು ಈ ವರ್ಕ್‌ಶಾಪ್‌ನ್ನು 2003ರಲ್ಲಿ ತೆರೆದಿತ್ತು. ಆದರೆ ಇನ್ನೂ ಇದರ ಉದ್ದೇಶ ಈಡೇರಿಲ್ಲ. ಇದಕ್ಕೆ ಅಧಿಕಾರಿಗಳ ನಿರಾಸಕ್ತಿಯೇ ಕಾರಣ ಎಂದು ಹೇಳಲಾಗುತ್ತಿದೆ. ಅಂದಹಾಗೆ ಇದಕ್ಕೊಬ್ಬ ಕನಿಷ್ಠ ಮೆಕ್ಯಾನಿಕ್ ಕೂಡ ಇಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ದುರಸ್ತಿಗೆ ವಾಹನವೂ ಬಾರದಿರುವುದು ವಿಪರ್ಯಾಸ.

ಕಾವಲುಗಾರ ಮಾತ್ರ

ವರ್ಕ್‌ಶಾಪ್‌ನ ಆವರಣ ಪ್ರವೇಶಿಸಿದರೆ ಒಂದು ಬೋರ್ಡ್ ಮತ್ತು ಒಬ್ಬ ಕಾವಲುಗಾರನನ್ನು ಕಾಣಬಹುದಾಗಿದೆ. ಕೋಣೆಯೊಳಗಿನ ಗೋಡೆಯಲ್ಲಿ ಉದ್ಘಾಟನೆ ಕಾರ್ಯಕ್ರಮದ ಫೋಟೋಗಳನ್ನು ಅಳವಡಿಸಲಾಗಿದೆ. ಆರಂಭದ ದಿನಗಳಲ್ಲಿ ಲೋಕೋಪಯೋಗಿ ಇಲಾಖೆಯ ಕೆಲವು ವಾಹನಗಳನ್ನು ದುರಸ್ತಿ ಮಾಡಿದ ಬಗ್ಗೆ ದಾಖಲೆಗಳಿವೆ. ಅದು ಬಿಟ್ಟರೆ ಬೇರೇನೂ ಇಲ್ಲ. ಈ ವರ್ಕ್‌ಶಾಪ್‌ನ ಕೋಣೆಯೊಂದರಲ್ಲಿ ಕಾವಲುಗಾರನ ಕುಟುಂಬ ವಾಸ್ತವ್ಯ ಹೂಡಿವೆ.

ವರ್ಕ್‌ಶಾಪ್ ನಿರ್ಮಿಸಿದ ಇಲಾಖೆ ಬಳಿಕ ಇಲ್ಲಿಗೆ ಮೆಕ್ಯಾನಿಕ್ ಸೇರಿದಂತೆ ಯಾವುದೇ ಸಿಬ್ಬಂದಿ ನೇಮಕ ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೂಕ್ತ ಮೆಕ್ಯಾನಿಕ್ ಇಲ್ಲದ ಕಾರಣ ದುರಸ್ತಿಗೆ ವಾಹನವೂ ಬಂದಿಲ್ಲ. ಹಾಗಾಗಿ ಕಳೆದ 17 ವರ್ಷದಿಂದ ಈ ಗ್ಯಾರೇಜ್‌ನ ಗೇಟ್ ತೆರೆದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಇಲ್ಲೊಂದು ಸರಕಾರಿ ಸಂಸ್ಥೆಯ ಗ್ಯಾರೇಜ್ ಇದೆ ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.

ಕಾರಣ ಏನು ?

ದ.ಕ.ಜಿಲ್ಲೆಯಲ್ಲಿ ಬೃಹತ್ ನೀರಾವರಿ ಇಲಾಖೆಗೆ ಸದ್ಯ ಯಾವುದೇ ಯೋಜನೆಗಳಿಲ್ಲ. ಇನ್ನು ಲೋಕೋಪಯೋಗಿ ಇಲಾಖೆಯ ಹಳೆಯ ವಾಹನಗಳನ್ನು ಗುತ್ತಿಗೆದಾರರು ಬಾಡಿಗೆಗೆ ಪಡೆಯುತ್ತಿಲ್ಲ. ಇಲಾಖೆಯಲ್ಲಿ ವಾಹನಗಳ ಸಂಖ್ಯೆಯೂ ಕಡಿಮೆಯಾಗಿದೆ. ಲಭ್ಯ ವಾಹನಗಳನ್ನು ಖಾಸಗಿ ಗ್ಯಾರೇಜ್‌ಗಳಲ್ಲಿ ದುರಸ್ತಿ ಮಾಡಲಾಗುತ್ತದೆ. ಹಾಗಾಗಿ ಮೇರಿಹಿಲ್‌ನಲ್ಲಿರುವ ಗ್ಯಾರೇಜ್ ಇದ್ದೂ ಇಲ್ಲದಂತಿವೆ.

ಇಲಾಖೆಯಲ್ಲಿ ಮೆಕ್ಯಾನಿಕ್ ನೇಮಕಾತಿಯೇ ಆಗುತ್ತಿಲ್ಲ. ಹಾಗಾಗಿ ಈ ಗ್ಯಾರೇಜ್‌ಗೆ ಕೂಡ ಮೆಕ್ಯಾನಿಕ್ ನೇಮಕ ಆಗಿಲ್ಲ. ಇದರಿಂದ ಕಳೆದ ಹಲವು ವರ್ಷಗಳಿಂದ ಈ ಗ್ಯಾರೇಜ್ ಬಂದ್ ಆಗಿದೆ. ಮೆಕ್ಯಾನಿಕ್ ನೇಮಕ ಮಾಡಿ ಗ್ಯಾರೇಜನ್ನು ಮತ್ತೆ ಆರಂಭಿಸುವ ಸಲುವಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೀಗ ಇಲಾಖೆಯ ವಾಹನಗಳನ್ನು ಖಾಸಗಿ ಗ್ಯಾರೇಜ್‌ಗಳಲ್ಲಿ ದುರಸ್ತಿ ಮಾಡಲಾಗುತ್ತಿದೆ.

- ದೇವಿಪ್ರಸಾದ್ , ಜೂನಿಯರ್ ಇಂಜಿನಿಯರ್
ಕೇಂದ್ರ ಯಾಂತ್ರಿಕ ಸಂಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X