Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುರಸಭೆ ಅಭಿವೃದ್ಧಿಗೆ ಅನುದಾನ...

ಪುರಸಭೆ ಅಭಿವೃದ್ಧಿಗೆ ಅನುದಾನ ಮಂಜೂರಾತಿಯಲ್ಲಿ ಶಾಸಕರು ವಿಫಲ: ಮಾ. 26ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 March 2020 10:21 PM IST
share

ಪಡುಬಿದ್ರಿ : ಹೊಸದಾಗಿ ರಚನೆಯಾದ ಕಾಪು ಪುರಸಭೆ ಅಭಿವೃದ್ಧಿಗಾಗಿ ಅನುದಾನ ದೊರಕಿಸಿಕೊಡುವಲ್ಲಿ ಶಾಸಕರು ವೈಫಲ್ಯ ಕಂಡಿದ್ದಾರೆ ಎಂದು ಆರೋಪಿಸಿ ಕಾಪು ಬ್ಲಾಕ್ ಕಾಂಗ್ರೆಸ್, ಮಾ. 26ರಂದು ಪ್ರತಿಭಟನೆಯನ್ನು ಆಯೋಜಿಸಿದೆ.

ಕಾಪು ರಾಜೀವ್ ಭವನದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾಹಿತಿ ನೀಡಿ, ಅಂದು ರಾಜೀವ್ ಭವನದಿಂದ ಮೆರವಣಿಗೆ ಹೊರಟು ಪುರಸಭೆಯ ಎದುರಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.

ನನ್ನ ಅಧಿಕಾರಾವಧಿಯಲ್ಲಿ ಮಂಜೂರಾತಿ ದೊರಕಿದ ಅನುದಾನಗಳ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ಲಾಲಾಜಿ ಮೆಂಡನ್ ನೆರವೇರಿಸುತಿದ್ದಾರೆ ಎಂದು ಲೇವಡಿ ಮಾಡಿದ ಸೊರಕೆ, ಕಾಪು ಪುರಸಭೆಗೆ ಬಿಜೆಪಿ ಆರಂಭದಲ್ಲಿ ವಿರೋಧ ವ್ಯಕ್ತಪಡಿಸಿತ್ತು. ಲಾಲಾಜಿ ಮೆಂಡನ್ ಶಾಸಕರಾಗಿ ಬಂದ ಬಳಿಕ ನಗರ ಪ್ರಾಧಿಕಾರದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಚನಾವಣಾ ಸಂದರ್ಭದಲ್ಲಿ ಹೇಳಿತ್ತು. ಆದರೆ ಪರಿಹಾರ ಮಾತ್ರ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ನಗರ ಪ್ರಾಧಿಕಾರಕ್ಕೆ ಮಾಸ್ಟರ್‍ಪ್ಲಾನ್ ರಚಿಸಿ ಅದಕ್ಕೊಂದು ಬೈಲಾ ಮಾಡಿದಲ್ಲಿ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗುತಿತ್ತು. ನನ್ನ ಅವಧಿಯಲ್ಲಿ ಕಾಪು ಪುರಸಭೆಯ ಎಸ್‍ಸಿ, ಎಸ್‍ಟಿ ವಿವಿಧ ಕಾಮಗಾರಿಗಾಗಿ ಮಂಜೂರಾತಿ ದೊರಕಿತ್ತು. ಆದರೆ ಇಂದು ಈ ಅನುದಾನವನ್ನು ಬಳಸಿಕೊಳ್ಳದೆ ಅದನ್ನು ಕಾರ್ಕಳಕ್ಕೆ ವರ್ಗಾವಣೆ ಮಾಡಲಾ ಗಿದೆ. ಕಾಪು ಪುರಸಭೆಯಲ್ಲಿ ನಗರೋತ್ತಾನ ಕಾರ್ಯಕ್ರಮದ ಮೀನು ಮಾರುಕಟ್ಟೆ ಅಭಿವೃದ್ಧಿಗೆ 1.40 ಕೋಟಿ ರೂ. ಅನುದಾನ ಜೋಡಿಸಲಾಗಿತ್ತು. ಆ ಅನುದಾನವನ್ನು ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗಿದೆ. ಆದರೆ ಈ ರಸ್ತೆಯೂ ಕಳಪೆಯಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು. ನನ್ನ ಅವಧಿಯಲ್ಲಿ ಕಾಪು ಪುರಸಭೆ ವ್ಯಾಪ್ತಿಯ ಕುಡಿಯುವ ನೀರಿಗಾಗಿ 55 ಕೋಟಿ ರೂ. ಅನುದಾನ ಮಂಜೂರಾತಿ ದೊರಕಿತ್ತು. ಇದರಲ್ಲಿ ಸ್ಥಳೀಯರಿಗೂ ನೀರು ದೊರಕುವ ಯೋಜನೆ ರೂಪಿಸಲಾಗಿತ್ತು. ಆದರೆ ಇದನ್ನು ಇಂದಿನವರೆಗೂ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ. 5 ಕೋಟಿ ರೂ. ವೆಚ್ಚದಲ್ಲಿ ಎಲ್ಲೂರಿನಲ್ಲಿ ಕಸ ವಿಲೇವರಿ ಘಟಕಕ್ಕೆ ಮಂಜೂರಾತಿ ದೊರಕಿತ್ತು. ಆದರೆ ಸ್ಥಳೀಯರ ವಿರೋಧದ ಬಳಿಕ ಕಾರ್ಯ ಸ್ಥಗಿತಗೊಂಡಿತ್ತು ಈ ಬಗ್ಗೆ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿದೆ. ಮೂಳೂರಿನಲ್ಲಿ ವಸತಿರಹಿತರಿಗಾಗಿ 500 ಮನೆಗಳ ಮಂಜೂರಾಗಿತ್ತು. ಫ್ಲಾಟ್ ಮಾದರಿಯಲ್ಲಿ ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ಅದನ್ನು ಇದುವರೆಗೂ ಅನುಷ್ಠಾನಕ್ಕೆ ತಂದಿಲ್ಲ. ಕಾಪುವಿಗೆ 10ಕೋಟಿ ರೂ. ಮಿನಿ ವಿಧಾನಸೌಧಕ್ಕೆ ಹಣ ಮಂಜೂರಾತಿ ದೊರಕಿದ್ದರೂ ಅದನ್ನು ಬಿಡುಗಡೆ ಮಾಡಿಸಲು ಶಾಸಕರಿಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನವೀನ್‍ಚಂದ್ರ ಸುವರ್ಣ, ಮುಖಂಡರಾದ ದೇವಿಪ್ರಸಾದ್ ಶೆಟ್ಟಿ, ಪುರಸಭಾ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X