Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯಲ್ಲಿ ಕೊರೋನ ವೈರಸ್ ಶಂಕೆ:...

ಮಹಿಳೆಯಲ್ಲಿ ಕೊರೋನ ವೈರಸ್ ಶಂಕೆ: ಚಿಕ್ಕಮಗಳೂರಿನಲ್ಲಿ ಆತಂಕ

ವಾರ್ತಾಭಾರತಿವಾರ್ತಾಭಾರತಿ17 March 2020 10:39 PM IST
share
ಮಹಿಳೆಯಲ್ಲಿ ಕೊರೋನ ವೈರಸ್ ಶಂಕೆ: ಚಿಕ್ಕಮಗಳೂರಿನಲ್ಲಿ ಆತಂಕ

ಚಿಕ್ಕಮಗಳೂರು, ಮಾ.17: ಸೋಮವಾರ ಹಾಗೂ ಮಂಗಳವಾರ ಜಿಲ್ಲೆಯ ಇಬ್ಬರಲ್ಲಿ ಕೊರೋನ ವೈರಸ್ ಶಂಕೆ ವ್ಯಕ್ತವಾಗಿದ್ದು, ಈ ಪೈಕಿ ಒಂದು ಪ್ರಕರಣ ನೆಗೆಟಿವ್ ಆಗಿದ್ದು, ಮತ್ತೊಂದು ಪ್ರಕರಣದ ವೈದ್ಯಕೀಯ ಪರೀಕ್ಷೆಯ ವರದಿ ಇನ್ನಷ್ಟೇ ಬರಬೇಕಿದೆ.

ಒಂದು ವಾರದ ಹಿಂದೆ 32 ವರ್ಷದ ವ್ಯಕ್ತಿಯೊಬ್ಬರು ಸೌದಿ ಅರೇಬಿಯದಿಂದ ಜಿಲ್ಲೆಯ ಕೊಪ್ಪ ಪಟ್ಟಣಕ್ಕೆ ಹಿಂದಿರುಗಿದ್ದರು. ಈ ವ್ಯಕ್ತಿಗೆ 2 ದಿನಗಳ ಹಿಂದೆ ಜ್ವರ, ಕೆಮ್ಮು, ಶೀತ ಕಾಣಿಸಿಕೊಂಡಿತ್ತು. ಜ್ವರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸೋಮವಾರ ಕೊಪ್ಪ ಸರಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ಆಮಿಸಿದ್ದ ವೇಳೆ ಅವರನ್ನು ವೈದ್ಯರು ವಿಶೇಷ ವಾರ್ಡ್ ಗೆ ದಾಖಲಿಸಿ ರಕ್ತ ಹಾೂ ಗಂಟಲ ದ್ರವವನ್ನು ಶಿವಮೊಗ್ಗದದ ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳಿಸಿದ್ದರು. ಈ ವ್ಯಕ್ತಿಯ ವೈದ್ಯಕೀಯ ಪರೀಕ್ಷಾ ವರದಿ ಮಂಗಳವಾರ ವೈದ್ಯರ ಕೈಸೇರಿದ್ದು, ವರದಿಯಲ್ಲಿ ನೆಗೆಟಿವ್ ಅಂಶ ಬಂದಿದ್ದು, ಇದರಿಂದಾಗಿ ಕೊಪ್ಪ ತಾಲೂಕಿನ ಜನತೆ ವೈದ್ಯರು ಹಾೂ ವ್ಯಕ್ತಿಯ ಸಂಬಂಧಿರು ನಿರಾಳರಾಗಿದ್ದಾರೆ.

ಇನ್ನು ಮಂಗಳವಾರ ಬೆಳಗ್ಗೆ ಮತ್ತೊಬ್ಬ ಶಂಕಿತರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಜಿಲ್ಲೆಯ ತರೀಕೆರೆ ಪಟ್ಟಣದ ಮಹಿಳೆಯೊಬ್ಬರು ಕಳೆದ ಮಾ.13ರಂದು ಮಕ್ಕಾದಿಂದ ಪಟ್ಟಣಕ್ಕೆ ಆಗಮಿಸಿದ್ದರು. ಮಂಗಳವಾರ ಈ ಮಹಿಳೆಯಲ್ಲಿ ಜ್ವರ, ಕೆಮ್ಮು ಕಾಣಿಸಿಕೊಂಡಿದೆ. ಕೂಡಲೇ ಅವರು ಜಿಲ್ಲಾಸ್ಪತ್ರೆಗೆ ಆಗಮಿಸಿ ವಿಶೇಷ ವಾರ್ಡ್ ದಾಖಲಾಗಿದ್ದಾರೆ. ತಪಾಸಣೆ ಮಾಡಿರುವ ವೈದ್ಯರು ವ್ಯಕ್ತಿಯ ರಕ್ತ ಹಾೂ ಗಂಟಲ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ರವಾನಿಸಿದ್ದಾರೆ.

ಕೊರೋನ ವೈರಸ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ ವಿದೇಶದಿಂದ ಆಗಮಿಸಿದ್ದ ನಾಲ್ವರು ಶಂಕಿತರನ್ನು ವೈದ್ಯರು ತಪಾಸಣೆ ಮಾಡಿದ್ದು, ನಾಲ್ವರ ಪೈಕಿ ಮೂವರು ಶಂಕಿತರಲ್ಲಿ ಕೊರೋನ ವೈರಸ್ ಸೋಂಕು ಇಲ್ಲ ಎಂಬುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದ್ದು, ಇನ್ನು ಓರ್ವರ ವೈದ್ಯಕೀಯ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ.

ಕೊರೋನ ವೈರಸ್ ಸೋಂಕು ಶಂಕಿತರ ಪಟ್ಟಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸಾರ್ವಜನಿಕರು ತೀವ್ರ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಈ ಸಂಬಂಧ ಜಿಲ್ಲಾಳಿತ ಹಾೂ ಆರೋಗ್ಯ ಇಲಾಖೆ ಸಾರ್ವಜನಿರಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಸಮರೋಪಾದಿಯಲ್ಲಿ ಮಾಡುತ್ತಿದ್ದು, ಈ ಮಧ್ಯೆ ಜಿಲ್ಲಾಡಳಿತ ವಿದೇಶದಿಂದ ಆಗಮಿಸಿರುವವರ ಮಾಹಿತಿ ಕಲೆ ಹಾಕುತ್ತಿದ್ದು, ಇಂತಹವರನ್ನು ಗುರುತಿಸಿ ಖುದ್ದು ಅವರ ಮನೆಗಳಿಗೆ ತೆರಳಿ ತಪಾಸಣೆ ಮಾಡುವ, ಜ್ವರ, ಶೀತ, ಕೆಮ್ಮಿನಿಂದ ಬಳಲುತ್ತಿದ್ದರೆ ಆಸ್ಪತ್ರೆಗೆ ದಾಖಲಿಸುವ ಕೆಲಸವನ್ನು ಮಾಡುತ್ತಿದೆ.

ಜಿಲ್ಲೆಯಲ್ಲಿ ಇದುವರೆಗೆ ವಿದೇಶದಿಂದ ಹಿಂದಿರುಗಿದ 48 ಜನರ ಮೇಲೆ ನಿಗಾವಹಿಸಲಾಗಿದೆ. ಈ ಪೈಕಿ 15 ಮಂದಿ ಮಂಗಳವಾರ ನೋಂದಣಿ ಮಾಡಿಕೊಂಡಿದ್ದು, ಇವರ ಮೇಲೆ ನಿಗಾವಹಿಸಿದ್ದು, ಮನೆಯಿಂದ ಹೊರ ಹೋಗದಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಶಂಕಿತ ಪ್ರಕರಣ ದಾಖಲಾಗಿದೆ. ಈ ಪೈಕಿ ಮೂವರದ್ದು, ನೆಗೆಟಿವ್ ವರದಿ ಬಂದಿದೆ. ಓರ್ವ ವ್ಯಕ್ತಿಯ ವರದಿ ಇನ್ನಷ್ಟೇ ಬರಬೇಕಿದೆ. ಸದ್ಯ ನಗರದ ಐಸೋಲೇಶನ್ ವಾರ್‌ನಲ್ಲಿ ಓರ್ವ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.
-ಡಾ.ಬಗಾದಿ ಗೌತಮ್, ಜಿಲ್ಲಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X