Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊಸ ಮರಳು ನೀತಿ ಜಾರಿಗೆ ಕ್ರಮ: ಸಚಿವ...

ಹೊಸ ಮರಳು ನೀತಿ ಜಾರಿಗೆ ಕ್ರಮ: ಸಚಿವ ಸಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ17 March 2020 11:43 PM IST
share
ಹೊಸ ಮರಳು ನೀತಿ ಜಾರಿಗೆ ಕ್ರಮ: ಸಚಿವ ಸಿ.ಸಿ.ಪಾಟೀಲ್

ಬೆಂಗಳೂರು, ಮಾ.17: ರಾಜ್ಯದಲ್ಲಿನ ನಿರ್ಮಾಣ ಕಾಮಗಾರಿಗಳಿಗೆ ಕೈಗೆಟಕುವ ದರದಲ್ಲಿ ಮತ್ತು ನಿಯಮಿತವಾಗಿ ಮರಳು ದೊರಕುವಂತೆ ಮಾಡಲು ಹೊಸ ಮರಳು ನೀತಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ನಿಯಮ 69ರ ಮೇರೆಗೆ ಚಿತ್ರದರ್ಗು ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಕೆರೆ ಕುಂಟೆಗಳಲ್ಲಿ ಮರಳು ಮಿಶ್ರಿತ ಮಣ್ಣನ್ನು ಉಪಯೋಗಿಸಲು, ಸಾಗಾಣಿಕೆ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಹಾಗೂ ಕೂಲಿ ಕಾರ್ಮಿಕರ ಮೇಲೆ ನಡೆಯುತ್ತಿರುವ ಪೊಲೀಸ್ ದೌರ್ಜನ್ಯದ ಬಗ್ಗೆ ನಡೆದ ಚರ್ಚೆಗೆ ಅವರು ಉತ್ತರಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಸಣ್ಣ ಹಳ್ಳ, ತೊರೆ, ಕೆರೆಗಳಲ್ಲಿನ ಲಭ್ಯವಿರುವ ಮರಳನ್ನು ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಂತ ಮನೆ ನಿರ್ಮಾಣ, ಶೌಚಾಲಯ ನಿರ್ಮಾಣ ಮತ್ತು ಇತರೆ ಸಮುದಾಯ ಭಾಗಿತ್ವ ಯೋಜನೆಗಳಿಗೆ ಉಪಯೋಗಿಸಿಕೊಳ್ಳಲು ಹಾಗೂ ಮರಳನ್ನು ಟ್ರಾಕ್ಟರ್, ಎತ್ತಿನಗಾಡಿ, ಲಘು ವಾಹನಗಳಲ್ಲಿ ಮಾತ್ರ ಸಾಗಾಣಿಕೆಯನ್ನು ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಹೂಳು ತೆಗೆಯುವ ಕಾರ್ಯಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯುವ ಅಗತ್ಯತೆ ಇಲ್ಲ. ಆದರೆ, ಕೆರೆಯ ಹೂಳಿನಲ್ಲಿ ಮರಳಿದ್ದಲ್ಲಿ, ಆ ಮರಳನ್ನು ತೆಗೆಯುವುದಕ್ಕೆ ನಿಯಮಾವಳಿಗಳಲ್ಲಿ ಅವಕಾಶವಿಲ್ಲ ಎಂದು ಸಿ.ಸಿ.ಪಾಟೀಲ್ ತಿಳಿಸಿದರು.

2016-17ನೆ ಸಾಲಿನಿಂದ 2019-20ನೆ ಸಾಲಿನ ಜನವರಿ 2020ರ ಅಂತ್ಯದವರೆಗೆ ಹೊಸದುರ್ಗ ತಾಲೂಕು ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯ ಒಟ್ಟು 242 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 88 ಪ್ರಕರಣಗಳಿಂದ ಒಟ್ಟು 11.44 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಹೇಳಿದರು.

ಹರಾಜು ಮೂಲಕ 237 ಮರಳು ಗುತ್ತಿಗೆ ಮಂಜೂರಾಗಿವೆ. ಸರಕಾರಿ ಕಾಮಗಾರಿಗಳಿಗೆ 18 ಮರಳ ಬ್ಲಾಕ್‌ಗಳನ್ನು ಮೀಸಲಿರಿಸಲಾಗಿದೆ. ಪಟ್ಟಾ ಜಮೀನಿನಲ್ಲಿ ಮರಳು ಗಣಿಗಾರಿಕೆಗಾಗಿ 44 ಪರವಾನಗಿಗಳನ್ನು ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X