Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 100 ಮಂದಿಯ ಕೋವಿಡ್ ಟೆಸ್ಟ್ ಫಲಿತಾಂಶದ...

100 ಮಂದಿಯ ಕೋವಿಡ್ ಟೆಸ್ಟ್ ಫಲಿತಾಂಶದ ನಿರೀಕ್ಷೆಯಲ್ಲಿ ಪಿಸಿಬಿ

ವಾರ್ತಾಭಾರತಿವಾರ್ತಾಭಾರತಿ18 March 2020 10:56 PM IST
share

ಕರಾಚಿ, ಮಾ.18: ರದ್ದುಗೊಂಡಿರುವ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ(ಪಿಎಸ್‌ಎಲ್) ಭಾಗಿಯಾಗಿದ್ದ ಆಟಗಾರರು ಸೇರಿದಂತೆ 100 ಮಂದಿಯ ಕೋವಿಡ್-19 ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಬುಧವಾರ ತಿಳಿಸಿದೆ.

 ವಿದೇಶಿ ಆಟಗಾರನಲ್ಲಿ ಕೊರೋನ ವೈರಸ್ ಸೋಂಕಿನ ಲಕ್ಷಣ ಕಾಣಿಸಿದೆ ಎಂದು ಕ್ರಿಕೆಟ್ ಮಂಡಳಿ ಬಹಿರಂಗಪಡಿಸಿದ ಬೆನ್ನಲ್ಲೇ ಪಿಎಸ್‌ಎಲ್ ಟೂರ್ನಿಯನ್ನು ಮಂಗಳವಾರ ರದ್ದುಪಡಿಸ ಲಾಗಿತ್ತು. ಇಂಗ್ಲೆಂಡ್‌ನ ಕ್ರಿಕೆಟಿಗ ಅಲೆಕ್ಸ್ ಹೇಲ್ಸ್ ಗೆ ಕೊರೋನ ವೈರಸ್ ಲಕ್ಷಣ ಕಾಣಿಸಿಕೊಂಡಿದೆ ಎಂದು ಪಾಕ್ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ವೀಕ್ಷಕ ವಿವರಣೆಗಾರ ರಮೀಝ್ ರಾಝಾ ಬಹಿರಂಗಪಡಿಸಿದ್ದಾರೆ.

ಸ್ವದೇಶಕ್ಕೆ ವಾಪಸಾದ ಬಳಿಕ ನನಗೆ ಜ್ವರ ಹಾಗೂ ಒಣ ಕೆಮ್ಮು ಕಾಣಿಸಿಕೊಂಡಿದ್ದು, ಸ್ವತಃ ಪ್ರತ್ಯೇಕವಾಗಿ ದ್ದೇನೆ ಎಂದು ಹೇಲ್ಸ್ ಪ್ರತಿಕ್ರಿಯೆ ನೀಡಿದ್ದಾರೆ.

 ನಾವು ಸುಮಾರು 100 ಮಂದಿಯ ಕೊರೋನ ವೈರಸ್ ಪರೀಕ್ಷೆಯ ಫಲಿತಾಂಶವನ್ನು ಇಂದು ರಾತ್ರಿ ಅಥವಾ ನಾಳೆ ಬರುವ ನಿರೀಕ್ಷೆಯಲ್ಲಿದ್ದೇವೆ. ಈ ತನಕ ಪರೀಕ್ಷೆಯ ಫಲಿತಾಂಶ ಬಂದಿಲ್ಲ. ಸೆಮಿ ಫೈನಲ್ ತಂಡಗಳ ಆಟಗಾರರು ಹಾಗೂ ಅಧಿಕಾರಿಗಳು, ಅಂಪೈರ್‌ಗಳು, ವೀಕ್ಷಕವಿವರಣೆಗಾರರು ಹಾಗೂ ಪಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸದಸ್ಯರುಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಖಚಿತಪಡಿಸಲು ನಾವು ಎಲ್ಲ ರೀತಿಯ ಮುನ್ನೆಚ್ಚರಿಕಾ ಹೆಜ್ಜೆ ಇಟ್ಟಿದ್ದೇವೆ ಎಂದು ಪಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

ಲಾಹೋರ್ ಹಾಗೂ ಕರಾಚಿಯಲ್ಲಿರುವ ತನ್ನ ಕಚೇರಿಗಳನ್ನು ಸೋಮವಾರದ ತನಕ ಬಂದ್ ಮಾಡಲಾಗುವುದು ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪಿಸಿಬಿ ಘೋಷಿಸಿದೆ.

 ಪಾಕಿಸ್ತಾನ ಸೂಪರ್ ಲೀಗ್‌ನ್ನು ಮುಂದೂಡದೇ ಇರುವುದಕ್ಕೆ ಪಿಸಿಬಿ ತೀವ್ರ ಟೀಕೆಗೆ ಗುರಿಯಾಗಿತ್ತು. ‘‘ಸರಕಾರ ಹಾಗೂ ಆರೋಗ್ಯ ಏಜೆನ್ಸಿಗಳನ್ನು ಸಂಪರ್ಕಿಸಿದ ಬಳಿಕ ನಾವು ಎಲ್ಲ ನಿರ್ಧಾರಗಳನ್ನು ಕೈಗೊಳ್ಳುತ್ತೇವೆ. ಕಳೆದ ವಾರ ಸ್ವದೇಶಕ್ಕೆ ವಾಪಸಾಗಿದ್ದ ಇಂಗ್ಲೆಂಡ್ ಕ್ರಿಕೆಟಿಗ ಹೇಲ್ಸ್ ಸಂದೇಶವನ್ನು ನೋಡಿದ ತಕ್ಷಣ ನಾವು ಪ್ರಾಮಾಣಿಕ ಕ್ರಮ ಕೈಗೊಂಡಿದ್ದು, ಎಲ್ಲರ ಸುರಕ್ಷತೆಗಾಗಿ ಎಲ್ಲ ರೀತಿಯ ಶಿಷ್ಟಾಚಾರವನ್ನು ಅನುಸರಿಸಿದ್ದೇವೆ’’ ಎಂದು ಪಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪಿಸಿಬಿಯು ಕನಿಷ್ಠ ನಾಲ್ಕು ಪಿಎಸ್‌ಎಲ್ ಪಂದ್ಯಗಳನ್ನು ಕರಾಚಿಯ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರೇಕ್ಷಕರಿಲ್ಲದೆ ನಡೆಸಿದ್ದು, ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯವನ್ನು ಇದೇ ರೀತಿ ಆಯೋಜಿಸಲು ಯೋಜನೆ ರೂಪಿಸಿದೆ. ಇದರಿಂದ ಎಷ್ಟು ಆದಾಯ ನಷ್ಟವಾಗಲಿದೆ ಎಂದು ಇನ್ನಷ್ಟೇ ಅಂದಾಜಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X